ನರೇಂದ್ರ ಮೋದಿ ಪತ್ನಿಗೆ ಎಸ್ ಪಿಜಿ ರಕ್ಷಣೆ
ನವದೆಹಲಿ, ಮೇ 12: ಬಿಜೆಪಿಯ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ವಡೋದರಾದಲ್ಲಿ ನಾಮಪತ್ರ ಸಲ್ಲಿಸುವಾಗ 'ತಾನು ಮದುವೆಯಾಗಿದ್ದು, ಪತ್ನಿಯ ಹೆಸರು ಜಶೋದಾಬೆನ್' ಎಂದು ಘೋಷಿಸಿದ್ದೇ ಮುಂದೆ ಕೇಂದ್ರ ಸರಕಾರಕ್ಕೆ ಪೀಕಲಾಟಕ್ಕೆ ಇಟ್ಟುಕೊಳ್ಳುವ ಸಾಧ್ಯತೆಯಿದೆ.
ಎಲ್ಲವೂ ಅಂದುಕೊಂಡಂತೆ ನಡೆದರೆ ಗುಜರಾತಿನ ಹಾಲಿ ಮುಖ್ಯಮಂತ್ರಿ ನರೇಂದ್ರ ದಾಮೋದರದಾಸ್ ಮೋದಿ ಅವರು ಮೇ 16ರ ನಂತರ ಪ್ರಧಾನಿಯಾದರೆ ಕೇಂದ್ರ ಸರಕಾರವು ಪ್ರಸ್ತುತ ಗುಜರಾತಿನ ಗ್ರಾಮವೊಂದರಲ್ಲಿ ಜೀವನ ನಡೆಸುತ್ತಿರುವ ಜಶೋದಾಬೆನ್ ಅವರಿಗೆ ಶಿಷ್ಟಾಚಾರದ ಪ್ರಕಾರ ಎಸ್ ಪಿಜಿ ಭದ್ರತೆ ಒದಗಿಸುವುದು ಅನಿವಾರ್ಯವಾಗುತ್ತದೆ.
ನರೇಂದ್ರ ಮೋದಿ ಪ್ರಧಾನ ಮಂತ್ರಿಯಾದರೆ ಸಾಂಸಾರಿಕ ಜೀವನದಿಂದ ದೂರವಾಗಿದ್ದರೂ ಪತ್ನಿ ಜಶೋದಾಬೆನ್ ಅವರಿಗೆ ಅತಿ ಗಣ್ಯ ವ್ಯಕ್ತಿಗಳಿಗೆ ಒದಗಿಸುವ ವಿಶೇಷ ರಕ್ಷಣಾ ಪಡೆ (SPG) ಭದ್ರತೆ ಸಿಗಲಿದೆ. ನರೇಂದ್ರ ಮೋದಿ ತಮ್ಮ 16ನೇ ವರ್ಷದಲ್ಲೇ ಜಶೋದಾಬೆನ್ ಅವರನ್ನು ವಿವಾಹವಾಗಿದ್ದರು ಎಂಬುದು ಗಮನಾರ್ಹ.

ವೈಯಕ್ತಿಕ ಕಾರಣಗಳಿಂದ ಸಾಂಸಾರಿಕ ಜೀವನದಿಂದ ಪರಸ್ಪರ ಇಬ್ಬರೂ ದೂರವಾಗಿದ್ದರು. ಇದೀಗ ನರೇಂದ್ರ ಮೋದಿ ಅವರು ಜಶೋದಾಬೆನ್ ಅವರನ್ನು ವಿವಾಹವಾಗಿರುವುದಾಗಿ ಒಪ್ಪಿಕೊಂಡಿರುವುದು ಜಗಜ್ಜಾಹೀರಾಗಿದೆ. ಗುಜರಾತಿನ ಮೆಹಸಾನ ಜಿಲ್ಲೆಯ ಬ್ರಹ್ಮನವಾಡ ಗ್ರಾಮದಲ್ಲಿ ಜಶೋದಾಬೆನ್ ಅವರು ಸಾಮಾನ್ಯರಂತೆ ತಮ್ಮ ಸೋದರರೊಂದಿಗೆ ಜೀವನ ಸಾಗಿಸುತ್ತಿದ್ದಾರೆ.
ನರೇಂದ್ರ ಮೋದಿ ಅವರು ಉಗ್ರರ ಹಿಟ್ ಲಿಸ್ಟ್ ನಲ್ಲಿರುವುದರಿಂದ ಸಮಾಜಘಾತುಕ ಶಕ್ತಿಗಳಿಂದ ಜಶೋದಾಬೆನ್ ಅವರಿಗೆ ಪ್ರಾಣ ಬೆದರಿಕೆಯಿರುವ ಸಾಧ್ಯತೆ ಇದೆ. ಹೀಗಾಗಿ ಕೇಂದ್ರ ಗೃಹ ಇಲಾಖೆ ಈಗಾಗಲೇ ಮೋದಿ ಅವರ ಪತ್ನಿಗೆ ಎಸ್ ಪಿಜಿ ಒದಗಿಸಲು ಗಂಭೀರ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.
ಗೃಹ ಇಲಾಖೆ ಮಾರ್ಗಸೂಚಿ ಪ್ರಕಾರ ಎಸ್ ಪಿಜಿ ಭದ್ರತೆಯನ್ನು ದೇಶದ ಪ್ರಥಮ ಪ್ರಜೆ ರಾಷ್ಟ್ರಪತಿ, ಉಪ ರಾಷ್ಟ್ರಪತಿ, ಪ್ರಧಾನ ಮಂತ್ರಿ ಹಾಗೂ ಅವರ ಕುಟುಂಬದ ಸದಸ್ಯರಿಗೆ ಮಾತ್ರ ಇದನ್ನು ಒದಗಿಸಲಾಗುತ್ತದೆ. SPG, ದೇಶದಲ್ಲೇ ಅತ್ಯುನ್ನತ ಭದ್ರತಾ ವ್ಯವಸ್ಥೆಯನ್ನು ಹೊಂದಿದೆ.
ನಿವೃತ್ತ ಶಿಕ್ಷಕಿಯಾಗಿರುವ ಜಶೋದಾಬೆನ್ ಅವರು ತಮ್ಮ ಪತಿ ನರೇಂದ್ರ ಮೋದಿ ದೇಶದ ಪ್ರಧಾನಿಯಾಗಲಿ ಎಂದು ಚಾರ್ ಧಾಮ್ ವ್ರತ ನಡೆಸುತ್ತಿದ್ದಾರೆ. ಬೆಳಗ್ಗೆ ಹಾಲು, ಸಂಜೆ ಒಂದಿಷ್ಟು ಆಹಾರ ಹೊರತು ಪಡಿಸಿದರೆ ಉಳಿದ ಸಮಯದಲ್ಲಿ ಏನನ್ನೂ ಸೇವಿಸದೆ ಮೌನ ವ್ರತ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications