ಸ್ಪಿನ್ನರ್ ಮುರಳಿ ಕಾರ್ತಿಕ್ ಕ್ರಿಕೆಟಿಗೆ ವಿದಾಯ
ಬೆಂಗಳೂರು, ಜೂ.15: ಸ್ಪಿನ್ ಬೌಲರ್ ಮುರಳಿ ಕಾರ್ತಿಕ್ ಅವರು ಎಲ್ಲಾ ಬಗೆಯ ಸ್ಪರ್ಧಾತ್ಮಕ ಕ್ರಿಕೆಟಿಗೆ ವಿದಾಯ ಹೇಳಿದ್ದಾರೆ. 37 ವರ್ಷ ವಯಸ್ಸಿನ ಸ್ಟೈಲಿಷ್ ಬೌಲರ್ ಕಾರ್ತಿಕ್ ಅವರು ಕ್ರಿಕೆಟ್ ವೃತ್ತಿ ಬದುಕನ್ನು ಅಂತ್ಯಗೊಳಿಸುತ್ತಿದ್ದೇನೆ ಎಂದು ಶನಿವಾರ ಘೋಷಿಸಿದ್ದಾರೆ.
'ನಾನು ಎಲ್ಲ ಮಾದರಿಯ ಸ್ಪರ್ಧಾತ್ಮಕ ಕ್ರಿಕೆಟ್ಗೆ ವಿದಾಯ ಹೇಳಬಯಸುತ್ತೇನೆ. ಈ ವರ್ಷ ಐಪಿಎಲ್ ಪಂದ್ಯಾವಳಿಯಲ್ಲಿ ನಾನು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಪ್ರತಿನಿಧಿಸಿದ್ದೆ. ನನ್ನನ್ನು ಬೆಂಬಲಿಸಿದ ಎಲ್ಲರಿಗೂ ನಾನು ಧನ್ಯವಾದ ಅರ್ಪಿಸುತ್ತೇನೆ' ಎಂದು ಪತ್ರಿಕಾಗೋಷ್ಠಿಯಲ್ಲಿ ನುಡಿದರು.
ತಮಿಳುನಾಡು ಮೂಲದ ಕಾರ್ತಿಕ್ ಅವರು 1999ರಿಂದ 2007ರವರೆಗೆ ಭಾರತ ತಂಡದ ಪರ 8 ಟೆಸ್ಟ್ 1 ಟ್ವೆಂಟಿ ಮತ್ತು 37 ಏಕದಿನ ಪಂದ್ಯಗಳನ್ನಾಡಿದ್ದಾರೆ. 2000ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಟೆಸ್ಟ್ ಪಂದ್ಯವಾಡಿದ್ದರು. ನವೆಂಬರ್ 2004ರಲ್ಲಿ ಅದೇ ತಂಡದ ವಿರುದ್ಧ ಕೊನೆ ಟೆಸ್ಟ್ ಆಡಿದ್ದು ವಿಶೇಷ.

ಟೆಸ್ಟ್ನಲ್ಲಿ 24 ವಿಕೆಟ್ ಪಡೆದರೆ, ಏಕದಿನ ಕ್ರಿಕೆಟ್ನಲ್ಲಿ 37 ವಿಕೆಟ್ ಕಬಳಿಸಿದ್ದಾರೆ. ಮಾರ್ಚ್ 16,2002ರಲ್ಲಿ ಹೈದರಾಬಾದಿನಲ್ಲಿ ಜಿಂಬಾಬ್ವೆ ವಿರುದ್ಧ ಮೊದಲ ಒಡಿಐ ಆಡಿದ್ದರು. ಕೊನೆ ಒಡಿಐ ಪಾಕಿಸ್ತಾನ ವಿರುದ್ಧ ನವೆಂಬರ್ 18,2007.
203 ಪ್ರಥಮ ದರ್ಜೆ ಕ್ರಿಕೆಟ್ ಪಂದ್ಯಗಳನ್ನು ಆಡಿರುವ ಕಾರ್ತಿಕ್ ಒಟ್ಟು 644 ವಿಕೆಟ್ ಪಡೆದಿದ್ದಾರೆ. ಇದರಲ್ಲಿ ಇಂಗ್ಲೆಂಡ್ ಕೌಂಟಿ ತಂಡಗಳಾದ ಮಿಡ್ಲ್ಸೆಕ್ಸ್, ಸರ್ರೆ ಹಾಗೂ ಸಮರ್ಸೆಟ್ ತಂಡಗಳ ಪರ ಆಡಿದ ಪಂದ್ಯಗಳಲ್ಲಿ ಪಡೆದ ವಿಕೆಟ್ಗಳೂ ಇದರಲ್ಲಿ ಸೇರಿವೆ.
ಮುರಳಿ ಕಾರ್ತಿಕ್ ಬಗ್ಗೆ ಜಹೀರ್ ಖಾನ್ ಹಾಗೂ ಯುವರಾಜ್ ಸಿಂಗ್ ಟ್ವೀಟ್:
Congratulations @kartikmurali on a fabulous career !! Spinner with aggression of a fast bowler ;) .Best wishes to u n family! Cheers fella!
— zaheer khan (@ImZaheer) June 14, 2014 Well bowled@kartikmurali Played with passion, pride and commitment Served Indian cricket for 26 years Farewell my brother U will be missed
— yuvraj singh (@YUVSTRONG12) June 14, 2014 ಇತ್ತ್ತೀಚೆಗೆ ಮುಕಾಯವಾದ ಇಂಡಿಯನ್ ಪ್ರಿಮಿಯರ್ ಲೀಗ್ 7 ರಲ್ಲಿ ಕಿಂಗ್ಸ್ XI ಪಂಜಾಬ್ ತಂಡದ ಪರ ಆಡಿದ್ದ ಕಾರ್ತಿಕ್, ಕೊನೆ ಪಂದ್ಯ ಮೇ 7, 2014ರಂದು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಆಡಿದ್ದರು. ಐಪಿಎಲ್ ನಲ್ಲಿ ಕಿಂಗ್ಸ್ XI ಪಂಜಾಬ್ ತಂಡ ಸೇರುವುದಕ್ಕೂ ಮೊದಲು ಕೋಲ್ಕತ್ತಾ ನೈಟ್ ರೈಡರ್ಸ್, ಪುಣೆ ವಾರಿಯರ್ಸ್ ಹಾಗೂ ರಾಯ ಚಾಲೆಂಜರ್ಸ್ ಬೆಂಗಳೂರು ತಂಡಗಳಲ್ಲಿ ಕಾರ್ತಿಕ್ ಆಡಿದ್ದರು.
ಸೆಪ್ಟೆಂಬರ್ 11,1976ರಲ್ಲಿ ಚೆನ್ನೈನಲ್ಲಿ ಜನಿಸಿದ ಕಾರ್ತಿಕ್ ಅವರು ರಾಷ್ಟ್ರೀಯ ತಂಡಕ್ಕೆ ಪುನಃ ಸೇರಲು ಹಲವು ಬಾರಿ ಪ್ರಯತ್ನಿಸಿ ವಿಫಲರಾಗಿದ್ದರು. ಅನಿಲ್ ಕುಂಬ್ಳೆ, ಹರ್ಭಜನ್ ಸಿಂಗ್ ಜತೆ ಮುರಳಿ ಕಾರ್ತಿಕ್ ಸ್ಪಿನ್ ವಿಭಾಗದಲ್ಲಿ ಟೀಂ ಇಂಡಿಯಾದಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದನ್ನು ಅಭಿಮಾನಿಗಳು ಇಂದಿಗೂ ಸ್ಮರಿಸುತ್ತಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications