ಶ್ರೀದೇವಿಯದು ಸಹಜ ಸಾವಲ್ಲ, ಕೊಲೆ: ಸುಬ್ರಮಣಿಯನ್ ಸ್ವಾಮಿ
Recommended Video

ನವದೆಹಲಿ, ಫೆಬ್ರವರಿ 27: ಹಿರಿಯ ನಟಿ ಶ್ರೀದೇವಿ ಅವರನ್ನು ಕೊಲೆ ಮಾಡಲಾಗಿದೆ ಎಂದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಹೇಳಿ ಉರಿಯುವ ಬೆಂಕಿಗೆ ತುಪ್ಪ ಸುರಿದಿದ್ದಾರೆ.
ಅಷ್ಟೇ ಅಲ್ಲ, ಶ್ರೀದೇವಿ ಸಾವಿನ ಬಗ್ಗೆ ಮಾತನಾಡುತ್ತ, ಭೂಗತ ದೊರೆ ದಾವೂದ್ ಇಬ್ರಾಹಿಂ ಅವರನ್ನೂ ಈ ವಿಷಯದಲ್ಲಿ ಎಳೆದು ತಂದು, ವಿವಾದ ಭುಗಿಲೇಳುವಂತೆ ಮಾಡಿದ್ದಾರೆ ಸುಬ್ರಮಣಿಯನ್ ಸ್ವಾಮಿ!

ಶ್ರೀದೇವಿ ಸಾವಿನ ಕುರಿತು ಸಮಗ್ರ ತನಿಖೆ ನಡೆಯಬೇಕು. ಇದರೊಂದಿಗೆ ಸಿನೆಮಾ ನಟಿಯರು ಮತ್ತು ದಾವೂದ್ ಇಬ್ರಾಹಿಂ ನಡುವಿನ ಅನೈತಿಕ ಸಂಬಂಧಗಳ ಕುರಿತೂ ತನಿಖೆ ನಡೆಯಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
'ಮಾಧ್ಯಮಗಳು ಹೇಳುತ್ತಿರುವುದೆಲ್ಲ ಸತ್ಯವಲ್ಲ. ಮಾಧ್ಯಮಗಳಲ್ಲಿ ಬರುತ್ತಿರುವ ಹೇಳಿಕೆಗಳು ಸ್ಥಿರವಾಗಿಯೂ ಇಲ್ಲ. ಆದರೆ ಯಾವಾಗಲೂ ನಶೆ ಏರುವಂಥ ಮದ್ಯ ಸೇವಿಸದ ಶ್ರೀದೇವಿ ಅವರ ದೇಹದಲ್ಲಿ ಮದ್ಯ ಸೇರಿದ್ದು ಹೇಗೆ? ಯಾರಾದರೂ ಒತ್ತಾಯ ಪೂರ್ವಕವಾಗಿ ಆಕೆಗೆ ಮದ್ಯ ಕುಡಿಸಿದರೆ? ಸಿಸಿಟಿವಿಗೆ ಏನಾಗಿತ್ತು? ಅದರ ಬಗ್ಗೆ ಯಾರೂ ಮಾತನಾಡುತ್ತಿಲ್ಲ' ಎಂದು ಅವರು ಪ್ರಶ್ನಿಸಿದ್ದಾರೆ.
ಮುಂಬೈ ಹೊಟೇಲ್ ವೊಂದರಲ್ಲಿ ಫೆ.24ರಂದು ಶ್ರೀದೇವಿಯವರು ಹೃದಯಾಘಾತದಿಂದ ಅಸುನೀಗಿದರು ಎಂದು ಮೊದಲು ವರದಿಯಾಗಿತ್ತು. ಆದರೆ ಈಗ ಅವರು ಬಾತ್ ಟಬ್ ನಲ್ಲಿ ಮುಳುಗಿ ಸತ್ತಿದ್ದು ಎಂದು ವೈದ್ಯಕೀಯ ವರದಿಗಳು ತಿಳಿಸಿವೆ. ಬಾಲಿವುಡ್ ಅನ್ನು ಸುಮಾರು ಎರಡೂವರೆ ದಶಕಗಳ ಕಾಲ ಆಳಿದ ಶ್ರೀದೇವಿ ಅವರ ಸಾವು ಇದೀಗ ಮತ್ತಷ್ಟು ನಿಗೂಢತೆ ಸೃಷ್ಟಿಸಿದೆ.
-
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Monalisa: ಕುಂಭಮೇಳ ವೈರಲ್ ಸುಂದರಿ ಮೊನಾಲಿಸಾ ದಂಪತಿಗೆ ಬಿಗ್ ರಿಲೀಫ್: ಬಂಧನಕ್ಕೆ ತಡೆ ನೀಡಿದ ಕೇರಳ ಹೈಕೋರ್ಟ್ -
Siddaramaiah: ಜನರ ದಾರಿತಪ್ಪಿಸುವ ಬಿಜೆಪಿಯನ್ನು ನಂಬಬೇಡಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರಣವೇನು -
Cabinet Reshuffle: ಶಾಸಕರ ದೆಹಲಿಗೆ ಭೇಟಿ ತಪ್ಪಿಲ್ಲ, ಸಂಪುಟ ಪುನರ್ರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಿದ್ದರಾಮಯ್ಯ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್












Click it and Unblock the Notifications