ಶ್ರೀದೇವಿಯದು ಸಹಜ ಸಾವಲ್ಲ, ಕೊಲೆ: ಸುಬ್ರಮಣಿಯನ್ ಸ್ವಾಮಿ
Recommended Video

ನವದೆಹಲಿ, ಫೆಬ್ರವರಿ 27: ಹಿರಿಯ ನಟಿ ಶ್ರೀದೇವಿ ಅವರನ್ನು ಕೊಲೆ ಮಾಡಲಾಗಿದೆ ಎಂದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಹೇಳಿ ಉರಿಯುವ ಬೆಂಕಿಗೆ ತುಪ್ಪ ಸುರಿದಿದ್ದಾರೆ.
ಅಷ್ಟೇ ಅಲ್ಲ, ಶ್ರೀದೇವಿ ಸಾವಿನ ಬಗ್ಗೆ ಮಾತನಾಡುತ್ತ, ಭೂಗತ ದೊರೆ ದಾವೂದ್ ಇಬ್ರಾಹಿಂ ಅವರನ್ನೂ ಈ ವಿಷಯದಲ್ಲಿ ಎಳೆದು ತಂದು, ವಿವಾದ ಭುಗಿಲೇಳುವಂತೆ ಮಾಡಿದ್ದಾರೆ ಸುಬ್ರಮಣಿಯನ್ ಸ್ವಾಮಿ!

ಶ್ರೀದೇವಿ ಸಾವಿನ ಕುರಿತು ಸಮಗ್ರ ತನಿಖೆ ನಡೆಯಬೇಕು. ಇದರೊಂದಿಗೆ ಸಿನೆಮಾ ನಟಿಯರು ಮತ್ತು ದಾವೂದ್ ಇಬ್ರಾಹಿಂ ನಡುವಿನ ಅನೈತಿಕ ಸಂಬಂಧಗಳ ಕುರಿತೂ ತನಿಖೆ ನಡೆಯಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
'ಮಾಧ್ಯಮಗಳು ಹೇಳುತ್ತಿರುವುದೆಲ್ಲ ಸತ್ಯವಲ್ಲ. ಮಾಧ್ಯಮಗಳಲ್ಲಿ ಬರುತ್ತಿರುವ ಹೇಳಿಕೆಗಳು ಸ್ಥಿರವಾಗಿಯೂ ಇಲ್ಲ. ಆದರೆ ಯಾವಾಗಲೂ ನಶೆ ಏರುವಂಥ ಮದ್ಯ ಸೇವಿಸದ ಶ್ರೀದೇವಿ ಅವರ ದೇಹದಲ್ಲಿ ಮದ್ಯ ಸೇರಿದ್ದು ಹೇಗೆ? ಯಾರಾದರೂ ಒತ್ತಾಯ ಪೂರ್ವಕವಾಗಿ ಆಕೆಗೆ ಮದ್ಯ ಕುಡಿಸಿದರೆ? ಸಿಸಿಟಿವಿಗೆ ಏನಾಗಿತ್ತು? ಅದರ ಬಗ್ಗೆ ಯಾರೂ ಮಾತನಾಡುತ್ತಿಲ್ಲ' ಎಂದು ಅವರು ಪ್ರಶ್ನಿಸಿದ್ದಾರೆ.
ಮುಂಬೈ ಹೊಟೇಲ್ ವೊಂದರಲ್ಲಿ ಫೆ.24ರಂದು ಶ್ರೀದೇವಿಯವರು ಹೃದಯಾಘಾತದಿಂದ ಅಸುನೀಗಿದರು ಎಂದು ಮೊದಲು ವರದಿಯಾಗಿತ್ತು. ಆದರೆ ಈಗ ಅವರು ಬಾತ್ ಟಬ್ ನಲ್ಲಿ ಮುಳುಗಿ ಸತ್ತಿದ್ದು ಎಂದು ವೈದ್ಯಕೀಯ ವರದಿಗಳು ತಿಳಿಸಿವೆ. ಬಾಲಿವುಡ್ ಅನ್ನು ಸುಮಾರು ಎರಡೂವರೆ ದಶಕಗಳ ಕಾಲ ಆಳಿದ ಶ್ರೀದೇವಿ ಅವರ ಸಾವು ಇದೀಗ ಮತ್ತಷ್ಟು ನಿಗೂಢತೆ ಸೃಷ್ಟಿಸಿದೆ.
-
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
ಶೂಟಿಂಗ್ ವೇಳೆ ನನ್ನ ಖಾಸಗಿ ಭಾಗ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದ: ನಿರ್ದೇಶಕ ಸನೋಜ್ ಮಿಶ್ರಾ ವಿರುದ್ಧ ನಟಿ ಮೊನಾಲಿಸಾ ಆರೋಪ -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ











Click it and Unblock the Notifications