ಶ್ರೀಗಳಿಗೆ ಭಾರತ ರತ್ನ ನೀಡಿ: ಸಂಸತ್ನಲ್ಲಿ ರಾಜ್ಯ ಸಂಸದರ ಒತ್ತಾಯ
ನವದೆಹಲಿ, ಫೆಬ್ರವರಿ 04: ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ನೀಡಬೇಕು ಎಂದು ಸಂಸತ್ನಲ್ಲಿ ಇಂದು ರಾಜ್ಯದ ಸಂಸದರು ಒತ್ತಾಯ ಮಾಡಿದರು.
ಲೋಕಸಭೆಯಲ್ಲಿ ನಡೆಯುತ್ತಿರುವ ಬಜೆಟ್ ಅಧಿವೇಶನದಲ್ಲಿ ಮಾತನಾಡಿದ ತುಮಕೂರಿನ ಸಂಸದ ಮುದ್ದಹನುಮೇಗೌಡ ಅವರು ಕರ್ನಾಟಕ ಸರ್ಕಾರ ಶಿಫಾರಸ್ಸು ಮಾಡಿದ್ದರೂ ಸಹ ಕೇಂದ್ರವು ಶ್ರೀಗಳಿಗೆ ಭಾರತ ರತ್ನ ನೀಡಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಕೋಟ್ಯಂತರ ಭಕ್ತಾಧಿಗಳನ್ನು ಹೊಂದಿರುವ ಶ್ರೀಗಳಿಗೆ ಭಾರತ ರತ್ನ ನೀಡದೆ ಸರ್ಕಾರವು ಅವರ ಭಕ್ತಾಧಿಗಳಿಗೆ ನಿರಾಸೆ ಉಂಟು ಮಾಡಿದೆ. ಕರ್ನಾಟಕದ ಸರ್ಕಾರದ ಮನವಿಯನ್ನು ತಿರಸ್ಕರಿಸಿ ಅವಮಾನಿಸಿದೆ ಎಂದು ಅವರು ಹೇಳಿದರು.

ಮುದ್ದಹನುಮೇಗೌಡ ಅವರು ಮಾತನಾಡುವ ಸಮಯ ಅವರನ್ನು ಚಾಮರಾಜನಗರ ಸಂಸದ ಧೃವನಾರಾಯಣ್ ಹಾಗೂ ಚಿತ್ರದುರ್ಗ ಸಂಸದ ಬಿಎನ್ ಚಂದ್ರಪ್ಪ ಅವರು ಸೇರಿಕೊಂಡು ಬೆಂಬಲ ಸೂಚಿಸಿದರು.
ಕೊಲ್ಕತ್ತ ಸಿಬಿಐ-ಪೊಲೀಸ್ ವಿಷಯದ ಗಲಾಟೆಯ ನಡುವೆ ರಾಜ್ಯದ ಸಂಸದರ ಮನವಿಗಳ ಬಗ್ಗೆ ಯಾರೂ ಹೆಚ್ಚು ಗಮನ ವಹಿಸಲಿಲ್ಲ.
ಸಿಎಂ ಕುಮಾರಸ್ವಾಮಿ, ವಿರೋಧ ಪಕ್ಷ ನಾಯಕ ಯಡಿಯೂರಪ್ಪ ಸೇರಿದಂತೆ ಹಲವು ರಾಜಕೀಯ ಮುಖಂಡರು, ಶ್ರೀಗಳಿಗೆ ಭಾರತ ರತ್ನ ನೀಡಬೇಕೆಂದು ಒತ್ತಾಯ ಮಾಡಿದ್ದರೂ ಆದರೂ ಸಹ ಈ ಬಾರಿ ಶ್ರೀಗಳಿಗೆ ಭಾರತ ರತ್ನ ನೀಡಲಾಗಿಲ್ಲ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications