ನೂಪುರ್ ಶರ್ಮಾ ವಿವಾದ; ಕುವೈತ್ ಮಾರುಕಟ್ಟೆಯಲ್ಲಿ ಭಾರತದ ಉತ್ಪನ್ನ ಮಾಯ
ಕುವೈತ್ ಸಿಟಿ/ನವದೆಹಲಿ ಜೂನ್ 6: ಪ್ರವಾದಿ ಮೊಹಮ್ಮದ್ ಕುರಿತು ಬಿಜೆಪಿಯ ಮಾಜಿ ವಕ್ತಾರರು ಮಾಡಿದ ಕಾಮೆಂಟ್ಗಳ ಕುರಿತು ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಕುವೈತ್ನ ಸೂಪರ್ ಮಾರ್ಕೆಟ್ ನಲ್ಲಿ ಮಾರಾಟಕ್ಕಿಟ್ಟಿದ್ದ ಭಾರತೀಯ ಉತ್ಪನ್ನಗಳನ್ನು ಹೊರತೆಗೆದು ಹಾಕಲಾಗಿದೆ ಎಂದು ಸುದ್ದಿ ಸಂಸ್ಥೆ ಎಎಫ್ಪಿ ವರದಿ ಮಾಡಿದೆ. 'ಅಲ್-ಅರ್ದಿಯಾ ಕೋ-ಆಪರೇಟಿವ್ ಸೊಸೈಟಿ' ಅಂಗಡಿಯಲ್ಲಿನ ಕೆಲಸಗಾರರು ಭಾರತೀಯ ಚಹಾ ಮತ್ತು ಇತರ ಉತ್ಪನ್ನಗಳನ್ನು ಟ್ರಾಲಿಗಳಲ್ಲಿ ರಾಶಿ ಹಾಕಿ ಪ್ರವಾದಿ ವಿರುದ್ಧದ ಕಾಮೆಂಟ್ಗಳ ವಿರುದ್ಧ ಪ್ರತಿಭಟನೆ ನಡೆಸಿದರು ಎಂದು ತಿಳಿದು ಬಂದಿದೆ.
ಬಿಜೆಪಿಯ ಮಾಜಿ ವಕ್ತಾರರಾದ ನೂಪುರ್ ಶರ್ಮಾ ಅವರ ಪ್ರವಾದಿಯ ಬಗ್ಗೆ ಅವಹೇಳನಕಾರಿ ಹೇಳಿಕೆಗಳ ವಿವಾದವು ಮತ್ತಷ್ಟು ಭುಗಿಲೆದ್ದಿದೆ. ಸೌದಿ ಅರೇಬಿಯಾ, ಕತಾರ್ ಮತ್ತು ಈ ಪ್ರದೇಶದ ಇತರ ದೇಶಗಳು, ಹಾಗೆಯೇ ಕೈರೋದ ಪ್ರಭಾವಿ ಅಲ್-ಅಜರ್ ವಿಶ್ವವಿದ್ಯಾಲಯವು ಶರ್ಮಾ ಅವರ ಹೇಳಿಕೆಗಳನ್ನು ಖಂಡಿಸಿವೆ. ಇದರ ಬೆನ್ನಲ್ಲೇ ಶರ್ಮಾ ಅವರನ್ನು ಆಡಳಿತ ಪಕ್ಷದಿಂದ ಅಮಾನತುಗೊಳಿಸಲಾಗಿದೆ.

ಕುವೈತ್ ಸೂಪರ್ಮಾರ್ಕೆಟ್ನಿಂದ ಭಾರತೀಯ ಉತ್ಪನ್ನಗಳಿಗೆ ಬಹುಷ್ಕಾರ
ಕುವೈತ್ ನಗರದ ಹೊರಭಾಗದಲ್ಲಿರುವ ಸೂಪರ್ ಮಾರ್ಕೆಟ್ನಲ್ಲಿ ಅಕ್ಕಿಯ ಚೀಲಗಳು , ಮಸಾಲೆಗಳು ಮತ್ತು ಮೆಣಸಿನಕಾಯಿಗಳ ಪ್ಯಾಕೇಟ್ ಇತ್ಯಾದಿಗಳನ್ನು ಪ್ಲಾಸ್ಟಿಕ್ ಹಾಳೆಗಳಿಂದ ಮುಚ್ಚಿ ಹೊರಹಾಕಲಾಗಿದೆ. "ನಾವು ಭಾರತೀಯ ಉತ್ಪನ್ನಗಳನ್ನು ತೆಗೆದುಹಾಕಿದ್ದೇವೆ" ಎಂದು ಅರೇಬಿಕ್ ಭಾಷೆಯಲ್ಲಿ ಮುದ್ರಿಸಲಾದ ಚಿಹ್ನೆಗಳನ್ನು ಇದರ ಬೇಲೆ ಕಾಣಬಹುದಾಗಿದೆ. "ನಾವು ಹಾಗೂ ಕುವೈತ್ ಮುಸ್ಲಿಂ ಜನರು ಪ್ರವಾದಿಯನ್ನು ಅವಮಾನಿಸುವುದನ್ನು ಸ್ವೀಕರಿಸುವುದಿಲ್ಲ" ಎಂದು ಅಂಗಡಿಯ ಸಿಇಒ ನಾಸರ್ ಅಲ್-ಮುಟೈರಿ AFP ಗೆ ತಿಳಿಸಿದ್ದಾರೆ. ಕಂಪನಿಯಾದ್ಯಂತ ಬಹಿಷ್ಕಾರವನ್ನು ಪರಿಗಣಿಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನೂಪುರ್ ಶರ್ಮಾ ಬಂಧನಕ್ಕೆ ಒತ್ತಾಯ
ಭಾರತೀಯ ಜನತಾ ಪಕ್ಷದ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರು ಪ್ರವಾದಿ ಮೊಹಮ್ಮದ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆಗಳು ದೇಶ ಮತ್ತು ಪ್ರಪಂಚದಾದ್ಯಂತ ಮುಸ್ಲಿಮರಲ್ಲಿ ಕೋಪವನ್ನು ಹುಟ್ಟುಹಾಕಿದೆ. ಕಳೆದ ವಾರ ದೂರದರ್ಶನದ ಚರ್ಚೆಯ ಸಂದರ್ಭದಲ್ಲಿ ಶರ್ಮಾ ಅವರ ಹೇಳಿಕೆಗಳು ಉತ್ತರ ಪ್ರದೇಶದ ಕಾನ್ಪುರ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಘರ್ಷಣೆಗಳಿಗೆ ಕಾರಣವಾಗಿದೆ ಎಂದು ಆರೋಪಿಸಲಾಯಿತು ಮತ್ತು ಆಕೆಯ ಬಂಧನಕ್ಕೆ ಒತ್ತಾಯಿಸಲಾಯಿತು.

ಶರ್ಮಾ ಅಮಾನುತು
"ಪಕ್ಷದ ನಿಲುವಿಗೆ ವಿರುದ್ಧವಾದ ಅಭಿಪ್ರಾಯಗಳನ್ನು" ವ್ಯಕ್ತಪಡಿಸಿದ್ದಕ್ಕಾಗಿ ಶರ್ಮಾ ಅವರನ್ನು ಬಿಜೆಪಿ ಭಾನುವಾರ ಅಮಾನತುಗೊಳಿಸಿದೆ ಮತ್ತು "ಎಲ್ಲ ಧರ್ಮಗಳನ್ನು ಗೌರವಿಸುತ್ತದೆ" ಎಂದು ಹೇಳಿದೆ. ಕೋಲಾಹಲದ ನಂತರ, ಶರ್ಮಾ ಅವರು ತಮ್ಮ ಕಾಮೆಂಟ್ಗಳು ಹಿಂದೂ ದೇವರು ಶಿವನ ವಿರುದ್ಧ ಮಾಡಿದ "ಅವಮಾನ" ಗಳಿಗೆ ಪ್ರತಿಕ್ರಿಯೆಯಾಗಿವೆ ಎಂದು ಟ್ವಿಟರ್ನಲ್ಲಿ ಹೇಳಿದ್ದಾರೆ. "ನನ್ನ ಮಾತುಗಳು ಯಾರಿಗಾದರೂ ಅಸ್ವಸ್ಥತೆಯನ್ನು ಉಂಟುಮಾಡಿದರೆ ಅಥವಾ ಧಾರ್ಮಿಕ ಭಾವನೆಗಳಿಗೆ ನೋವುಂಟುಮಾಡಿದರೆ, ನಾನು ಈ ಮೂಲಕ ನನ್ನ ಹೇಳಿಕೆಯನ್ನು ಬೇಷರತ್ತಾಗಿ ಹಿಂತೆಗೆದುಕೊಳ್ಳುತ್ತೇನೆ" ಎಂದು ಅವರು ಹೇಳಿದರು.

ದೂರು ದಾಖಲು
ಇದರ ನಡುವೆ ಶರ್ಮಾ ಅವರಿಗೆ ಜೀವ ಬೆದರಿಕೆ ಕರೆ ಬಂದಿದೆ ಎಂದು ದೂರು ನೀಡಿದ್ದಾರೆ. "ಎಫ್ಐಆರ್ ಆಧರಿಸಿ, ನಾವು ಈ ವಿಷಯದ ಬಗ್ಗೆ ತನಿಖೆಯನ್ನು ಪ್ರಾರಂಭಿಸಿದ್ದೇವೆ" ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಶ್ರೀಮತಿ ಶರ್ಮಾ ನಿನ್ನೆ ಟ್ವಿಟರ್ನಲ್ಲಿ ಕ್ಷಮೆಯಾಚಿಸಿದ್ದು, ಯಾರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವುದು ನನ್ನ ಉದ್ದೇಶವಲ್ಲ ಎಂದು ಹೇಳಿದ್ದಾರೆ. ಅವರು ತಮ್ಮ ಕುಟುಂಬದ ಭದ್ರತೆಯ ಬಗ್ಗೆ ಚಿಂತಿತರಾಗಿದ್ದಾರೆ ಮತ್ತು ಅವರ ವಿಳಾಸವನ್ನು ಸಾರ್ವಜನಿಕಗೊಳಿಸದಂತೆ ಜನರನ್ನು ಒತ್ತಾಯಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಪ್ರಸಾರವಾದ ಬಿಜೆಪಿಯ ಪತ್ರದಲ್ಲಿ ಅವರ ವಿಳಾಸವಿದೆ ಎಂದು ಅವರು ಹೇಳಿದರು.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ












Click it and Unblock the Notifications