ನೂಪುರ್ ಶರ್ಮಾ ವಿವಾದ; ಕುವೈತ್ ಮಾರುಕಟ್ಟೆಯಲ್ಲಿ ಭಾರತದ ಉತ್ಪನ್ನ ಮಾಯ
ಕುವೈತ್ ಸಿಟಿ/ನವದೆಹಲಿ ಜೂನ್ 6: ಪ್ರವಾದಿ ಮೊಹಮ್ಮದ್ ಕುರಿತು ಬಿಜೆಪಿಯ ಮಾಜಿ ವಕ್ತಾರರು ಮಾಡಿದ ಕಾಮೆಂಟ್ಗಳ ಕುರಿತು ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಕುವೈತ್ನ ಸೂಪರ್ ಮಾರ್ಕೆಟ್ ನಲ್ಲಿ ಮಾರಾಟಕ್ಕಿಟ್ಟಿದ್ದ ಭಾರತೀಯ ಉತ್ಪನ್ನಗಳನ್ನು ಹೊರತೆಗೆದು ಹಾಕಲಾಗಿದೆ ಎಂದು ಸುದ್ದಿ ಸಂಸ್ಥೆ ಎಎಫ್ಪಿ ವರದಿ ಮಾಡಿದೆ. 'ಅಲ್-ಅರ್ದಿಯಾ ಕೋ-ಆಪರೇಟಿವ್ ಸೊಸೈಟಿ' ಅಂಗಡಿಯಲ್ಲಿನ ಕೆಲಸಗಾರರು ಭಾರತೀಯ ಚಹಾ ಮತ್ತು ಇತರ ಉತ್ಪನ್ನಗಳನ್ನು ಟ್ರಾಲಿಗಳಲ್ಲಿ ರಾಶಿ ಹಾಕಿ ಪ್ರವಾದಿ ವಿರುದ್ಧದ ಕಾಮೆಂಟ್ಗಳ ವಿರುದ್ಧ ಪ್ರತಿಭಟನೆ ನಡೆಸಿದರು ಎಂದು ತಿಳಿದು ಬಂದಿದೆ.
ಪ್ರವಾದಿ ವಿರುದ್ಧ ಹೇಳಿಕೆ - ನೂಪುರ್ ಶರ್ಮಾಗೆ ಜೀವ ಬೆದರಿಕೆ: ದೂರು ದಾಖಲು
ಬಿಜೆಪಿಯ ಮಾಜಿ ವಕ್ತಾರರಾದ ನೂಪುರ್ ಶರ್ಮಾ ಅವರ ಪ್ರವಾದಿಯ ಬಗ್ಗೆ ಅವಹೇಳನಕಾರಿ ಹೇಳಿಕೆಗಳ ವಿವಾದವು ಮತ್ತಷ್ಟು ಭುಗಿಲೆದ್ದಿದೆ. ಸೌದಿ ಅರೇಬಿಯಾ, ಕತಾರ್ ಮತ್ತು ಈ ಪ್ರದೇಶದ ಇತರ ದೇಶಗಳು, ಹಾಗೆಯೇ ಕೈರೋದ ಪ್ರಭಾವಿ ಅಲ್-ಅಜರ್ ವಿಶ್ವವಿದ್ಯಾಲಯವು ಶರ್ಮಾ ಅವರ ಹೇಳಿಕೆಗಳನ್ನು ಖಂಡಿಸಿವೆ. ಇದರ ಬೆನ್ನಲ್ಲೇ ಶರ್ಮಾ ಅವರನ್ನು ಆಡಳಿತ ಪಕ್ಷದಿಂದ ಅಮಾನತುಗೊಳಿಸಲಾಗಿದೆ.
ಕುವೈತ್ ಸೂಪರ್ಮಾರ್ಕೆಟ್ನಿಂದ ಭಾರತೀಯ ಉತ್ಪನ್ನಗಳಿಗೆ ಬಹುಷ್ಕಾರ
ಕುವೈತ್ ನಗರದ ಹೊರಭಾಗದಲ್ಲಿರುವ ಸೂಪರ್ ಮಾರ್ಕೆಟ್ನಲ್ಲಿ ಅಕ್ಕಿಯ ಚೀಲಗಳು , ಮಸಾಲೆಗಳು ಮತ್ತು ಮೆಣಸಿನಕಾಯಿಗಳ ಪ್ಯಾಕೇಟ್ ಇತ್ಯಾದಿಗಳನ್ನು ಪ್ಲಾಸ್ಟಿಕ್ ಹಾಳೆಗಳಿಂದ ಮುಚ್ಚಿ ಹೊರಹಾಕಲಾಗಿದೆ. "ನಾವು ಭಾರತೀಯ ಉತ್ಪನ್ನಗಳನ್ನು ತೆಗೆದುಹಾಕಿದ್ದೇವೆ" ಎಂದು ಅರೇಬಿಕ್ ಭಾಷೆಯಲ್ಲಿ ಮುದ್ರಿಸಲಾದ ಚಿಹ್ನೆಗಳನ್ನು ಇದರ ಬೇಲೆ ಕಾಣಬಹುದಾಗಿದೆ. "ನಾವು ಹಾಗೂ ಕುವೈತ್ ಮುಸ್ಲಿಂ ಜನರು ಪ್ರವಾದಿಯನ್ನು ಅವಮಾನಿಸುವುದನ್ನು ಸ್ವೀಕರಿಸುವುದಿಲ್ಲ" ಎಂದು ಅಂಗಡಿಯ ಸಿಇಒ ನಾಸರ್ ಅಲ್-ಮುಟೈರಿ AFP ಗೆ ತಿಳಿಸಿದ್ದಾರೆ. ಕಂಪನಿಯಾದ್ಯಂತ ಬಹಿಷ್ಕಾರವನ್ನು ಪರಿಗಣಿಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭಾರತ ಸರ್ಕಾರಕ್ಕೆ ಕ್ಷಮೆಯಾಚಿಸಲು ಕತಾರ್ ಆಗ್ರಹ
ನೂಪುರ್ ಶರ್ಮಾ ಬಂಧನಕ್ಕೆ ಒತ್ತಾಯ
ಭಾರತೀಯ ಜನತಾ ಪಕ್ಷದ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರು ಪ್ರವಾದಿ ಮೊಹಮ್ಮದ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆಗಳು ದೇಶ ಮತ್ತು ಪ್ರಪಂಚದಾದ್ಯಂತ ಮುಸ್ಲಿಮರಲ್ಲಿ ಕೋಪವನ್ನು ಹುಟ್ಟುಹಾಕಿದೆ. ಕಳೆದ ವಾರ ದೂರದರ್ಶನದ ಚರ್ಚೆಯ ಸಂದರ್ಭದಲ್ಲಿ ಶರ್ಮಾ ಅವರ ಹೇಳಿಕೆಗಳು ಉತ್ತರ ಪ್ರದೇಶದ ಕಾನ್ಪುರ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಘರ್ಷಣೆಗಳಿಗೆ ಕಾರಣವಾಗಿದೆ ಎಂದು ಆರೋಪಿಸಲಾಯಿತು ಮತ್ತು ಆಕೆಯ ಬಂಧನಕ್ಕೆ ಒತ್ತಾಯಿಸಲಾಯಿತು.
ಶರ್ಮಾ ಅಮಾನುತು
"ಪಕ್ಷದ ನಿಲುವಿಗೆ ವಿರುದ್ಧವಾದ ಅಭಿಪ್ರಾಯಗಳನ್ನು" ವ್ಯಕ್ತಪಡಿಸಿದ್ದಕ್ಕಾಗಿ ಶರ್ಮಾ ಅವರನ್ನು ಬಿಜೆಪಿ ಭಾನುವಾರ ಅಮಾನತುಗೊಳಿಸಿದೆ ಮತ್ತು "ಎಲ್ಲ ಧರ್ಮಗಳನ್ನು ಗೌರವಿಸುತ್ತದೆ" ಎಂದು ಹೇಳಿದೆ. ಕೋಲಾಹಲದ ನಂತರ, ಶರ್ಮಾ ಅವರು ತಮ್ಮ ಕಾಮೆಂಟ್ಗಳು ಹಿಂದೂ ದೇವರು ಶಿವನ ವಿರುದ್ಧ ಮಾಡಿದ "ಅವಮಾನ" ಗಳಿಗೆ ಪ್ರತಿಕ್ರಿಯೆಯಾಗಿವೆ ಎಂದು ಟ್ವಿಟರ್ನಲ್ಲಿ ಹೇಳಿದ್ದಾರೆ. "ನನ್ನ ಮಾತುಗಳು ಯಾರಿಗಾದರೂ ಅಸ್ವಸ್ಥತೆಯನ್ನು ಉಂಟುಮಾಡಿದರೆ ಅಥವಾ ಧಾರ್ಮಿಕ ಭಾವನೆಗಳಿಗೆ ನೋವುಂಟುಮಾಡಿದರೆ, ನಾನು ಈ ಮೂಲಕ ನನ್ನ ಹೇಳಿಕೆಯನ್ನು ಬೇಷರತ್ತಾಗಿ ಹಿಂತೆಗೆದುಕೊಳ್ಳುತ್ತೇನೆ" ಎಂದು ಅವರು ಹೇಳಿದರು.
ದೂರು ದಾಖಲು
ಇದರ ನಡುವೆ ಶರ್ಮಾ ಅವರಿಗೆ ಜೀವ ಬೆದರಿಕೆ ಕರೆ ಬಂದಿದೆ ಎಂದು ದೂರು ನೀಡಿದ್ದಾರೆ. "ಎಫ್ಐಆರ್ ಆಧರಿಸಿ, ನಾವು ಈ ವಿಷಯದ ಬಗ್ಗೆ ತನಿಖೆಯನ್ನು ಪ್ರಾರಂಭಿಸಿದ್ದೇವೆ" ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಶ್ರೀಮತಿ ಶರ್ಮಾ ನಿನ್ನೆ ಟ್ವಿಟರ್ನಲ್ಲಿ ಕ್ಷಮೆಯಾಚಿಸಿದ್ದು, ಯಾರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವುದು ನನ್ನ ಉದ್ದೇಶವಲ್ಲ ಎಂದು ಹೇಳಿದ್ದಾರೆ. ಅವರು ತಮ್ಮ ಕುಟುಂಬದ ಭದ್ರತೆಯ ಬಗ್ಗೆ ಚಿಂತಿತರಾಗಿದ್ದಾರೆ ಮತ್ತು ಅವರ ವಿಳಾಸವನ್ನು ಸಾರ್ವಜನಿಕಗೊಳಿಸದಂತೆ ಜನರನ್ನು ಒತ್ತಾಯಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಪ್ರಸಾರವಾದ ಬಿಜೆಪಿಯ ಪತ್ರದಲ್ಲಿ ಅವರ ವಿಳಾಸವಿದೆ ಎಂದು ಅವರು ಹೇಳಿದರು.