ಗ್ರಂಥಾಲಯದಲ್ಲಿದ್ದವರು ಕಲ್ಲು ತೂರಾಟಗಾರರು: ಬಿಜೆಪಿ
ನವದೆಹಲಿ, ಫೆಬ್ರವರಿ 17: ಜಾಮಿಯಾ ವಿಶ್ವವಿದ್ಯಾಲಯದ ಗ್ರಂಥಾಲಯಕ್ಕೆ ಪೊಲೀಸರು ನುಗ್ಗಿ ವಿದ್ಯಾರ್ಥಿಗಳ ಮೇಲೆ ಮನಸೋಇಚ್ಛೆ ಲಾಠಿ ಬೀಸಿದ ಪ್ರಕರಣದ ಕುರಿತು ಆಕ್ರೋಶ ವ್ಯಕ್ತವಾಗಿದ್ದು, ಈ ಬಗ್ಗೆ ಬಿಜೆಪಿ ಪ್ರತಿಕ್ರಿಯೆ ನೀಡಿದ್ದು, ಗ್ರಂಥಾಲಯದಲ್ಲಿ ಓದುತ್ತಾ ಕುಳಿತವರು ವಿದ್ಯಾರ್ಥಿಗಳೇ ಅಲ್ಲ ಎಂದಿದೆ.
ಈ ಬಗ್ಗೆ ಟ್ವಿಟ್ಟರ್ನಲ್ಲಿ ಸುದ್ದಿ ವಾಹಿನಿಯೊಂದು ಪ್ರಸಾರ ಮಾಡಿರುವ ಜಾಮಿಯಾ ವಿವಿಯ ಕೊಠಡಿಯೊಂದರ ಒಳಗಿನ ದೃಶ್ಯಾವಳಿಗಳನ್ನು ಹಂಚಿಕೊಂಡಿರುವ ಬಿಜೆಪಿ ಐಟಿ ಮುಖ್ಯಸ್ಥ ಅಮಿತ್ ಮಾಳವಿಯ, 'ಗ್ರಂಥಾಲಯದ ಒಳಗಿದ್ದವರು ಕಲ್ಲು ತೂರಾಟಗಾರರು ಎಂದಿದ್ದಾರೆ.
'ಪೊಲೀಸರು ಗ್ರಂಥಾಲಯ ಪ್ರವೇಶಿಸುವ ಮುನ್ನಾ ಗ್ರಂಥಾಲಯದ ಒಳಗೆ ವಿದ್ಯಾರ್ಥಿಗಳು ಹೀಗೆ ವರ್ತಿಸಿದ್ದರು' ಎಂಬ ಒಕ್ಕಣೆ ನೀಡಿ ವಿಡಿಯೋ ಒಂದನ್ನು ಅಮಿತ್ ಮಾಳವಿಯಾ ಟ್ವೀಟ್ ಮಾಡಿದ್ದಾರೆ. ಅವರು ಟ್ವೀಟ್ ಮಾಡಿರುವ ವಿಡಿಯೋದಲ್ಲಿ ವಿದ್ಯಾರ್ಥಿಗಳು ಆತಂಕದಿಂದ ಒಂದು ಕೊಠಡಿಯ ಒಳಕ್ಕೆ ಬರುತ್ತಾರೆ. ನಂತರ ಬಾಗಿಲು ಹಾಕಿ, ಬಾಗಿಲಿಗೆ ದೊಡ್ಡ ಸ್ಟೂಲ್ ಒಂದನ್ನು ಅಡ್ಡ ಇಡುತ್ತಾರೆ. ಹಾಗೆ ಬಂದ ವಿದ್ಯಾರ್ಥಿಯೊಬ್ಬನ ಕೈಯಲ್ಲಿ ಕಲ್ಲೊಂದು ಇದೆ.

ತನ್ನ ಸಿಎಎ-ಎನ್ಆರ್ಸಿ ವಿರೋಧಿ ನಿಲವು ಹಾಗೂ ಪ್ರತಿಭಟನೆಗಳಿಂದ ದೇಶದಾದ್ಯಂತ ಚರ್ಚೆಯಲ್ಲಿರುವ ಜಾಮಿಯಾ ವಿಶ್ವವಿದ್ಯಾಲಯದ ಗ್ರಂಥಾಲಯಕ್ಕೆ ಡಿಸೆಂಬರ್ 15 ರಂದು ನುಗ್ಗಿದ ಅರೆ ಸೇನಾ ಪಡೆ ಪೊಲೀಸರು ತಮ್ಮ ಪಾಡಿಗೆ ತಾವು ಓದುತ್ತಾ ಕುಳಿತಿರುವ ವಿದ್ಯಾರ್ಥಿಗಳನ್ನು ಮನಸೋಇಚ್ಛೆ ಲಾಠಿಗಳಿಂದ ಹೊಡೆದಿದ್ದರು.
ಪೋಲೀಸರ ಈ ಭಯಾನಕ ಕೃತ್ಯ ಗ್ರಂಥಾಲಯದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ. ಕಾಂಗ್ರೆಸ್ ತನ್ನ ಟ್ವಿಟ್ಟರ್ ಖಾತೆಯಲ್ಲಿ ವಿಡಿಯೋವನ್ನು ಹಂಚಿಕೊಂಡು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಟೀಕಾಪ್ರಹಾರ ನಡೆಸಿದೆ.
ಎರಡು ದಿನಗಳ ಹಿಂದೆ (ಶನಿವಾರ) ವಿಡಿಯೋ ಬಿಡುಗಡೆ ಆಗಿತ್ತು. ಜಾಮಿಯಾ ವಿವಿ ಪ್ರಕಾರ ಈ ವಿಡಿಯೋವನ್ನು ವಿವಿ ಅಧಿಕೃತವಾಗಿ ಬಿಡುಗಡೆ ಮಾಡಿಲ್ಲ ಬದಲಾಗಿ ವಿಡಿಯೋ ಸೋರಿಕೆ ಆಗಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications