Breaking: ಜೆಎನ್ಯುನಲ್ಲಿ ವಿದ್ಯಾರ್ಥಿ ಮತ್ತು ಭದ್ರತಾ ಸಿಬ್ಬಂದಿ ಸಂಘರ್ಷ
ನವದೆಹಲಿ, ಆಗಸ್ಟ್ 22: ವಿದ್ಯಾರ್ಥಿ ವೇತನ ಹಣ ಬಿಡುಗಡೆಗೆ ಸಂಬಂಧಿಸಿದಂತೆ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ(ಜೆಎನ್ಯು)ದಲ್ಲಿ ಪ್ರತಿಭಟನೆ ಮಾಡುತ್ತಿದ್ದ ಬಲಪಂಥೀಯ ವಿದ್ಯಾರ್ಥಿಗಳ ಸಂಘ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ವಿದ್ಯಾರ್ಥಿಗಳ ಮೇಲೆ ಕ್ಯಾಂಪಸ್ನಲ್ಲಿ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಜೆಎನ್ಯು ಆಡಳಿತದಿಂದ ಸಂಶೋಧನಾ ಫೆಲೋಶಿಪ್ ನಿಧಿಯನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸುತ್ತಿದ್ದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ದಾಳಿ ನಡೆಸಿದ್ದಾರೆ ಎಂದು ಎಬಿವಿಪಿ ಸದಸ್ಯರು ದೂಷಿಸಿದ್ದಾರೆ.
ಜೆಎನ್ಯುನಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ಘರ್ಷಣೆಯ ನಂತರ ಎಬಿವಿಪಿ ಅಧ್ಯಕ್ಷ ಮತ್ತು ವಿಕಲಚೇತನ ವಿದ್ಯಾರ್ಥಿಯೊಬ್ಬರು ಗಾಯಗೊಂಡಿದ್ದಾರೆ ಎಂದು ವಿದ್ಯಾರ್ಥಿ ಸಂಘಟನೆ ಹೇಳಿಕೊಂಡಿದೆ. ಈ ದಾಳಿಯಲ್ಲಿ ಸುಮಾರು 12 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ಬಲಪಂಥೀಯ ಗುಂಪು ಹೇಳಿದೆ.

ಎಬಿವಿಪಿ ಮಾಡುತ್ತಿರುವ ಆರೋಪವೇನು?:
"ಇಂದು ವಿದ್ಯಾರ್ಥಿಗಳು ಫೆಲೋಶಿಪ್ ಮತ್ತು ಸ್ಕಾಲರ್ಶಿಪ್ ವಿಷಯಕ್ಕೆ ಸಂಬಂಧಿಸಿದಂತೆ ಆಡಳಿತ ಕಚೇರಿಗೆ 'ಘೇರಾವ್' ಹಾಕಲಾಗುತ್ತಿತ್ತು. ಫೆಲೋಶಿಪ್ ಮತ್ತು ಸ್ಕಾಲರ್ಶಿಪ್ಗಳನ್ನು ಬಿಡುಗಡೆ ಮಾಡಬೇಕು ಎಂಬುದು ತಮ್ಮ ಬೇಡಿಕೆ ಆಗಿತ್ತು. ಈ ವಿಷಯವನ್ನು ವಿಶ್ವವಿದ್ಯಾಲಯದ ಆಡಳಿತ ಮಂಡಳಿಯು ದೀರ್ಘಕಾಲದಿಂದ ನಿರ್ಲಕ್ಷಿಸುತ್ತಿರುವ ಬಗ್ಗೆ ವಿದ್ಯಾರ್ಥಿಗಳು ಹೇಳುತ್ತಿದ್ದಾರೆ," ಎಂದು ಎಬಿವಿಪಿ ಅಧ್ಯಕ್ಷ ರೋಹಿತ್ ಕುಮಾರ್ ಹೇಳಿದರು.
ಘರ್ಷಣೆಯ ಕುರಿತಾದ ವಿಡಿಯೋ ಶೇರ್:
ಭದ್ರತಾ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳ ನಡುವಿನ ಘರ್ಷಣೆಯ ವೀಡಿಯೊವನ್ನು ಬಲಪಂಥೀಯ ವಿದ್ಯಾರ್ಥಿ ಗುಂಪು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದೆ.

"ಜೆಎನ್ಯು ರೆಕ್ಟರ್ನ ಭ್ರಷ್ಟಾಚಾರವನ್ನು ಬಹಿರಂಗಪಡಿಸಿದ ನಂತರ, ಜೆಎನ್ಯು ವಿದ್ಯಾರ್ಥಿಗಳ ಸ್ಕಾಲರ್ಶಿಪ್ಗಾಗಿ ಹಲವು ವರ್ಷಗಳಿಂದ ಎಬಿವಿಪಿ ಜೆಎನ್ಯು ಕಾರ್ಯಕರ್ತರು ಆಂದೋಲನ ನಡೆಸುತ್ತಿದ್ದಾಗ, ಜೆಎನ್ಯು ಭದ್ರತಾ ಸಿಬ್ಬಂದಿ ಎಂದು ಪೋಸ್ಟ್ ಮಾಡಿದ ರೆಕ್ಟರ್ನ ಗೂಂಡಾಗಳು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದರು, "ಎಂದು ಬಿಜೆಪಿ-ಸಂಯೋಜಿತ ವಿದ್ಯಾರ್ಥಿಗಳ ಸಂಘ ಟ್ವೀಟ್ ಮಾಡಿದೆ.
JNU के रेक्टर के भ्रष्टाचार का खुलासा करने के बाद जब ABVP JNU के कार्यकर्ता JNU के छात्रों के वर्षों से ठप छत्रवृति के लिए आंदोलन कर रहे थे तब JNU के सिक्योरिटी गॉर्ड के रूप में तैनात रेक्टर के गुंडों ने छत्रों पर हमला किया। #JNURector_gunda_hai#JNURector_must_resign pic.twitter.com/2NWM6iOu2K
— ABVP JNU (@abvpjnu) August 22, 2022
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications