ರಾಹುಲ್ ಅಪ್ಪುಗೆಯನ್ನು ಮೋದಿ ಹತ್ಯೆ ಸಂಚು ಎಂದ ಸುಬ್ರಹ್ಮಣಿಯನ್ ಸ್ವಾಮಿ
ನವದೆಹಲಿ, ಜುಲೈ 21: ರಾಹುಲ್ ಗಾಂಧಿ ಅವರ ಪ್ರೀತಿಯ ಅಪ್ಪುಗೆ ರಾಜ್ಯಸಭಾ ಸದಸ್ಯ ಸುಬ್ರಹ್ಮಣಿಯನ್ ಸ್ವಾಮಿ ಅವರಿಗೆ ಮೋದಿಯನ್ನು ಕೊಲ್ಲುವ ಷಡ್ಯಂತ್ರದಂತೆ ಕಂಡಿದೆ!
ರಾಹುಲ್ ಗಾಂಧಿ ಅವರು ನಿನ್ನೆ ಸಂಸತ್ನಲ್ಲಿ ಪ್ರಧಾನಿ ಮೋದಿ ಅವರನ್ನು ಅಪ್ಪಿಕೊಂಡ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯಸಭಾ ಸದಸ್ಯ ಸುಬ್ರಹ್ಮಣಿಯನ್ ಸ್ವಾಮಿ ಅವರು ರಾಹುಲ್ ಗಾಂಧಿ ಮೋದಿಯನ್ನು ಕೊಲ್ಲಲು ಅಪ್ಪಿಕೊಂಡಿರುವ ಸಾಧ್ಯತೆ ಇದೆ ಎಂದಿದ್ದಾರೆ.
'ಮೋದಿ ಅವರು ಆ ದಡ್ಡನು (ರಾಹುಲ್ ಗಾಂಧಿ) ತಮ್ಮನ್ನು ಅಪ್ಪಿಕೊಳ್ಳಲು ಬಿಡಬಾರದಿತ್ತು, ಎಂದಿರುವ ಅವರು, ಉತ್ತರ ಕೊರಿಯಾ, ರಷ್ಯಾದಲ್ಲಿ ಹೀಗೆ ಅಪ್ಪುಗೆಯ ತಂತ್ರ ಬಳಸಿ ವಿಷದ ಸೂಜಿಗಳನ್ನು ಚುಚ್ಚು ತಂತ್ರ ಅನುಸರಿಸುತ್ತಾರೆ' ಎಂದಿದ್ದಾರೆ.
Namo should not have allowed Buddhu to hug him. Russians and North Koreans use the embrace technique to stick a poised needle. I think Namo should immediately go for a medical check to see if he has any microscopic puncture like Sunanda had on her hand
— Subramanian Swamy (@Swamy39) July 21, 2018
ಮೋದಿ ಈ ಕೂಡಲೇ ಆಸ್ಪತ್ರೆಗೆ ತೆರಳಿ ಚೆಕ್ ಮಾಡಿಸಿಕೊಳ್ಳಬೇಕು ಎಂದಿರುವ ಅವರು, ಶಶಿತರೂರ್ ಪತ್ನಿ ಸುನಂದಾ ಪುಷ್ಕರ್ ಅವರ ಕೈಮೇಲೆ ಇದ್ದ ಸೂಕ್ಷ್ಮ ರಂಧ್ರವೇನಾದರೂ ತಮ್ಮ ದೇಹದಲ್ಲಿ ಮೂಡಿದೆಯಾ ಪರೀಕ್ಷೆ ಮಾಡಿಸಿಕೊಳ್ಳಬೇಕು ಎನ್ನುವ ಮೂಲಕ, ರಾಹುಲ್ ಗಾಂಧಿ ಮೋದಿಗೆ ವಿಷದ ಸೂಜಿ ಚುಚ್ಚಿರುವ ಸಾಧ್ಯತೆ ಇದೆ ಎಂಬ ಅನುಮಾನ ವ್ಯಕ್ತಪಡಿಸಿದ್ದಾರೆ.

ರಾಹುಲ್ ಗಾಂಧಿ ಅವರು ನಿನ್ನೆಯೇ ಸಂಸತ್ನಲ್ಲಿ ಹೇಳಿದ್ದರು, ಎದುರಾಳಿಗಳು ತಮ್ಮ ಬಗ್ಗೆ ಏನೇ ಹೇಳಿದರು ತಾವು ಪ್ರೀತಿಯನ್ನು ಮಾತ್ರವೇ ನೀಡುವುದಾಗಿ ಅಂತೆಯೇ ಇಂದು ಸ್ವಾಮಿ ಅವರು ರಾಹುಲ್ ರನ್ನು ದಡ್ಡ ಮತ್ತು ಕೊಲೆಯ ಸಂಚುಕಾರ ಎಂದು ಕರೆದಿದ್ದಾರೆ. ಆದರೆ ಇದಕ್ಕೆ ರಾಹುಲ್ ನಿನ್ನೆಯೇ ಉತ್ತರ ನೀಡಿದ್ದಾರೆ.
ನಿನ್ನೆ ಅವಿಶ್ವಾಸ ನಿರ್ಣಯ ಸಂಬಂಧ ಚರ್ಚೆಯ ವೇಳೆ, ಹಿಂದೂ ಧರ್ಮ ಹಾಗೂ ಕಾಂಗ್ರೆಸ್ ಧರ್ಮದ ಬಗ್ಗೆ ಮಾತನಾಡುತ್ತಾ ನಮ್ಮದು ಕೇವಲ ಪ್ರೀತಿ ಪಸರಿಸುವ ರಾಜಕಾರಣ ಎಂದು ಹೇಳಿ ಸಂಸತ್ನಲ್ಲೇ ರಾಹುಲ್ ಅವರು ಮೋದಿಯನ್ನು ಆಲಿಂಗಿಸಿಕೊಂಡಿದ್ದರು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications