Get Updates
Get notified of breaking news, exclusive insights, and must-see stories!

47 ವರ್ಷದ ಬಳಿಕ ಬಡ್ಡಿ ಸಮೇತ ಸಂಬಳ ಪಡೆದ ಸುಬ್ರಮಣಿಯನ್ ಸ್ವಾಮಿ!

Recommended Video

      20 ವರ್ಷಗಳ ಹೋರಾಟಕ್ಕೆ ಅಂತೂ ಸಿಕ್ಕಿತು ಜಯ | Oneindia Kannada

      ನವದೆಹಲಿ, ಏಪ್ರಿಲ್ 9: ತಮ್ಮ ರಾಜಕೀಯ ವೈರಿಗಳನ್ನು ಕಾನೂನಾತ್ಮಕವಾಗಿ ಹಣಿಯುವುದರಲ್ಲಿ ನಿಸ್ಸೀಮರಾದ ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಮತ್ತೊಂದು ಕಾನೂನು ಹೋರಾಟದಲ್ಲಿ ಜಯಗಳಿಸಿದ್ದಾರೆ. ಆದರೆ, ಇದು ಅವರ ವೈಯಕ್ತಿಕ ವಿಚಾರಕ್ಕೆ ಸಂಬಂಧಿಸಿದ್ದು.

      ತಮಗೆ ಬಾಕಿ ಉಳಿದಿದ್ದ 20 ವರ್ಷಗಳ ಸಂಬಳವನ್ನು ಅವರು ಸುಮಾರು 28 ವರ್ಷಗಳ ಬಳಿಕ ಪಡೆದುಕೊಳ್ಳಲಿದ್ದಾರೆ. ಈ ಹಣದ ಮೊತ್ತ ಹೆಚ್ಚೂ ಕಡಿಮೆ 45 ಲಕ್ಷ ರೂಪಾಯಿ.

      1972ರಿಂದ 1991ರ ಅವಧಿಯಲ್ಲಿ ಅವರಿಗೆ ಬಾಕಿ ಉಳಿಸಿಕೊಂಡಿದ್ದ ವೇತನವನ್ನು ಪಾವತಿಸುವಂತೆ ದೆಹಲಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಗೆ ಸ್ಥಳೀಯ ನ್ಯಾಯಾಲಯವೊಂದು ಆದೇಶಿಸಿದೆ.

      Subramanian swamy legal battle with IIT Delhi for his salary due with 8 per cent interest

      ಆರ್ಥಿಕ ತಜ್ಞರಾಗಿರುವ ಸುಬ್ರಮಣಿಯನ್ ಸ್ವಾಮಿ ದೆಹಲಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ (ಐಐಟಿ) ಅರ್ಥಶಾಸ್ತ್ರ ವಿಷಯದ ಪ್ರೊಫೆಸರ್ ಆಗಿ ಮೂರು ವರ್ಷ ಕೆಲಸ ಮಾಡಿದ್ದರು. ಆದರೆ ಅವರ ಮತ್ತು ಸಂಸ್ಥೆಯ ನಡುವೆ ಕಾನೂನಾತ್ಮಕ ಹೋರಾಟ ನಡೆದಿತ್ತು.

      ಈಗ 1972ರಿಂದ 1991ರ ಅವಧಿಯ ಸುಮಾರು 20 ವರ್ಷದ ವೇತನವನ್ನು ಅವರಿಗೆ ಸಂಸ್ಥೆ ನೀಡುವಂತಾಗಿದೆ. ಮೊತ್ತಕ್ಕೆ ಶೇ 8ರ ಬಡ್ಡಿದರವನ್ನು ಸೇರಿಸಿ ಸುಬ್ರಮಣಿಯನ್ ಸ್ವಾಮಿ ಅವರಿಗೆ ಪಾವತಿ ಮಾಡುವಂತೆ ಆದೇಶದಲ್ಲಿ ಸೂಚಿಸಲಾಗಿದೆ. ಇದರಿಂದ ಸ್ವಾಮಿ ಅವರು ಅಂದಾಜು 40 ರಿಂದ 45 ಲಕ್ಷ ರೂಪಾಯಿ ಪಡೆದುಕೊಳ್ಳಲಿದ್ದಾರೆ.

      ಈ ವಿಚಾರದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಸಂಸ್ಥೆಯ ಆಡಳಿತಾಧಿಕಾರಿಗಳ ಮಂಡಳಿಗೆ ಬಿಡುವುದಾಗಿ ಐಐಟಿ ದೆಹಲಿಯ ಅಧಿಕಾರಿಗಳು ತಿಳಿಸಿದ್ದಾರೆ.

      'ನಾವು ಮಂಡಳಿಗೆ ಮಾಹಿತಿ ನೀಡಲಿದ್ದೇವೆ. ಮುಂದಿನ ಕ್ರಮ ಏನು ಎಂಬುದನ್ನು ಅವರೇ ನಿರ್ಧಾರ ಮಾಡಲಿದ್ದಾರೆ' ಎಂದು ಐಐಟಿ-ದೆಹಲಿ ನಿರ್ದೇಶಕ ವಿ. ರಾಮ್‌ಗೋಪಾಲ ರಾವ್ ಹೇಳಿದ್ದಾರೆ.

      ರಾಜಕಾರಣಕ್ಕೆ ಬರುವ ಮುನ್ನ ಸ್ವಾಮಿ ಅವರು ಐಐಟಿಯಲ್ಲಿ 1969-1972ರ ವರೆಗೆ ಮೂರು ವರ್ಷ ಅರ್ಥಶಾಸ್ತ್ರ ಬೋಧಿಸಿದ್ದರು. ಆದರೆ, ಆಡಳಿತಮಂಡಳಿಯೊಂದಿಗೆ ಅನೇಕ ಮನಸ್ತಾಪಗಳು ಉಂಟಾದ ಕಾರಣ ಸ್ವಾಮಿ ಅವರನ್ನು ಸಂಸ್ಥೆಯಿಂದ ವಜಾ ಮಾಡಲಾಗಿತ್ತು. ಇದರನ್ನು ಸ್ವಾಮಿ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದರು. ದೆಹಲಿಯ ನ್ಯಾಯಾಲಯವೊಂದು 1991ರಲ್ಲಿ ಸ್ವಾಮಿ ಮರು ನೇಮಕಕ್ಕೆ ಸೂಚಿಸಿತ್ತು. ತಮ್ಮನ್ನು ವಜಾಗೊಳಿಸಿದ್ದು ರಾಜಕೀಯ ಪ್ರೇರಿತ ಎಂದು ಆರೋಪಿಸಿದ್ದ ಸ್ವಾಮಿ, ಈ ಅವಧಿಯಲ್ಲಿ ತಮಗೆ ಬರಬೇಕಿದ್ದ ಬಾಕಿ ವೇತನವನ್ನು ನೀಡುವಂತೆ ಒತ್ತಾಯಿಸಿದ್ದರು.

      'ಕೋರ್ಟ್ ಆದೇಶವು ಶೈಕ್ಷಣಿಕ ಜಗತ್ತಿನಲ್ಲಿರುವ ಎಲ್ಲ ಖದೀಮರಿಗೆ ಉದಾಹರಣೆಯಾಗಬೇಕು' ಎಂದು ಸ್ವಾಮಿ ಟ್ವೀಟ್ ಮಾಡಿದ್ದಾರೆ.

      '47 ವರ್ಷಗಳ ಬಳಿಕ ಸಾಕೇತ್ ಕೋರ್ಟ್‌ನಲ್ಲಿ ಐಐಟಿ ದೆಹಲಿ ನನಗೆ ಸೋತಿದೆ. ಶೇ 8ರ ವಾರ್ಷಿಕ ಬಡ್ಡಿದರದಲ್ಲಿ ನನ್ನ ವೇತನದ ಮೊತ್ತವನ್ನು ಪಾವತಿಸಬೇಕಿದೆ. ಇದು ಶೈಕ್ಷಣಿಕ ಜಗತ್ತಿನಲ್ಲಿರುವ ಎಲ್ಲ ಖದೀಮರಿಗೆ ಉದಾಹರಣೆಯಾಗಲಿ' ಎಂದು ಅವರು ಟ್ವಿಟ್ಟರ್‌ನಲ್ಲಿ ಹೇಳಿದ್ದಾರೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+