ಸುನಂದಾ ಪುಷ್ಕರ್ ಸಾವು: ದೆಹಲಿ ಪೊಲೀಸರ ವಿರುದ್ಧ ಸುಬ್ರಮಣಿಯನ್ ಸ್ವಾಮಿ ವಾಗ್ದಾಳಿ
ನವದೆಹಲಿ, ಸೆಪ್ಟೆಂಬರ್ 9: ಸಂಸದ ಶಶಿ ತರೂರ್ ಪತ್ನಿ ಸುನಂದಾ ಪುಷ್ಕರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಮತ್ತೆ ಧ್ವನಿ ಎತ್ತಿದ್ದಾರೆ. ಇದು ಕೊಲೆ ಎಂದು ವೈದ್ಯರು ವರದಿ ನೀಡಿದ್ದರೂ ದೆಹಲಿ ಪೊಲೀಸರು ನ್ಯಾಯಾಲಯಕ್ಕೆ ಅದನ್ನು ಸಲ್ಲಿಸಿಯೇ ಇಲ್ಲ ಎಂದು ಆರೋಪಿಸಿದ್ದಾರೆ.
ಸುನಂದಾ ಪುಷ್ಕರ್ ಅವರ ಅಸಹಜ ಸಾವಿನ ಪ್ರಕರಣದಲ್ಲಿ ಅವರ ಮೃತದೇಹವು ಏಮ್ಸ್ ವೈದ್ಯರ ತಂಡದ ತಪಾಸಣೆಗೆ ಸಿಕ್ಕಿತ್ತು. ಡಾ. ಸುಧೀರ್ ಗುಪ್ತಾ ಅವರ ಮುಂದಾಳತ್ವದಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡಿದ್ದ ವೈದ್ಯರ ತಂಡ ಅದು ಕೊಲೆ ಎಂದು ಅಂತಿಮ ತೀರ್ಮಾನಕ್ಕೆ ಬಂದಿತ್ತು ಎಂದು ಸ್ವಾಮಿ ತಿಳಿಸಿದ್ದಾರೆ.
ಸುನಂದಾ ಅವರ ಅಸಹಜ ಸಾವಿನ ಕುರಿತು ಏಮ್ಸ್ ವೈದ್ಯರು ಸವಿವರವಾದ ಮರಣೋತ್ತರ ಪರೀಕ್ಷೆಯ ವರದಿಯನ್ನು ದೆಹಲಿ ಪೊಲೀಸರಿಗೆ ನೀಡಿದ್ದರು. ಆದರೆ ಇದುವರೆಗೂ ದೆಹಲಿ ಪೊಲೀಸರು ಅದನ್ನು ನ್ಯಾಯಾಲಯಕ್ಕೆ ಸಲ್ಲಿಸಿಲ್ಲ. ಏಕೆ? ಎಂದು ಸುಬ್ರಮಣಿಯನ್ ಸ್ವಾಮಿ ಪ್ರಶ್ನಿಸಿದ್ದಾರೆ.

ಸುನಂದಾ ಪುಷ್ಕರ್ ಸಾವು ಆತ್ಮಹತ್ಯೆಯಲ್ಲ, ಅದು ಕೊಲೆ ಎಂದು ಪ್ರತಿಪಾದಿಸಿರುವ ಸುಬ್ರಮಣಿಯನ್ ಸ್ವಾಮಿ, ಅದರ ತನಿಖೆಯನ್ನು ನ್ಯಾಯಾಲಯದ ನಿಗಾದಲ್ಲಿ ವಿಶೇಷ ತನಿಖೆ ತಂಡ ನಡೆಸಬೇಕೆಂದು ಕೋರಿ ಮನವಿ ಮಾಡಿದ್ದರು. ಈ ಬಗ್ಗೆ ಈಗಾಗಲೇ ದೋಷಾರೋಪಣೆ ಪಟ್ಟಿ ಸಲ್ಲಿಕೆಯಾಗಿದ್ದು, ವಿಚಾರಣೆ ನಡೆಯುತ್ತಿದೆ ಎಂದಿದ್ದ ನ್ಯಾಯಾಲಯ ಅವರ ಅರ್ಜಿಯನ್ನು ತಳ್ಳಿಹಾಕಿತ್ತು.
ಕಾಂಗ್ರೆಸ್ ಸಂಸದ ಶಶಿ ತರೂರ್ ಪತ್ನಿ ಸುನಂದಾ ಪುಷ್ಕರ್, 2014ರ ಜನವರಿ 17ರಂದು ದೆಹಲಿಯ ಲೀಲಾ ಪ್ಯಾಲೇಸ್ ಹೋಟೆಲ್ನಲ್ಲಿ ಶವವಾಗಿ ಪತ್ತೆಯಾಗಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications