ಬಾಬ್ರಿ ಮಸೀದಿ ಧ್ವಂಸ ಸಂಭ್ರಮಾಚರಣೆ ಬೆಂಬಲಿಸಿದ ಸ್ವಾಮಿ!
ನವದೆಹಲಿ, ಡಿಸೆಂಬರ್ 06: "ಬಾಬ್ರಿ ಮಸೀದಿ ಧ್ವಂಸವಾದ ದಿನ(1992, ಡಿಸೆಂಬರ್ 06)ವನ್ನು 'ಸಂಭ್ರಮದಿಂದ ಆಚರಿಸುವ' ವಿಶ್ವ ಹಿಂದು ಪರಿಷತ್ ಕ್ರಮವನ್ನು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಸ್ವಾಗತಿಸಿದ್ದಾರೆ. ಆದರೆ ಈ ಸಂಭ್ರಮಾಚರಣೆಯೂ 'ಶಾಂತಿಯುತ ಹಾದಿಯಿಂದ ನಡೆಯಬೇಕು' ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.
"ಬಾಬ್ರಿ ಮಸೀದಿ ಧ್ವಂಸ ದಿನವನ್ನು ಸಂಭ್ರಮಿಸುವ ಅಧಿಕಾರ ವಿಎಚ್ ಪಿ ಗೆ ಇದೆ. ಏಕೆಂದರೆ 1992 ರಲ್ಲಿ ಬಾಬ್ರಿ ಮಸೀದಿ ಧ್ವಂಸ ಚಳವಳಿಯ ಮುಂದಾಳತ್ವ ವಹಿಸಿದ್ದವರಲ್ಲಿ ಅವರೇ ಪ್ರಮುಖರು. ಅಷ್ಟಕ್ಕೂ ಅಯೋಧ್ಯೆಯ ಆ ಜಾಗದಲ್ಲಿ ಇದ್ದಿದ್ದು ರಾಮ ಮಂದಿರ. ಅದು ರಾಮ ಜನ್ಮಭೂಮಿ. ಅಲ್ಲಿ ಆಬರ್ ದೇವಾಲಯವನ್ನು ಕೆಡವಿ, ಮಸೀದಿ ನಿರ್ಮಿಸಿದ. ಆ ಸಂದರ್ಭದಲ್ಲಿ 4000-5000 ಜನರನ್ನು ಕೊಲ್ಲಲಾಯಿತು ಎನ್ನಲಾಗುತ್ತದೆ. ಅಂಥ ಮಸೀದಿಯನ್ನು ಕೆಡವಲಾಯಿತು. ಅದನ್ನು ವಿಎಚ್ ಪಿ ಆಚರಿಸುವುದು ತಪ್ಪಲ್ಲ, ಆದರೆ ಅದು ಶಾಂತಿಯುತ ಹಾದಿಯಲ್ಲಿ ನಡೆಯಬೇಕಷ್ಟೆ" ಎಂದು ಸ್ವಾಮಿ ಹೇಳಿದ್ದಾರೆ.
ವಿಎಚ್ ಪಿಯು ಬಾಬ್ರಿ ಮಸೀದಿ ಧ್ವಂಸವಾದ ಡಿಸೆಂಬರ್ 6 ಅನ್ನು ದೇಶದಾದ್ಯಂತ 'ಶೌರ್ಯ ದಿನ'ವನ್ನಾಗಿ ಆಚರಿಸುತ್ತದೆ.

ಬಾಬ್ರಿ ಮಸೀದಿ ದ್ವಂಸವಾಗಿ ಇಂದಿಗೆ 26 ವರ್ಷಗಳು ಸಂದಿದ್ದು, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಬಗ್ಗೆಯೂ ಕೇಂದ್ರ ಸರ್ಕಾರ ಚಿಂತಿಸುತ್ತಿರುವ ಕಾರಣ ಈ ಬಾರಿ ಅಯೋಧ್ಯೆಯಲ್ಲಿ ಬಿಗಿಬಂದೋಬಸ್ತ್ ನಿಯೋಜಿಸಲಾಗಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications