"ಭಗತ್ ಸಿಂಗ್, ರಾಜಗುರು, ಸುಖದೇವ್ ಗೆ ಇನ್ನೂ ಯಾಕಿಲ್ಲ ಹುತಾತ್ಮಪಟ್ಟ?"
ನವದೆಹಲಿ, ಮಾರ್ಚ್ 23: ಬ್ರಿಟಿಷರ ವಿರುದ್ಧ ಕೆಚ್ಚೆದಿಂದ ಹೋರಾಡಿ ನೇಣುಗಂಬವೇರಿದ ಭಗತ್ ಸಿಂಗ್, ಸುಖ್ ದೇವ್ ಮತ್ತು ರಾಜಗುರು ಅವರಿಗೆ ಅಧಿಕೃತವಾಗಿ 'ಹುತಾತ್ಮ' ಪಟ್ಟ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸುಖ್ ದೇವ್ ಕುಟುಂಬಸ್ಥರು ಬೇಡಿಕೆ ಇಟ್ಟಿದ್ದಾರೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ತಮ್ಮ ಬೇಡಿಕೆಗೆ ಸರ್ಕಾರ ಕಿವಿಗೊಡದೆ ಇದ್ದಲ್ಲಿ ಇಂದಿನಿಂದಲೇ(ಮಾ.23) ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. 1931 ಮಾರ್ಚ್ 23 ರಂದು ಕ್ರಾಂತಿಕಾರಿ ಹೋರಾಟಗಾರರಾದ ಭಗತ್ ಸಿಂಗ್, ಸುಖ್ ದೇವ್ ಮತ್ತು ರಾಜಗುರು ಅವರನ್ನು ಬ್ರಿಟಿಷ್ ಸರ್ಕಾರ ನೇಣಿಗೇರಿಸಿತ್ತು. 1928 ರಲ್ಲಿ ದೆಹಲಿಯ ಸೆಂಟ್ರಲ್ ಅಸೆಂಬ್ಲಿಗೆ ಬಾಂಬ್ ಎಸೆದ ಆರೋಪ ಮತ್ತು ಬ್ರಿಟಿಷ್ ಅಧಿಕಾರಿಯೊಬ್ಬನನ್ನು ಗುಂಡಿಕ್ಕಿ ಕೊಂದ ಕಾರಣಕ್ಕೆ ಅವರನ್ನು ಸೆರೆಯಲ್ಲಿರಿಸಲಾಗಿತ್ತು.
ದೇಶದ ಸ್ವಾತಂತ್ರ್ಯಕ್ಕಾಗಿ ಮಡಿದ ಈ ಮೂವರನ್ನೂ ಅನೌಪಚಾರಿಕವಾಗಿ 'ಹುತಾತ್ಮ'ರು ಎಂದು ಕರೆಯಲಾಗುತ್ತದೆಯೇ ಹೊರತು, ಅಧಿಕೃತವಾಗಿ ಅವರಿಗೆ 'ಹುತಾತ್ಮ'ಪಟ್ಟ ಸಿಕ್ಕಿಲ್ಲ. ಆದ್ದರಿಂದಲೇ ಸುಖ್ ದೇವ್ ಕುಟುಂಬ ಈ ಮೂವರಿಗೂ ಹುತಾತ್ಮ ಪಟ್ಟ ನೀಡುವಂತೆ ಬೇಡಿಕೆ ಇಟ್ಟಿದೆ.

ಪ್ರಧಾನಿಯಿಂದ ಹುತಾತ್ಮರ ಸ್ಮರಣೆ
"ಭಗತ್ ಸಿಂಗ್, ರಾಜಗುರು ಮತ್ತು ಸುಖದೇವ್ ಅವರ ಬಲಿದಾನ ನಮ್ಮ ಇತಿಹಾಸದಲ್ಲೇ ಕಣ್ಣೀರು ಭರಿಸುವಂಥ ದಿನ. ಈ ಮೂರು ಮಹಾನ್ ವ್ಯಕ್ತಿಗಳು ನಮ್ಮ ನೆಲದವರು ಎನ್ನಲು ಹೆಮ್ಮೆಯಾಗುತ್ತದೆ. ಅವರ ಯೌವ್ವನಾವಸ್ಥೆಯಲ್ಲೇ ತಮ್ಮ ಬದುಕನ್ನು ದೇಶದ ಸ್ವಾತಂತ್ರ್ಯಕ್ಕಾಗಿ ಮುಡಿಪಾಗಿಟ್ಟು, ಅವರ ವ್ಯಕ್ತಿತ್ವದ ಘನತೆಯನ್ನು ಹೆಚ್ಚಿಸಿಕೊಂಡರು" ಎಂದು ಈ ಮಹಾನ್ ನಾಯಕರನ್ನು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಸ್ಮರಿಸಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications