ಪ್ರತಿಪಕ್ಷ ಸ್ಥಾನ : ಕಾಂಗ್ರೆಸ್ ಮನವಿ ತಿರಸ್ಕಾರ
ನವದೆಹಲಿ, ಆ.20 : ಲೋಕಸಭೆಯಲ್ಲಿ ಪ್ರತಿಪಕ್ಷ ಸ್ಥಾನ ಪಡೆಯವ ಕಾಂಗ್ರೆಸ್ ಪಕ್ಷದ ಪ್ರಯತ್ನ ಫಲನೀಡಿಲ್ಲ. ಕಾಂಗ್ರೆಸ್ ಬೇಡಿಕೆಯನ್ನು ಸ್ಪೀಕರ್ ಸುಮಿತ್ರಾ ಮಹಾಜನ್ ಮಂಗಳವಾರ ಅಧಿಕೃತವಾಗಿ ತಿರಸ್ಕರಿಸಿದ್ದಾರೆ. ಹಿಂದಿನ ನಿದರ್ಶನ ಮತ್ತು ಸಂಪ್ರದಾಯ ಆಧರಿಸಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಸ್ಪೀಕರ್ ಸ್ಪಷ್ಟಪಡಿಸಿದ್ದಾರೆ.
ಮಂಗಳವಾರ ಕಾಂಗ್ರೆಸ್ ಪಕ್ಷ ಬೇಡಿಕೆಯನ್ನು ತಿರಸ್ಕರಿಸಿರುವ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು, ಕಾಂಗ್ರೆಸ್ಗೆ ಪ್ರತಿಪಕ್ಷ ಸ್ಥಾನ ನೀಡಲಾಗದು. ನನ್ನ ನಿರ್ಧಾರ ಹಿಂದಿನ ನಿದರ್ಶನಗಳನ್ನು ಆಧರಿಸಿದೆ ಮತ್ತು ಅಟಾರ್ನಿ ಜನರಲ್ ಮುಕುಲ್ ರೋಹತ ಅವರ ಸಲಹೆಯನ್ನು ಈ ಬಗ್ಗೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.

ಕಳೆದ ತಿಂಗಳು ಶರದ್ ಪವಾರ್ ನೇತೃತ್ವದ ಎನ್ಸಿಪಿ ಸೇರಿದಂತೆ ಯುಪಿಎ ಮೈತ್ರಿಕೂಟದ 60 ಸಂಸದರ ಸಹಿ ಉಳ್ಳ ಮನವಿಯನ್ನು ಸ್ಪೀಕರ್ಗೆ ಸಲ್ಲಿಸಿದ್ದ ಕಾಂಗ್ರೆಸ್, ಪ್ರತಿಪಕ್ಷ ಸ್ಥಾನಕ್ಕೆ ಬೇಡಿಕೆ ಮುಂದಿಟ್ಟಿತ್ತು. ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರತಿಪಕ್ಷದ ನಾಯಕರೆಂದು ಗುರುತಿಸುವಂತೆ ಮನವಿ ಮಾಡಿತ್ತು.
ಈ ಮನವಿ ಕುರಿತು ಪ್ರತಿಕ್ರಿಯೆ ನೀಡಿದ್ದ ಸುಮಿತ್ರಾ ಮಹಾಜನ್ ಅವರು, ಪ್ರತಿಪಕ್ಷ ಸ್ಥಾನ ನೀಡುವ ವಿಷಯವು ಸ್ಪೀಕರ್ ವಿವೇಚನೆಗೆ ಬರುವುದಿಲ್ಲ. ಈ ಸಂಬಂಧ ನೀತಿ ನಿಯಮಗಳನ್ನು ಸ್ಪೀಕರ್ ಪಾಲಿಸುತ್ತಾರೆ. ಅದರ ಹೊರತು ಪ್ರತಿಪಕ್ಷ ಸ್ಥಾನದ ನಿಯಮಗಳು ಬದಲಾಗಬೇಕು ಎಂದು ಯಾರಾದರೂ ಬಯಸುವುದಾದರೆ, ಇದಕ್ಕಾಗಿ ಸಮಿತಿಯನ್ನು ರೂಪಿಸಬೇಕು ಎಂದು ಹೇಳಿದ್ದರು.
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 44 ಸ್ಥಾನಗಳನ್ನು ಪಡೆದಿದ್ದರೂ, ಪ್ರತಿಪಕ್ಷ ಸ್ಥಾನಕ್ಕಾಗಿ ಪ್ರಯತ್ನ ನಡೆಸಿತ್ತು. ಚುನಾವಣೆಗೆ ಮೊದಲೇ ಕಾಂಗ್ರೆಸ್ ನೇತೃತ್ವದ ಯುಪಿಎ ಮೈತ್ರಿಕೂಟ ರೂಪುಗೊಂಡಿದ್ದು, ಶೇ. 10ಕ್ಕಿಂತ ಹೆಚ್ಚಿನ ಸ್ಥಾನಗಳನ್ನು ಹೊಂದಿದೆ. ಆದ್ದರಿಂದ ಪ್ರತಿಪಕ್ಷ ಸ್ಥಾನ ನೀಡಬೇಕು ಎಂದು ಹಕ್ಕು ಮಂಡಿಸಿತ್ತು.
ಖರ್ಗೆ ಪ್ರತಿಕ್ರಿಯೆ : ಸ್ಪೀಕರ್ ಪ್ರತಿಪಕ್ಷ ಸ್ಥಾನದ ಮನವಿಯನ್ನು ತಿರಸ್ಕರಿಸುವ ಬಗ್ಗೆ ಹೇಳಿಕೆ ನೀಡಿರುವ ಲೋಕಸಭೆ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು, ಪಕ್ಷದ ಹೈಕಮಾಂಡ್ ಜತೆ ಈ ವಿಷಯ ಚರ್ಚಿಸುತ್ತೇನೆ. ಪ್ರತಿಪಕ್ಷ ನಾಯಕನಾಗಿ ಗುರುತಿಸಿಕೊಳ್ಳುವುದು ಒಂದು ವಿಷಯವಾದರೆ, ನಾಯಕನಾಗಿ ಕೆಲಸ ಮಾಡುವುದು ಮತ್ತೊಂದು ಸಂಗತಿ ಎಂದು ಹೇಳಿದ್ದಾರೆ.
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ












Click it and Unblock the Notifications