ಸಚಿವ ಅರುಣ್ ಜೇಟ್ಲಿ ಕೈಲಿ ಸನ್ ಟಿವಿ ಭವಿಷ್ಯ?
ನವದೆಹಲಿ, ಜೂ.8: ಮಾರನ್ ಬ್ರದರ್ಸ್ ಒಡೆತನದ ಸನ್ ನೆಟ್ವರ್ಕ್ಸ್ ಸಂಸ್ಥೆಯ ಟಿವಿ ಚಾನೆಲ್ ಹಾಗೂ ಎಫ್ ಎಂ ವಾಹಿನಿಗೆ ಭದ್ರತಾ ಅನುಮತಿ ನೀಡಲು ನಿರಾಕರಿಸಿರುವ ಗೃಹ ಸಚಿವಾಲಯ ಈಗ ಲೈಸನ್ಸ್ ರದ್ದುಪಡಿಸಲು ಮುಂದಾಗಿದೆ. ಸನ್ ನೆಟ್ವರ್ಕ್ ಲೈಸನ್ಸ್ ರದ್ದು ಮಾಡುವ ಬಗ್ಗೆ ನಿರ್ಧರಿಸುವಂತೆ ವಾರ್ತಾ ಮತ್ತು ಪ್ರಸಾರ ಸಚಿವಾಲಯಕ್ಕೆ ಮನವಿ ಸಲ್ಲಿಸಲಾಗಿದೆ.
ಈಗ ಮಾರನ್ ಬ್ರದರ್ಸ್ ಒಡೆತನದ ಟಿವಿ ಚಾನೆಲ್ ಹಾಗೂ ಎಫ್ ಎಂ ವಾಹಿನಿಗಳ ಭವಿಷ್ಯ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅರುಣ್ ಜೇಟ್ಲಿ ಕೈಲಿದೆ. ಕಳೆದ ವರ್ಷ ಕೂಡಾ ಗೃಹ ಸಚಿವಾಲಯ ಸುಮಾರು 40ಕ್ಕೂ ಅಧಿಕ ಎಫ್ ಎಂ ವಾಹಿನಿಗಳಿಗೆ ಅನುಮತಿ ನೀಡಲು ನಿರಾಕರಿಸಿದ್ದನ್ನು ಇಲ್ಲಿ ಸ್ಮರಿಸಬಹುದು. [ಸನ್ ನೆಟ್ವರ್ಕ್ 33 ಟಿವಿ ವಾಹಿನಿ, 45 ಎಫ್ ಎಂ ಬಂದ್?]

ಲೈಸನ್ಸ್ ರದ್ದು: ಸನ್ ನೆಟ್ವರ್ಕ್ ಜಾಲದ ಟಿವಿ ಹಾಗೂ ಎಫ್ ಎಂ ವಾಹಿನಿಗಳಿಗೆ ಭದ್ರತಾ ಅನುಮತಿ ನೀಡಲು ನಿರಾಕರಿಸಿದ್ದೇಕೆ? ಎಂಬುದರ ಬಗ್ಗೆ ವಿಸ್ತೃತ ವರದಿಯನ್ನು ಗೃಹ ಸಚಿವಾಲಯ ತಯಾರಿಸಿದೆ. ಇದರ ಪ್ರತಿಯನ್ನು ವಾರ್ತಾ ಮತ್ತು ಪ್ರಸಾರ ಸಚಿವಾಲಯಕ್ಕೆ ಕಳಿಸಲಾಗಿದ್ದು, ಲೈಸನ್ಸ್ ರದ್ದು ಪಡಿಸಬಾರದೇಕೆ? ಎಂದು ಪ್ರಶ್ನಿಸಲಾಗಿದೆ. [ಲೈಸನ್ಸ್ ರದ್ದು ಭೀತಿ, ನೆಲ ಕಚ್ಚಿದ ಸನ್ ಟಿವಿ ಷೇರು]
ಭ್ರಷ್ಟಾಚಾರ, ಮನಿ ಲಾಂಡ್ರಿಂಗ್ ಹಾಗೂ ಅಕ್ರಮವಾಗಿ ಟೆಲಿಕಾಂ ಸಂಪರ್ಕ ಹೊಂದಿದ ಆರೋಪ ಇರುವುದರಿಂದ ಸನ್ ನೆಟ್ವರ್ಕ್ ಸಲ್ಲಿಸಿದ ಲೈಸನ್ ನವೀಕರಣ ಅರ್ಜಿ ಪುರಸ್ಕರಿಸಲು ಸಾಧ್ಯವಿಲ್ಲ ಎಂದು ಹೇಳಲಾಗಿದೆ. ಹೀಗಾಗಿ ಪ್ರಕರಣಗಳ ವಿಚಾರಣೆ ಜಾರಿಯಲ್ಲಿರುವ ತನಕ ಸನ್ ಟಿವಿಗೆ ಭದ್ರತಾ ಅನುಮತಿ ನೀಡಲು ಗೃಹ ಸಚಿವಾಲಯ ನಿರಾಕರಿಸಿದೆ.
ಸನ್ ಟಿವಿ ಏನು ಮಾಡಬಹುದು?: ಮೊದಲಿಗೆ ಲೈಸನ್ಸ್ ನವೀಕರಣಕ್ಕಾಗಿ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಮೊರೆ ಹೋಗಬಹುದು. ಲೈಸನ್ಸ್ ಸಿಕ್ಕ ಮೇಲೆ, ಈ ಸಚಿವಾಲಯದ ನೆರವಿನಿಂದ ಪುನಃ ಗೃಹ ಸಚಿವಾಲಯಕ್ಕೆ ಅರ್ಜಿ ಹಾಕಬಹುದು. ಕೊನೆಯದಾಗಿ ಕಳೆದ ಬಾರಿಯಂತೆ ಈ ಬಾರಿ ಕೂಡಾ ಕೋರ್ಟ್ ಮೆಟ್ಟಿಲೇರಬಹುದು. (ಒನ್ ಇಂಡಿಯಾ ಸುದ್ದಿ)
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications