ಸುನಂದಾ ಕೊಲೆ: ಪತ್ರಕರ್ತೆ ನಳಿನಿ ಸಿಂಗ್ ವಿಚಾರಣೆ
ನವದೆಹಲಿ, ಜ.23: ಕೇಂದ್ರದ ಮಾಜಿ ಸಚಿವ ಶಶಿ ತರೂರ್ ಅವರ ಪತ್ನಿ ಸುನಂದಾ ಪುಷ್ಕರ್ ಕೊಲೆ ಪ್ರಕರಣದ ತನಿಖೆ ಮುಂದುವರೆಸಿರುವ ವಿಶೇಷ ತನಿಖಾ ದಳ ಈಗ ಪತ್ರಕರ್ತ ಮೇಲೆ ಕಣ್ಣಿಟ್ಟಿದೆ. ಹಿರಿಯ ಪತ್ರಕರ್ತೆ ನಳಿನಿ ಸಿಂಗ್ ಅವರನ್ನು ವಿಚಾರಣೆಗೊಳಪಡಿಸಲು ಎಸ್ ಐಟಿ ಸಜ್ಜಾಗಿದೆ.
ಸುನಂದಾ ಪುಷ್ಕರ್ ಕೊಲೆ ಪ್ರಕರಣದಲ್ಲಿ ಪತ್ರಕರ್ತೆ ನಳಿನಿ ವಿಚಾರಣೆ ಪ್ರಮುಖ ತಿರುವು ನೀಡುವ ಸಾಧ್ಯತೆಯಿದೆ. ನಳಿನಿ ಹಾಗೂ ಸುನಂದಾ ಇಬ್ಬರಲ್ಲೂ ಆಪ್ತತೆ ಬೆಳೆದಿತ್ತು ಹಾಗೂ ಕಾಲಕಾಲಕ್ಕೆ ಇಬ್ಬರು ಮಾತುಕತೆ ನಡೆಸುತ್ತಿದ್ದರು ಎಂಬ ಅಂಶ ಗುಟ್ಟಾಗೇನೂ ಉಳಿದಿಲ್ಲ.
ಐಪಿಎಲ್ ವಿವಾದದ ಲಿಂಕ್
ನಳಿನಿ ಸಿಂಗ್ ಅವರು ಇತ್ತೀಚೆಗೆ ಐಪಿಎಲ್ ವಿವಾದ, ಕೇರಳ ಟಸ್ಕರ್ಸ್ ಖರೀದಿ ಅವ್ಯವಹಾರದ ಬಗ್ಗೆ ಮಾತನಾಡುತ್ತಾ ಸುನಂದಾ ಪುಷ್ಕರ್ ಹೆಸರು ಪ್ರಸ್ತಾಪಿಸಿದ್ದರು. ಅದರೆ, ಸ್ಪಷ್ಟವಾದ ಅಭಿಪ್ರಾಯ ಮಂಡನೆ ಮಾಡುವಲ್ಲಿ ವಿಫಲರಾಗಿದ್ದರು.

ಐಪಿಎಲ್ ನಲ್ಲಿ ನಡೆದ ವಿವಾದಗಳ ಬಗ್ಗೆ ಹೇಳಲು ಹೊರಟ ನಳಿನಿ, ಸುನಂದಾ ಹೆಸರನ್ನು ಬಳಸಿದ್ದೇಕೆ? ಎಂಬುದನ್ನು ತಿಳಿಯಲು ಎಸ್ ಐಟಿ ಮುಂದಾಗಿದೆ. ಇದು ಕೊಲೆ ಪ್ರಕರಣಕ್ಕೆ ಹೇಗೆ ಲಿಂಕ್ ಆಗುವುದೋ ತನಿಖಾ ತಂಡವೇ ನಿರ್ಧರಿಸಬೇಕಿದೆ.
ವಿಚಾರಣೆ ಹೊಸದೇನಲ್ಲ
ಸುನಂದಾ ಪುಷ್ಕರ್ ಸಾವಿನ ನಂತರ ತನ್ನ ಹಾಗೂ ಸುನಂದಾ ನಡುವಿನ ಒಡನಾಟದ ಬಗ್ಗೆ ನಳಿನಿ ಅವರು ಮ್ಯಾಜಿಸ್ಟ್ರೇಟ್ ಕೋರ್ಟಿಗೆ ತೆರಳಿ ಹೇಳಿಕೆ ನೀಡಿದ್ದರು. ಈ ಬಗ್ಗೆ ಪೊಲೀಸರು ತನ್ನನ್ನು ಹೆಚ್ಚು ಪ್ರಶ್ನಿಸುವ ಅಗತ್ಯ ಕಾಣಿಸುವುದಿಲ್ಲ ಎಂದಿದ್ದರು.
ತರಾರ್- ತರೂರ್ ಮಾತುಕತೆ
ಪಾಕಿಸ್ತಾನಿ ಪತ್ರಕರ್ತೆ ತರಾರ್ ಹಾಗೂ ಶಶಿ ತರೂರ್ ನಡುವೆ ನಡೆದಿದೆ ಎನ್ನಲಾದ ಪ್ರಣಯ ಸಂದೇಶ ವಿನಿಮಯದ ಬಗ್ಗೆ ಸುನಂದಾ ಅವರು ನಳಿನಿ ಬಳಿ ಹೇಳಿಕೊಂಡಿದ್ದರಂತೆ. ಆದರೆ, ಶಶಿ ಅವರು ಬ್ಲಾಕ್ ಬೆರಿ ಬಿಬಿಎಂ ಸಂದೇಶಗಳನ್ನು ಅಳಿಸಿ ಹಾಕಿರುವುದು ಪ್ರಮುಖಕ್ಕೆ ತಿರುವು ನೀಡಿದೆ. ನಳಿನಿ ವಿಚಾರಣೆ ವೇಳೆ ಯಾವ ವಿಷಯ ಬಹಿರಂಗ ಪಡಿಸುತ್ತಾರೆ ಎಂಬುದರ ಮೇಲೆ ಮುಂದಿನ ತನಿಖೆ ದಿಕ್ಕು ತಿಳಿಯಲಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications