ರಂಜಾನ್ ವೇಳೆ ಮತದಾನ ಸಮಯ ಬದಲಾವಣೆ ಮರುಚಿಂತನೆಗೆ ಸುಪ್ರಿಂ ಸೂಚನೆ
ನವದೆಹಲಿ, ಮೇ 03: ರಂಜಾನ್ ತಿಂಗಳಿನ ಸಮಯದಲ್ಲಿ ಮತದಾನದ ಸಮಯ ಬದಲಾವಣೆ ಮಾಡುವ ಬಗ್ಗೆ ಮರುಚಿಂತನೆ ನಡೆಸಿ, ಸಮಯದ ಬದಲಾವಣೆ ಮಾಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುವಂತೆ ಸುಪ್ರಿಂಕೋರ್ಟ್ ಚುನಾವಣಾ ಆಯೋಗಕ್ಕೆ ಸೂಚಿಸಿದೆ.
ಮೇ 6 ರಂದು ಐದನೇ ಹಂತದ ಲೋಕಸಭೆ ಚುನಾವಣೆ ಮತದಾನ ದೇಶದ ಹಲವು ರಾಜ್ಯಗಳಲ್ಲಿ ನಡೆಯಲಿದೆ. ಮೇ 5 ರಂದು ರಂಜಾನ್ ಪವಿತ್ರ ತಿಂಗಳು ಪ್ರಾರಂಭವಾಗುತ್ತದೆ, ಮುಸ್ಲಿಂ ಸಮುದಾಯದವರು ಉಪವಾಸ ಇದ್ದು ರಂಜಾನ್ ಅನ್ನು ಆಚರಿಸುತ್ತಾರೆ.

ರಂಜಾನ್ ತಿಂಗಳಿನಲ್ಲಿ ಬೆಳಿಗ್ಗೆ 7 ರಿಂದ ಸಂಜೆ 5 ರವರೆಗೆ ಉಪವಾಸ ಇರುವ ಕಾರಣ, ಮುಸ್ಲಿಂರ ಆಚರಣೆಗೆ ಅಡಚಣೆಯಾಗದಂತೆ ಮತದಾನದ ಸಮಯವನ್ನು ಬದಲಾಯಿಸಬೇಕೆಂದು ಸುಪ್ರಿಂ ಕೋರ್ಟ್ಗೆ ಸಾಕಷ್ಟು ಹಿತಾಸಕ್ತಿ ಅರ್ಜಿಗಳು ಬಂದಿದ್ದವು, ಇವುಗಳ ವಿಚಾರಣೆ ನಡೆಸಿ ಇಂದು ಸುಪ್ರಿಂಕೋರ್ಟ್ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ.
ರಂಜಾನ್ ಮಾತ್ರವಲ್ಲದೆ, ರಾಜಸ್ಥಾನ ಮತ್ತು ಇತರ ರಾಜ್ಯಗಳಲ್ಲಿ ಬಿಸಿಲಿನ ಝಳ ಅತ್ಯಧಿಕವಾಗಿದ್ದು, ಬಿಸಿಲು ಹೆಚ್ಚಿರುವ ಕಾರಣ ಮತದಾನ ಅವಧಿಯನ್ನು ಬದಲಾಯಿಸಿ ಮತದಾರರು ಸುಲಭವಾಗಿ ಮತ ಹಾಕಲು ಅನುವು ಮಾಡಿಕೊಡಬೇಕು ಎಂದು ಸಹ ಸುಪ್ರಿಂ, ಆಯೋಗಕ್ಕೆ ಸೂಚಿಸಿದೆ.
ಲೋಕಸಭೆಗೆ ಮೇ 6 , ಮೇ 12 ಮತ್ತು ಮೇ 19ರಂದು ಉಳಿದ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು , ಮೇ 23 ರಂದು ಫಲಿತಾಂಶ ಪ್ರಕಟವಾಗಲಿದೆ. ರಂಜಾನ್ ಉಪವಾಸವು ಮೇ 5 ರಿಂದ ಪ್ರಾರಂಭವಾಗಿ ಜೂನ್ 5 ರವರೆಗೆ ನಡೆಯುತ್ತದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications