ಪ್ರಶಾಂತ್ ಭೂಷಣ್ ನ್ಯಾಯಾಂಗ ನಿಂದನೆ ಪ್ರಕರಣ: ಹೊಸ ನ್ಯಾಯಪೀಠ ಸ್ಥಾಪನೆಗೆ ಮನವಿ
ನವದೆಹಲಿ, ಆಗಸ್ಟ್ 25: ಹಿರಿಯ ವಕೀಲ ಪ್ರಶಾಂತ್ ಭೂಷಣ್ ವಿರುದ್ಧದ 2009ರ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದೂಡಿದ್ದು, ಸೂಕ್ತ ನ್ಯಾಯಪೀಠದ ಎದುರು ಈ ಪ್ರಕರಣವನ್ನು ಇರಿಸುವಂತೆ ಮುಖ್ಯ ನ್ಯಾಯಮೂರ್ತಿಗೆ ಮನವಿ ಮಾಡಿದೆ.
'ನಾನು ಇನ್ನು ಕೆಲವು ದಿನಗಳಲ್ಲಿ ಪದವಿಯಿಂದ ಕೆಳಕ್ಕಿಳಿಯುತ್ತಿದ್ದೇನೆ. ಈ ಪ್ರಕರಣವು ವಿಸ್ತೃತವಾದ ವಿಚಾರಣೆಗೆ ಒಳಪಡಬೇಕಾದ ಅವಶ್ಯಕತೆಯಿದೆ' ಎಂದು ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರು ಹೇಳಿದರು. 2009ರ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆಯನ್ನು ಸೆ. 10ಕ್ಕೆ ಮುಂದೂಡಲಾಗಿದೆ.
ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ನ್ಯಾಯಾಂಗ ನಿಂದನೆ, ನ್ಯಾಯಮೂರ್ತಿಗಳ ವಿರುದ್ಧದ ಟೀಕೆ, ಅವುಗಳ ಪ್ರಕ್ರಿಯೆ, ಸ್ವಯಂಪ್ರೇರಿತ ದೂರುಗಳ ಶಿಷ್ಟಾಚಾರಗಳ ಸಂಗತಿಗಳ ಕುರಿತು ಆಳವಾದ ವಾದ ವಿವಾದ ನಡೆಯಬೇಕಾದ ಅಗತ್ಯಗಳಿವೆ ಎಂದು ಮೂವರು ನ್ಯಾಯಮೂರ್ತಿಗಳನ್ನು ಒಳಗೊಂಡ ನ್ಯಾಯಪೀಠ ಅಭಿಪ್ರಾಯಪಟ್ಟಿತು.

ತೆಹೆಲ್ಕಾ ನಿಯತಕಾಲಿಕೆಗೆ 2009ರಲ್ಲಿ ನೀಡಿದ್ದ ಸಂದರ್ಶನದಲ್ಲಿ ವಕೀಲ ಪ್ರಶಾಂತ್ ಭೂಷಣ್, ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳಾಗಿದ್ದವರು ಭ್ರಷ್ಟರಾಗಿದ್ದರು ಎಂದು ಹೇಳಿಕೆ ನೀಡಿದ್ದರು. ಇದರ ವಿರುದ್ಧ ಸುಪ್ರೀಂಕೋರ್ಟ್ನಲ್ಲಿ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಾಗಿತ್ತು.
ಪ್ರಶಾಂತ್ ಭೂಷಣ್ ಪರ ಹಾಜರಿದ್ದ ವಕೀಲ ರಾಜೀವ್ ಧವನ್, ಈ ಪ್ರಕರಣವನ್ನು ಸಂವಿಧಾನ ಪೀಠಕ್ಕೆ ವರ್ಗಾಯಿಸುವಂತೆ ಕೋರಿದರು. ಪ್ರಶಾಂತ್ ಭೂಷಣ್ ಅವರು ಕಾನೂನಿನ ಕುರಿತಾದ ಪ್ರಶ್ನೆಗಳನ್ನು ಎತ್ತಿದ್ದು, ಅದಕ್ಕೆ ಉತ್ತರಗಳು ಬೇಕಿವೆ ಎಂದರು.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications