ದೇಣಿಗೆ ವಿವರ ಸಲ್ಲಿಸಿ: ರಾಜಕೀಯ ಪಕ್ಷಗಳಿಗೆ ಸುಪ್ರೀಂಕೋರ್ಟ್ ಮಹತ್ವದ ಸೂಚನೆ
ನವದೆಹಲಿ, ಏಪ್ರಿಲ್ 12: ಚುನಾವಣೆಯಲ್ಲಿ ಪಕ್ಷಗಳು ಪಡೆಯುವ ದೇಣಿಗೆಗಳ ಮೇಲೆ ನಿಗಾ ಇರಿಸಲು ಸುಪ್ರೀಂಕೋರ್ಟ್ ಶುಕ್ರವಾರ ಮಹತ್ವದ ಆದೇಶ ನೀಡಿದೆ.
ಎಲ್ಲ ರಾಜಕೀಯ ಪಕ್ಷಗಳೂ ಎಲೆಕ್ಟೊರಲ್ ಬಾಂಡ್ಗಳ ಮೂಲಕ ಪಡೆದ ದೇಣಿಗೆಯ ವಿವರಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸುವಂತೆ ಸುಪ್ರೀಂಕೋರ್ಟ್ ಆದೇಶಿಸಿದೆ.
ಎಲೆಕ್ಟೊರಲ್ ಬಾಂಡ್ಗಳ ಕಾನೂನು ಬದ್ಧತೆಯ ಕುರಿತಂತೆ ನಡೆದ ಅರ್ಜಿಯನ್ನು ಕೈಗೆತ್ತಿಕೊಂಡಿರುವ ಸುಪ್ರೀಂಕೋರ್ಟ್, ಇದರ ಬಗ್ಗೆ ಇನ್ನೂ ವಿವರವಾದ ವಿಚಾರಣೆ ನಡೆಯುವ ಅಗತ್ಯವಿದೆ ಎಂದು ಹೇಳಿದೆ.

ಇದುವರೆಗೂ ಎಲೆಕ್ಟೊರಲ್ ಬಾಂಡ್ ಮೂಲಕ ಪಡೆದ ಎಲ್ಲ ದೇಣಿಗೆಯ ವಿವರಗಳನ್ನು ಮತ್ತು ಮೇ 15ರವರೆಗೆ ಪಡೆದುಕೊಳ್ಳುವ ಬಾಂಡ್ಗಳ ವಿವರಗಳನ್ನು ಮುಚ್ಚಿದ ಲಕೋಟೆಯಲ್ಲಿ ಮೇ 31ರ ಒಳಗೆ ಚುನಾವಣಾ ಆಯೋಗಕ್ಕೆ ಸಲ್ಲಿಸಬೇಕು.
ಇದೇ ರೀತಿ ಎಲೆಕ್ಟೊರಲ್ ಬಾಂಡ್ಗಳಿಂದ ರಾಜಕೀಯ ಪಕ್ಷಗಳು ಇಂದಿನಿಂದ ಮೇ 15ರ ವರೆಗೆ ಪಡೆದುಕೊಳ್ಳುವ ದೇಣಿಗೆಗಳ ವಿವರಗಳನ್ನು ಮುಚ್ಚಿದ ಲಕೋಟೆಯಲ್ಲಿ ಚುನಾವಣಾ ಆಯೋಗಕ್ಕೆ ಮೇ 30ರ ಒಳಗೆ ಸಲ್ಲಿಸಬೇಕು ಎಂದು ನ್ಯಾಯಪೀಠ ನಿರ್ದೇಶಿಸಿದೆ.
ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಮತ್ತು ನ್ಯಾಯಮೂರ್ತಿಗಳಾದ ದೀಪಕ್ ಗುಪ್ತಾ ಹಾಗೂ ಸಂಜೀವ್ ಖನ್ನಾ ಅವರನ್ನು ಒಳಗೊಂಡ ನ್ಯಾಯಪೀಠ, ವಕೀಲ ಪ್ರಶಾಂತ್ ಭೂಷಣ್ ಅವರು ಎನ್ಜಿಓ ಒಂದರ ಪರವಾಗಿ ಹಾಕಿದ ಅರ್ಜಿಯ ವಿಚಾರಣೆ ನಡೆಸಿತು. ಬಳಿಕ ಮುಂದಿನ ವಿಚಾರಣೆಯನ್ನು ಸೋಮವಾರಕ್ಕೆ ಕಾಯ್ದಿರಿಸಿತು.
2016-17ನೇ ಸಾಲಿನಲ್ಲಿ ಬಿಜೆಪಿ ಒಟ್ಟು 997 ಕೋಟಿ ರೂ. ದೇಣಿಗೆ ಸ್ವೀಕರಿಸಿದೆ. ಇದರಲ್ಲಿ 529 ಕೋಟಿ ರೂ. ದೇಣಿಗೆ ವಿವರಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿದೆ. ಇನ್ನು 468 ಕೋಟಿ ರೂ. ನಗದು ದೇಣಿಗೆ ಅನಾಮಧೇಯ ವ್ಯಕ್ತಿಗಳಿಂದ ದೊರಕಿರುವುದಾಗಿ ಹೇಳಿದೆ. ಕಾಂಗ್ರೆಸ್ 180 ಕೋಟಿ ದೇಣಿಗೆ ಪಡೆದುಕೊಂಡಿದ್ದು, ಅದರಲ್ಲಿ 138 ಕೋಟಿ ರೂ ಅನಾಮಧೇಯ ವ್ಯಕ್ತಿಗಳಿಂದ ದೊರೆತಿರುವುದಾಗಿ ತಿಳಿಸಿದೆ.
ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ತರುವ ಸಲುವಾಗಿ ದೇಣಿಗೆದಾರರ ಹೆಸರುಗಳನ್ನು ಬಹಿರಂಗಪಡಿಸಬೇಕು ಅಥವಾ ಎಲೆಕ್ಟೊರಲ್ ಬಾಂಡ್ಗಳ ಹಂಚಿಕೆಯನ್ನು ಸ್ಥಗಿತಗೊಳಿಸಬೇಕು ಎಂಬ ಒತ್ತಾಯಿಸಿ ದಿ ಅಸೋಸಿಯೇಟ್ ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್ ಸಂಸ್ಥೆ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು.
ಎಲೆಕ್ಟೊರಲ್ ಬಾಂಡ್ಗಳ ಯೋಜನೆ ಉದ್ದೇಶವು ಚುನಾವಣೆಗಳಲ್ಲಿ ಕಪ್ಪು ಹಣದ ಬಳಕೆಯನ್ನು ತಡೆಯುವುದಾಗಿದೆ ಎಂದು ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ವಾದಿಸಿದ್ದರು.
ದೇಣಿಗೆದಾರರು ಹೆಸರು ಬಹಿರಂಗಪಡಿಸದೆ ಇರುವ ಸಂಪ್ರದಾಯ ಹೋಗಬೇಕು. ಪಾರದರ್ಶಕತೆ ಬರಬೇಕು. ಸುಧಾರಣೆಯನ್ನು ನಾವು ಬಯಸಿದ್ದೇವೆ. ಒಂದು ಹೆಜ್ಜೆ ಮುಂದೆ ಮತ್ತು ಎರಡು ಹೆಜ್ಜೆ ಹಿಂದೆ ಸಾಗಲು ಸಾಧ್ಯವಿಲ್ಲ. ನಮಗೆ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ಬೇಕು ಎಂದು ಚುನಾವಣಾ ಆಯೋಗದ ಪರ ವಕೀಲ ರಾಕೇಶ್ ದ್ವಿವೇದಿ ಗುರುವಾರ ನಡೆದ ವಿಚಾರಣೆಯಲ್ಲಿ ಹೇಳಿದ್ದರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications