ಲಾಲೂ ಪ್ರಸಾದ್ ಯಾದವ್ ಜಾಮೀನು ಅರ್ಜಿ ಏಪ್ರಿಲ್ 10ಕ್ಕೆ ವಿಚಾರಣೆ
ನವದೆಹಲಿ, ಏಪ್ರಿಲ್ 06: ಬಹುಕೋಟಿ ಮೇವು ಹಗರಣ ಸಂಬಂಧಪಟ್ಟಂತೆ ಆರ್ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರ ಜಾಮೀನು ಅರ್ಜಿಯನ್ನು ಸುಪ್ರಿಂ ಕೋರ್ಟ್ ಏಪ್ರಿಲ್ 10 ರಂದು ವಿಚಾರಣೆ ನಡೆಸಲಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಏಪ್ರಿಲ್ 09ರ ಒಳಗಾಗಿ ಆಕ್ಷೇಪಣೆ ಹಾಗೂ ಉತ್ತರಗಳನ್ನು ಸಲ್ಲಿಸುವಂತೆ ಸಿಬಿಐಗೆ ಸುಪ್ರಿಂಕೋರ್ಟ್ ನಿರ್ದೇಶನ ನೀಡಿದೆ.
ಯಾದವ್ ಅವರು ಆರೋಗ್ಯ ಸಮಸ್ಯೆಯನ್ನು ಮುಂದುಮಾಡಿ ಜಾಮೀನು ಕೋರಿದ್ದಾರೆ. ಅವರು ರಾಂಚಿಯ ರಾಜೇಂದ್ರ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಯಾರು ಕುಬೇರರು, ಯಾರು ಕುಚೇಲರು? ಆಸ್ತಿಪಾಸ್ತಿ ವಿವರ ಬೇಕೆ?

ಜಾರ್ಖಂಡ್ ಹೈಕೋರ್ಟ್ ಲಾಲೂ ಪ್ರಸಾದ್ ಯಾದವ್ ಅವರ ಜಾಮೀನು ಅರ್ಜಿಯನ್ನು ತಿರಸ್ಕಾರಗೊಳಿಸಿತ್ತು, ಹಾಗಾಗಿ ಲಾಲೂ ಅವರು ಸುಪ್ರಿಂಕೋರ್ಟ್ ಮೆಟ್ಟಿಲೇರಿದ್ದಾರೆ, ಲಾಲೂ ಅವರ ಪರವಾಗಿ ಖ್ಯಾತಿ ವಕೀಲ ಕಪಿಲ್ ಸಿಬಲ್ ವಾದ ಮಂಡಿಸುತ್ತಿದ್ದಾರೆ.












Click it and Unblock the Notifications