ನ್ಯಾಯಾಂಗ ನಿಂದನೆ: ಆಗಸ್ಟ್.20ರಂದು ವಕೀಲ ಪ್ರಶಾಂತ್ ಭೂಷಣ್ ರಿಗೆ ಶಿಕ್ಷೆ
ನವದೆಹಲಿ, ಆಗಸ್ಟ್.14: ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಹಿರಿಯ ವಕೀಲ ಪ್ರಶಾಂತ್ ಭೂಷಣ್ ರನ್ನು ಸುಪ್ರೀಂಕೋರ್ಟ್ ಅಪರಾಧಿ ಎಂದು ಪರಿಗಣಿಸಿದೆ. ಆಗಸ್ಟ್.20ರಂದು ಶಿಕ್ಷೆಯ ಬಗ್ಗೆ ತೀರ್ಪು ನೀಡುವುದಾಗಿ ಕೋರ್ಟ್ ತಿಳಿಸಿದೆ.
ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಎಸ್.ಎ.ಬೊಬ್ಡೆ ಮತ್ತು ನಾಲ್ವರು ಪೂರ್ವಾಧಿಕಾರಿಗಳ ವಿರುದ್ಧ ವಕೀಲ ಪ್ರಶಾಂತ್ ಭೂಷಣ್ ನಿಂದನೆ ಮಾಡಿದ್ದರು. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಉಳಿಸುವಂತೆ ನ್ಯಾಯಾಂಗವು ಏನನ್ನೂ ಮಾಡಿಲ್ಲ ಎಂದು ದೂಷಿಸಿದ್ದರು.
ಭಾರತ ಲಾಕ್ ಡೌನ್ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಎಸ್.ಎ. ಬೊಬ್ಡೆ ಅವರು ಮಹಾರಾಷ್ಟ್ರದ ನಾಗಪುರದಲ್ಲಿದ್ದರು. ಅಂದು ಹರ್ಲೆ ಡೇವಿಡ್ ಸನ್ ಬೈಕ್ ಮೇಲೆ ಕುಳಿತು ಫೋಟೋ ಕ್ಲಿಕ್ಕಿಸಿಕೊಂಡಿದ್ದು ಸಖತ್ ಸುದ್ದಿಯಾಗಿತ್ತು.

ನ್ಯಾ.ಎಸ್.ಎ. ಬೊಬ್ಡೆ ನಡೆಗೆ ಪ್ರಶಾಂತ್ ಭೂಷಣ್ ವಿರೋಧ:
ಭಾರತ ಲಾಕ್ ಡೌನ್ ಆಗಿರುವ ಸಂದರ್ಭದಲ್ಲಿ ಹರ್ಲೆ ಡೇವಿಡ್ ಸನ್ ಬೈಕ್ ನಲ್ಲಿ ಕುಳಿತು ಫೋಟೋ ತೆಗೆಸಿಕೊಂಡ ನ್ಯಾ.ಎಸ್.ಎ. ಬೊಬ್ಡೆ ವಿರುದ್ಧ ವಕೀಲ ಪ್ರಶಾಂತ್ ಭೂಷಣ್ ಟ್ವಿಟರ್ ನಲ್ಲಿ ಟೀಕಿಸಿದ್ದರು. ಬೈಕ್ ಮೇಲೆ ಕುಳಿತ ನ್ಯಾ. ಎಸ್.ಎ. ಬೊಬ್ಡೆಯವರು ತಲೆಗೆ ಹೆಲ್ಮೆಟ್ ಹಾಕಿಲ್ಲ. ಅಲ್ಲದೇ ಲಾಕ್ ಡೌನ್ ನಿಂದಾಗಿ ಸುಪ್ರೀಂಕೋರ್ಟ್ ಬಾಗಿಲು ಹಾಕಿಕೊಂಡು ಬೈಕ್ ಮೇಲೆ ಸುತ್ತಾಡುತ್ತಿದ್ದಾರೆ ಎಂದೆಲ್ಲ ಟ್ವೀಟ್ ಮಾಡಿದ್ದರು.
ವಕೀಲ ಪ್ರಶಾಂತ್ ಭೂಷಣ್ ರಿಗೆ ನೋಟಿಸ್:
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ವಿರುದ್ಧ ಮಾಡಿರುವ ಟ್ವೀಟ್ ನಿಂದಾಗಿ ವಕೀಲ ಪ್ರಶಾಂತ್ ಭೂಷಣ್ ವಿರುದ್ಧ ನ್ಯಾಯಾಂಗ ನಿಂದನೆ ಕೇಸ್ ದಾಖಲಿಸಿಕೊಳ್ಳಲಾಗಿದ್ದು, ನೋಟಿಸ್ ಜಾರಿಗೊಳಿಸಲಾಗಿತ್ತು. ಈ ನೋಟಿಸ್ ಗೆ ಉತ್ತರ ನೀಡಿದ ವಕೀಲರು, ಸಿಜೆಐ ಅವರು ತಲೆಗೆ ಹೆಲ್ಮೆಟ್ ಧರಿಸಿಲ್ಲವೇಕೆ ಎಂದು ಪ್ರಶ್ನಿಸಿದ್ದಕ್ಕೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ಏಕೆಂದರೆ ಅಂದು ಅವರು ಕುಳಿತ ಬೈಕಿನ ಸ್ಟ್ಯಾಂಡ್ ಹಾಕಲಾಗಿದ್ದು, ಆಗ ಹೆಲ್ಮೆಟ್ ಧರಿಸುವ ಅಗತ್ಯ ಇರಲಿಲ್ಲ. ಆದರೆ, ಟ್ವೀಟ್ ನ ಉಳಿದ ಭಾಗಕ್ಕೆ ನಾನೀಗಲೂ ಬದ್ಧನಾಗಿದ್ದೇನೆ. ಆ ಟ್ವೀಟ್ ನ ಅಂಶಗಳನ್ನು ನಾನು ಒಪ್ಪಿಕೊಳ್ಳುತ್ತೇನೆ ಎಂದು ವಕೀಲ ಪ್ರಶಾಂತ್ ಭೂಷಣ್ ಕೋರ್ಟ್ ಗೆ ಸಲ್ಲಿಸಿದ ಅಫಿಡವಿಟ್ ನಲ್ಲಿ ಹೇಳಿದ್ದಾರೆ.
-
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ












Click it and Unblock the Notifications