ವೈವಾಹಿಕ ಅತ್ಯಾಚಾರದ ಕುರಿತು ದೆಹಲಿ ಹೈಕೋರ್ಟ್ ಭಿನ್ನ ತೀರ್ಪು; ಕೇಂದ್ರಕ್ಕೆ ಸುಪ್ರೀಂ ನೋಟಿಸ್
ನವದೆಹಲಿ, ಸೆ.16: ವೈವಾಹಿಕ ಅತ್ಯಾಚಾರದ ಕುರಿತು ದೆಹಲಿ ಹೈಕೋರ್ಟ್ನ ಭಿನ್ನ ತೀರ್ಪಿನ ವಿರುದ್ಧದ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಶುಕ್ರವಾರ ಕೇಂದ್ರ ಸರ್ಕಾರ ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿದೆ.
ವೈವಾಹಿಕ ಅತ್ಯಾಚಾರವನ್ನು ಅಪರಾಧವಾಗಿ ಪರಿಗಣಿಸಬೇಕೆಂಬ ವಿಚಾರದ ಬಗ್ಗೆ ದೆಹಲಿ ಹೈಕೋರ್ಟ್ ನ್ಯಾಯಪೀಠದಲ್ಲಿದ್ದ ನ್ಯಾ. ರಾಜೀವ್ ಶಕಧೇರ್ (Justice Rajeev Shakdher) ಮತ್ತು ನ್ಯಾ. ಹರಿಶಂಕರ್ ಅವರು ಭಿನ್ನ ತೀರ್ಪು ನೀಡಿದ್ದರು.
ಅಖಿಲ ಭಾರತ ಪ್ರಜಾಸತ್ತಾತ್ಮಕ ಮಹಿಳಾ ಸಂಘ (AIDWA) ಮತ್ತು ಇತರರು ದೆಹಲಿ ಹೈಕೋರ್ಟ್ನ ವಿಭಜಿತ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.

ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ ಮತ್ತು ನ್ಯಾಯಮೂರ್ತಿ ಬಿವಿ ನಾಗರತ್ನ ಅವರ ಪೀಠವು ಈ ವಿಷಯವನ್ನು ಪರಿಶೀಲಿಸಲು ಒಪ್ಪಿಕೊಂಡಿದೆ. ಫೆಬ್ರವರಿ 2023 ರಲ್ಲಿ ಮುಂದಿನ ವಿಚಾರಣೆಗೆ ಈ ಪ್ರಕರಣವನ್ನು ಪಟ್ಟಿ ಮಾಡಿದೆ.
ನ್ಯಾಯಾಧೀಶರ ಮಧ್ಯೆ ಭಿನ್ನ ತೀರ್ಪು:
ಮೇ 12 ರಂದು ದೆಹಲಿ ಹೈಕೋರ್ಟ್ನ ಇಬ್ಬರು ನ್ಯಾಯಾಧೀಶರ ಪೀಠವು ಒಂದು ಸಮಸ್ಯೆಯ ಕುರಿತು ವಿಭಜಿತ ತೀರ್ಪು ಪ್ರಕಟಿಸಿತು.
ದೆಹಲಿ ಹೈಕೋರ್ಟ್ನ ನ್ಯಾಯಾಧೀಶ ನ್ಯಾಯಮೂರ್ತಿ ರಾಜೀವ್ ಶಕಧೇರ್ ಅವರು ವೈವಾಹಿಕ ಅತ್ಯಾಚಾರವನ್ನು ಅಪರಾಧವಾಗಿ ಪರಿಗಣಿಸಬೇಕೆಂಬ ಪರವಾಗಿ ತೀರ್ಪು ನೀಡಿದರು. ಆದರೆ, ನ್ಯಾಯಮೂರ್ತಿ ಹರಿ ಶಂಕರ್ ಅಭಿಪ್ರಾಯವನ್ನು ಒಪ್ಪಲಿಲ್ಲ. ಸೆಕ್ಷನ್ 375ರ 2ನೇ ವಿನಾಯಿತಿಯಿಂದ ಸಂವಿಧಾನದ ಉಲ್ಲಂಘನೆಯಾಗುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ನ್ಯಾಯಮೂರ್ತಿ ರಾಜೀವ್ ಶಕಧೇರ್ ನೀಡಿದ ಆದೇಶದ ಪ್ರಕಾರ, ಹೆಂಡತಿಯ ಒಪ್ಪಿಗೆಯಿಲ್ಲದೆ ನಡೆಸುವ ಒತ್ತಾಯದ ಲೈಂಗಿಕತೆಯಲ್ಲಿ ಪತಿಯ ವಿರುದ್ಧ ಅತ್ಯಾಚಾರ ಪ್ರಕರಣದಲ್ಲಿ ಗಂಡನನ್ನು ಕ್ರಿಮಿನಲ್ ಹೊಣೆಗಾರರನ್ನಾಗಿ ಮಾಡಬಹುದು. ನ್ಯಾಯಮೂರ್ತಿ ಹರಿಶಂಕರ್ ಅವರು ಈ ಅಭಿಪ್ರಾಯಕ್ಕೆ ಅಸಮ್ಮತಿ ವ್ಯಕ್ತಪಡಿಸಿದ್ದರು.
ಹೈಕೋರ್ಟ್ ವಿಭಜಿತ ತೀರ್ಪಿನ ವಿರುದ್ಧ ಮೇಲ್ಮನವಿ:
ಅಖಿಲ ಭಾರತ ಪ್ರಜಾಸತ್ತಾತ್ಮಕ ಮಹಿಳಾ ಸಂಘ ದೆಹಲಿ ಹೈಕೋರ್ಟ್ನ ಇಬ್ಬರು ನ್ಯಾಯಾಧೀಶರ ಪೀಠದ ವಿಭಜಿತ ತೀರ್ಪಿನ ವಿರುದ್ಧ ಸುಪ್ರೀಂ ಕೋಟ್್ಗೆ ಮೇಲ್ಮನವಿ ಸಲ್ಲಿಸಿದ್ದರು.
ಅಖಿಲ ಭಾರತ ಪ್ರಜಾಸತ್ತಾತ್ಮಕ ಮಹಿಳಾ ಸಂಘ ಪರ ವಕೀಲ ಕರುಣಾ ನುಂಡಿ ವಾದ ಮಂಡಿಸಿದ್ದು, ವಕೀಲ ರಾಹುಲ್ ನಾರಾಯಣ್ ಮೂಲಕ ಸುಪ್ರೀಂ ಕೋಟ್್ಗೆ ಮನವಿ ಸಲ್ಲಿಸಲಾಗಿದೆ.
AIDWA ತನ್ನ ಮನವಿಯಲ್ಲಿ, ವೈವಾಹಿಕ ಅತ್ಯಾಚಾರಕ್ಕೆ ನೀಡಲಾದ ವಿನಾಯಿತಿ ವಿನಾಶಕಾರಿಯಾಗಿದೆ. ಇದು ಒಪ್ಪಿಗೆಯಿಲ್ಲದ ಲೈಂಗಿಕ ಚಟುವಟಿಕೆಯನ್ನು ಸ್ಪಷ್ಟವಾಗಿ ನಿಷೇಧಿಸುವ ಅತ್ಯಾಚಾರ ಕಾನೂನುಗಳಿಗೆ ಈ ವಿನಾಯಿತಿ ವಿರುದ್ಧವಾಗಿದೆ ಎಂದು ತಿಳಿಸಿದೆ. ಇದು ಮದುವೆಯಲ್ಲಿ ಮಹಿಳೆಯ ಹಕ್ಕುಗಳಿಗಿಂತ ಮದುವೆಯ ಗೌಪ್ಯತೆಯನ್ನು ಎತ್ತಿ ಹಿಡಿಯುತ್ತದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ವೈವಾಹಿಕ ಅತ್ಯಾಚಾರ ವಿನಾಯಿತಿಯು ಸಂವಿಧಾನದ 14, 19 (1) (ಎ) ಮತ್ತು 21 ನೇ ವಿಧಿಗಳನ್ನು ಉಲ್ಲಂಘಿಸುತ್ತದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications