ವಕೀಲ ಪ್ರಶಾಂತ್ ಭೂಷಣ್ ಗೆ ಸುಪ್ರೀಂ ಕೋರ್ಟ್ ನೋಟಿಸ್
ನವದೆಹಲಿ, ಫೆಬ್ರವರಿ 6: ವಕೀಲ ಹಾಗೂ ಹೋರಾಟಗಾರ ಪ್ರಶಾಂತ್ ಭೂಷಣ್ ಅವರಿಗೆ ಸುಪ್ರೀಂ ಕೋರ್ಟ್ ನಿಂದ ನೋಟಿಸ್ ನೀಡಲಾಗಿದೆ. ನಾಗೇಶ್ವರ್ ರಾವ್ ಅವರನ್ನು ಮಧ್ಯಂತರವಾಗಿ ಸಿಬಿಐ ಮುಖ್ಯಸ್ಥರನ್ನಾಗಿ ಸರಕಾರ ನೇಮಿಸಿದಾಗ ನಿಂದನಾತ್ಮಕ ಟ್ವೀಟ್ ಮಾಡಿದ್ದಾರೆ ಎಂದು ಪ್ರಶಾಂತ್ ಭೂಷಣ್ ವಿರುದ್ಧ ಕೇಂದ್ರ ಸರಕಾರ ಹಾಗೂ ಅಟಾರ್ನಿ ಜನರಲ್ ಆರೋಪವಾಗಿದೆ.
ಕೋರ್ಟ್ ನಲ್ಲಿದ್ದ ಪ್ರಶಾಂತ್ ಭೂಷಣ್, ತಮ್ಮ ಪ್ರತಿಕ್ರಿಯೆಯನ್ನು ನೀಡಲು ಮೂರು ವಾರಗಳ ಸಮಯ ನೀಡಬೇಕು ಎಂದು ಕೋರ್ಟ್ ಅನ್ನು ಕೇಳಿಕೊಂಡಿದ್ದಾರೆ. ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಮಾತನಾಡಿ, ಸರಕಾರದ ವಿರುದ್ಧ ಪ್ರಶಾಂತ್ ಭೂಷಣ್ ಆರೋಪ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
"ಆರೋಪ ಮಾಡುವ ಬದಲಿಗೆ ಸಭೆಯಲ್ಲಿ ನಡೆದ ಚರ್ಚೆಯ ಮುಖ್ಯಾಂಶವನ್ನು ಕೋರಿ ಪ್ರಶಾಂತ್ ಅರ್ಜಿ ಹಾಕಬಹುದಿತ್ತು. ವಕೀಲರಾದವರು ಕೋರ್ಟ್ ನಲ್ಲಿರುವ ವಿಚಾರದ ಬಗ್ಗೆ ಬರೆಯಬಹುದಾ ಎಂಬ ಬಗ್ಗೆ ಮಾರ್ಗದರ್ಶಿ ಸೂತ್ರ ರೂಪಿಸುವ ಸಮಯ ಬಂದಿದೆ" ಎಂದು ವೇಣುಗೋಪಾಲ್ ಹೇಳಿದರು. ಇದೇ ವಿಚಾರವಾಗಿ ಅವರು ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಿದ್ದಾರೆ.

ಶಿಕ್ಷೆಯ ಬಗ್ಗೆಯಾಗಲೀ ಅಥವಾ ಈ ವಿಚಾರದ ದೊಡ್ಡ ಮಟ್ಟದ ಪ್ರಭಾವದ ಬಗ್ಗೆಯಾಗಲೀ ವೇಣುಗೋಪಾಲ್ ಒತ್ತು ನೀಡಿ, ಏನನ್ನೂ ಹೇಳಿಲ್ಲ. ಆದರೆ ಸಾಲಿಸಿಟರ್ ಜನರ್ ತುಷಾರ್ ಮೆಹ್ತಾ ಮಾತನಾಡಿ, ಪ್ರಶಾಂತ್ ಭೂಷಣ್ ಹೀಗೆ ಮಾಡುತ್ತಿರುವುದು ಇದೇ ಮೊದಲೇನಲ್ಲ. ಆದ್ದರಿಂದ ಅವರಿಗೆ ಶಿಕ್ಷೆ ಆಗಬೇಕು ಎಂದು ಕೇಂದ್ರ ಬಯಸುತ್ತದೆ ಎಂದಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications