ನವೆಂಬರ್ ನಲ್ಲಿ ಸುಪ್ರೀಂ ಕೋರ್ಟ್ ನಿಂದ ಹೊರಬೀಳಲಿರುವ ಐತಿಹಾಸಿಕ ತೀರ್ಪುಗಳು
ಅಕ್ಟೋಬರ್, ನವದೆಹಲಿ 31: ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರು ನಿವೃತ್ತರಾಗುವ ಮುನ್ನ ಕೆಲವು ಮಹತ್ವದ ತೀರ್ಪುಗಳನ್ನು ನೀಡಲಿದ್ದು, ನವೆಂಬರ್ ತಿಂಗಳು ಆ ಎಲ್ಲ ತೀರ್ಪುಗಳಿಗೆ ಸಾಕ್ಷಿಯಾಗಲಿದೆ.
ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರ ನೇತೃತ್ವದದ ಸುಪ್ರೀಂ ಕೋರ್ಟ್ ನ ವಿವಿಧ ಪೀಠಗಳು ನೀಡಲಿರುವ ತೀರ್ಪುಗಳಲ್ಲಿ ಅಯೋಧ್ಯೆ ವಿವಾದ, ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶ ವಿವಾದ ಸೇರಿದಂತೆ ನಾಲ್ಕು ಮಹತ್ವದ ಕೇಸುಗಳ ತೀರ್ಪು ನವೆಂಬರ್ ನಲ್ಲಿ ಹೊರಬೀಳಲಿದೆ.
ಈಗಾಗಲೇ ರಂಜನ್ ಗೊಗೊಯ್ ಅವರ ನಿವೃತ್ತಿ ನಂತರ ಶರದ್ ಅರವಿಂದ್ ಬೊಬ್ಡೆ ಅವರು ಸುಪ್ರೀಂ ಕೋರ್ಟ್ ನ ಮುಂದಿನ ಮುಖ್ಯ ನ್ಯಾಯಮೂರ್ತಿ ಎಂದು ಈಗಾಗಲೇ ಘೋಷಿಸಲಾಗಿದೆ.
ನವೆಂಬರ್ 17 ರಂದು ರಂಜನ್ ಗೊಗೊಯ್ ಅವರು ನಿವೃತ್ತರಾಗಲಿದ್ದು, ನಿವೃತ್ತಿಗೂ ಮುನ್ನ ಅವರು ಈ ಕೆಳಗಿನ ಪ್ರಕರಣಗಳಲ್ಲಿ ಐತಿಹಾಸಿಕ ತೀರ್ಪು ನೀಡಲಿದ್ದಾರೆ.

ಅಯೋಧ್ಯೆ ಭೂ ವಿವಾದ ಪ್ರಕರಣ
ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಪಂಸದಸ್ಯರ ಪೀಠ ನವೆಂಬರ್ 17 ರೊಳಗೆ ನೀಡಬೇಕಾದ ಮಹತ್ವದ ತೀರ್ಪುಗಳಲ್ಲಿ ಅಯೋಧ್ತೆ ತೀರ್ಪು ಅಗ್ರಪಂಕ್ತಿಯಲ್ಲಿದೆ. ಅಯೋಧ್ಯೆಯಲ್ಲಿರುವ ರಾಮಜನ್ಮ ಭೂಮಿ ಆಸ್ತಿ ಹಕ್ಕು ಪ್ರಕರಣಕ್ಕೆ ಸಂಬಂಧಿಸಿದಂತೆ 40 ದಿನಗಳ ನಡೆದ ಪ್ರತಿದಿನ ವಿಚಾರಣೆ ಅಕ್ಟೋಬರ್ 16ರಂದು ಅಂತ್ಯ ಕಂಡಿತ್ತು.

ಶಬರಿಮಲೆ ಮೇಲ್ಮನವಿ ತೀರ್ಪು
ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಮಹಿಳೆಯರಿಗೆ ಪ್ರವೇಶಕ್ಕೆ ಹೇರಿದ್ದ ನಿಷೇಧ ತೆರವುಗೊಳಿಸಿ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯ ಕುರಿತ ತೀರ್ಪು ಸಹ ನವೆಂಬರ್ ನಲ್ಲೇ ಹೊರಬೀಳಬೇಕಿದೆ. ದೇವಸ್ಥಾನದ ಆಡಳಿತ ಮಂಡಳಿಯ ನಿಯಮಾವಳಿ ಪ್ರಕಾರ 10ರಿಂದ 50 ವರ್ಷ ವಯಸ್ಸಿನ ಮಹಿಳೆಯರು ದೇವಸ್ಥಾನದ ಆವರಣಕ್ಕೆ ಭೇಟಿ ನೀಡಲು ಅವಕಾಶವಿರಲಿಲ್ಲ. ಋತುಮತಿಯಾಗುವ ವಯಸ್ಸಿನ ಹೆಣ್ಣುಮಕ್ಕಳು ದೇವಾಲಯದ ಆವರಣಕ್ಕೆ ಪ್ರವೇಶಿಸಿದರೆ ಮಂದಿರದ ಪಾವಿತ್ರ್ಯಕ್ಕೆ ಧಕ್ಕೆಯಾಗುತ್ತದೆ ಎಂಬುದು ದೇವಾಲಯದ ಆಡಳಿತ ಮಂಡಳಿಯ ವಾದವಾಗಿತ್ತು. ಆದರೆ 2018 ರ ಸೆಪ್ಟೆಂಬರ್ ನಲ್ಲಿ ಈ ನಿಷೇಧವನ್ನು ತೆರವುಗೊಳಿಸಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿತ್ತು.

ರಫೇಲ್ ತೀರ್ಪು ಮರುಪರಿಶೀಲನಾ ಅರ್ಜಿ
2018ರ ಡಿಸೆಂಬರ್ನಲ್ಲಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಸುಪ್ರೀಂಕೋರ್ಟ್ ನ್ಯಾಯಪೀಠವು ಕೇಂದ್ರ ಸರ್ಕಾರಕ್ಕೆ ನೀಡಿದ್ದ ಕ್ಲೀನ್ ಚಿಟ್ ತೀರ್ಪಿನ ವಿರುದ್ಧ ಮರುಪರಿಶೀಲನಾ ಅರ್ಜಿ ಸಲ್ಲಿಸಲಾಗಿತ್ತು. ಇದರ ವಿಚಾರಣೆಗೆ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿತ್ತು. ಈ ಪ್ರಕರಣದ ತೀರ್ಪನ್ನೂ ಸುಪ್ರೀಂ ಕೋರ್ಟ್ ನೀಡಲಿದೆ.

ಚೌಕಿದಾರ್ ಚೋರ್ ಹೈ
ರಾಹುಲ್ ಗಾಂಧಿಯವರ ಚೌಕಿದಾರ್ ಚೋರ್ ಪ್ರಕರಣ ರಫೇಲ್ ತೀರ್ಪಿನ ಮರುಪರಿಶೀಲನೆಗೆ ಒಪ್ಪಿಕೊಂಡ ಸುಪ್ರೀಂ ಕೋರ್ಟ್ ಆದೇಶನ್ನು ಸ್ವಾಗತಿಸಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮಾತಿನ ಭರದಲ್ಲಿ, "ಚೌಕಿದಾರ ಚೋರ್ ಹೈ" ಎಂದಿದ್ದರು. ಅವರ ಈ ಹೇಳಿಕೆಯ ವಿರುದ್ಧ ಬಿಜೆಪಿ ಹೇರಿದ್ದ ಪ್ರಕರಣದ ತೀರ್ಪೂ ಇದೇ ನವೆಂಬರ್ ನಲ್ಲಿ ಹೊರಬೀಳಲಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video












Click it and Unblock the Notifications