ಕಲ್ಲಿದ್ದಲು ಹಗರಣ: 214 ಕಂಪನಿಗೆ 'ಸುಪ್ರೀಂ' ಶಾಕ್
ನವದೆಹಲಿ, ಸೆ.24: ಎರಡು ಅಲ್ಟ್ರಾ ಮೆಗಾಪವರ್ ಯೋಜನೆಯಲ್ಲಿ ತೊಡಗಿರುವ ಕಂಪನಿಗಳು, ಸರ್ಕಾರಿ ಸ್ವಾಮ್ಯದ ನಾಲ್ಕು ಕಂಪನಿಗಳಿಗೆ ಕಲ್ಲಿದ್ದಲು ಹಂಚಿಕೆಯಾಗಿರುವುದನ್ನು ಹೊರತುಪಡಿಸಿ ಸುಮಾರು 214ಕ್ಕೂ ಅಧಿಕ ಖಾಸಗಿ ಕಂಪನಿಗಳಿಗೆ ಸಿಕ್ಕಿರುವ ಕಲ್ಲಿದ್ದಲು ಹಂಚಿಕೆಯನ್ನು ಸುಪ್ರೀಂಕೋರ್ಟ್ ಬುಧವಾರ ರದ್ದುಗೊಳಿಸಿದೆ.
ಕಲ್ಲಿದ್ದಲು ನಿಕ್ಷೇಪ ಹಂಚಿಕೆಯಲ್ಲಿ ಅಕ್ರಮ ಕಂಡು ಬಂದಿದ್ದು ದೇಶದ ಸಂಪತ್ತನ್ನು ಲೂಟಿಯಾಗುತ್ತಿದೆ. ನಿಯಮ ಪಾಲಿಸದ ಕಂಪನಿಗಳಿಗೆ ನೀಡಿರುವ ಹಂಚಿಕೆ ರದ್ದುಗೊಳಿಸಲಾಗುವುದು ಎಂದು ಆಗಸ್ಟ್ 25 ರಂದು ಸುಪ್ರೀಂಕೋರ್ಟ್ ಆದೇಶ ನೀಡಿತ್ತು. ಈ ಆದೇಶಕ್ಕೆ ಅನುಗುಣವಾಗಿ ಬುಧವಾರ ಸುಪ್ರೀಂಕೋರ್ಟ್ ಪ್ರತಿ ಆದೇಶ ನೀಡಿ ಒಟ್ಟು 214 ಖಾಸಗಿ ಕಂಪನಿಗಳನ್ನು ರದ್ದುಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ ಆರ್ ಎಂ ಲೋಧಾ ಅವರು ಮಹತ್ವದ ಆದೇಶ ನೀಡಿದೆ.

1993ರಿಂದ 2010ರವರೆಗಿನ ಹಂಚಿಕೆಯಾಗಿದ್ದ ಕಲ್ಲಿದ್ದಲು ನಿಕ್ಷೇಪಗಳ ಪೈಕಿ ಸರ್ಕಾರಿ ಸ್ವಾಮ್ಯದ ನಾಲ್ಕು ಹಂಚಿಕೆಗಳನ್ನು ಹೊರತುಪಡಿಸಿ ಖಾಸಗಿ ಸ್ವಾಮ್ಯದ 214 ಹಂಚಿಕೆಗಳನ್ನು ರದ್ದುಗೊಳಿಸಿದ್ದು, ಅವುಗಳನ್ನು ಮುಚ್ಚಲು 6 ತಿಂಗಳ ಕಾಲಾವಕಾಶವನ್ನು ಸುಪ್ರೀಂಕೋರ್ಟ್ ನೀಡಿದೆ. ಸರ್ಕಾರಿ ಸ್ವಾಮ್ಯದ ಸಸನ್, ಯುಎಂಪಿಪಿ, ಎನ್ಟಿಪಿಸಿ ಹಾಗೂ ಸೇಲ್ ಕಂಪನಿಗಳು ವಿದ್ಯುತ್ ಉತ್ಪಾದನೆಯಲ್ಲಿ ತೊಡಗಿರುವುದರಿಂದ ಈ ನಾಲ್ಕು ಕಂಪನಿಗಳ ಹಂಚಿಕೆಯನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿಲ್ಲ.
ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಸಿಎಜಿ ನೀಡಿರುವ ವರದಿ ಆಧಾರಿಸಿ 42 ಕಂಪನಿಗಳಿಗೆ ಪ್ರತಿ ಮೆಟ್ರಿಕ್ ಟನ್ ಕಲ್ಲಿದ್ದಲು ಹಂಚಿಕೆಗೆ ಹೆಚ್ಚುವರಿ 295 ರು ನೀಡುವಂತೆ ಕೋರ್ಟ್ ಸೂಚಿಸಿದೆ. ಈ ಹಗರಣಕ್ಕೆ ಸಂಬಂಧಿಸಿದಂತೆ ಕುಮಾರ್ ಮಂಗಲಂ ಬಿರ್ಲಾ, ಪಿಸಿ ಪಾರಖ್, ನವೀನ್ ಜಿಂದಾಲ್, ದಾಸರಿ ನಾರಾಯಣ ರಾವ್ ವಿರುದ್ಧ ಸಿಬಿಐ ಎಫ್ ಐಆರ್ ದಾಖಲಿಸಿದೆ. ತನಿಖಾ ವರದಿಯನ್ನು ಸರ್ಕಾರದೊಡನೆ ಹಂಚಿಕೊಳ್ಳದಂತೆ ಸಿಬಿಐಗೆ ಸುಪ್ರೀಂಕೋರ್ಟ್ ನಿರ್ಬಂಧ ಹೇರಿದೆ. ಈ ಹಗರಣದಿಂದ ದೇಶದ ಬೊಕ್ಕಸಕ್ಕೆ ಸುಮಾರು 1.86 ಲಕ್ಷ ಕೋಟಿ ಮೊತ್ತದಷ್ಟು ನಷ್ಟ ಉಂಟಾಗಿದೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications