Get Updates
Get notified of breaking news, exclusive insights, and must-see stories!

ಪರಿಶಿಷ್ಟ ನೌಕರರ ಬಡ್ತಿ ಮಧ್ಯಂತರ ಆದೇಶ ನಿರಾಕರಿಸಿದ ಸುಪ್ರೀಂ

ನವದೆಹಲಿ, ಜುಲೈ 22: ಪರಿಶಿಷ್ಟ ಜಾತಿ ಮತ್ತು ಪಂಗಡದ ನೌಕರರಿಗೆ ಬಡ್ತಿಯ ಮಧ್ಯಂತರ ಆದೇಶವನ್ನು ಸುಪ್ರೀಂಕೋರ್ಟ್ ನಿರಾಕರಿಸಿದೆ.

Recommended Video

      America ನಂತರ Indiaದಲ್ಲಿ ಅತಿ ಹೆಚ್ಚು Covid test | Oneindia Kannada

      ಸಾಮಾನ್ಯ ವರ್ಗದ ನೌಕರರ ಪರವಾಗಿ ಹಾಜರಿದ್ದ ಹಿರಿಯ ವಕೀಲ ರಾಜೀವ್ ಧವನ್ ಮತ್ತು ವಕೀಲ ಕುಮಾರ್ ಪರಿಮಳ್ ಅವರು, ಈ ವಿಷಯದಲ್ಲಿ ಮಧ್ಯಂತರ ಆದೇಶವನ್ನು ಜಾರಿಗೊಳಿಸಬೇಕೆಂಬ ಮನವಿಗೆ ವಿರೋಧ ವ್ಯಕ್ತಪಡಿದರು. ವರ್ಚುವಲ್ ನ್ಯಾಯಾಲಯದ ಬದಲಿಗೆ ಭೌತಿಕ ನ್ಯಾಯಾಲಯದಲ್ಲಿ ಈ ವಿಷಯದಲ್ಲಿ ಆಲಿಸಬೇಕು ಎಂದು ಮನವಿ ಮಾಡಿದರು.

      ಪರಿಶಿಷ್ಟ ಜಾತಿ ಮತ್ತು ಪಂಗಡದ ನೌಕರರಿಗೆ ಬಡ್ತಿ ನೀಡುವಲ್ಲಿ ಮೀಸಲಾತಿಯ ಯಥಾಸ್ಥಿತಿಯನ್ನು ಕಾಯ್ದುಕೊಳ್ಳಲು 2019ರ ಏಪ್ರಿಲ್ 15ರಂದು ಅಂಗೀಕರಿಸಿದ ಆದೇಶದ ಕುರಿತು ಸ್ಪಷ್ಟೀಕರಣ ನೀಡುವಂತೆ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ಪರಿಗಣಿಸಲು ಸುಪ್ರೀಂಕೋರ್ಟ್ ಬುಧವಾರ ನಿರಾಕರಸಿದೆ.

      Supreme Court Refuses Interim Order On Promotion Of SC/ST Employees

      ನ್ಯಾಯದ ಹಿತದೃಷ್ಟಿಯಿಂದ ನಾಲ್ಕು ವಾರಗಳ ನಂತರ ಅಂತಿಮವಾಗಿ ನಾವು ಇದರ ವಿಚಾರಣೆ ಕೈಗೆತ್ತಿಕೊಳ್ಳುತ್ತೇವೆ ಎಂದು ಮುಖ್ಯ ನ್ಯಾಯಮೂರ್ತಿಗಳಾದ ಎಸ್ ಎ ಬೊಬಡೆ, ನ್ಯಾಯಮೂರ್ತಿ ಎಲ್ ನಾಗೇಶ್ವರರಾವ್ ಅವರನ್ನೊಳಗೊಂಡ ನ್ಯಾಯಪೀಠವು , ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ಅವರಿಗೆ ಮೌಖಿಕವಾಗಿ ತಿಳಿಸಿದೆ.

      ಏಳು ನ್ಯಾಯಾಧೀಶರ ಸಮಿತಿಯು ಇದಕ್ಕೆ ಸ್ಪಂದಿಸಿದ್ದು ಭೌತಿಕ ನ್ಯಾಯಾಲಯಗಳ ಪುನರಾರಂಭದ ಬಗ್ಗೆ ಪರಿಗಣಿಸಿದ್ದು, ಇನ್ನು ನಾಲ್ಕು ವಾರಗಳೊಳಗೆ ಈ ಸಮಸ್ಯೆಯನ್ನು ಪರಿಹರಿಸಲಾಗುವುದು, ಆದ್ದರಿಂದ ಎಲ್ಲಾ ತ್ವರಿತ ವಿಷಯಗಳ ಪ್ರಕರಣಗಳನ್ನು ನಾಲ್ಕು ವಾರಗಳ ಬಳಿಕ ವಿಚಾರಣೆಗೆ ಎತ್ತಿಕೊಳ್ಳಲಾಗುವುದು ಎಂದು ತಿಳಿಸಿದೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+