ಜ್ಞಾನವಾಪಿ ಮಸೀದಿ ಸರ್ವೆಗೆ ತಡೆ ನೀಡಲು ಸುಪ್ರೀಂ ನಿರಾಕರಣೆ
ನವದೆಹಲಿ, ಮೇ 13: ವಾರಣಾಸಿಯ ಜ್ಞಾನವಾಪಿ ಮಸೀದಿಯ ನಡೆಸಲಾಗುವ ಸರ್ವೆಗೆ ತಡೆ ನೀಡಬೇಕೆಂಬ ಕೋರಿಕೆಯನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿದೆ. ಮಸೀದಿ ಸರ್ವೆಗೆ ತಡೆ ಕೊಡಲು ನಿರಾಕರಿಸಿದೆ. ಆದರೆ, ಸುಪ್ರೀಂ ಕೋರ್ಟ್ನಲ್ಲಿ ಈ ವಿಚಾರದ ಬಗ್ಗೆ ವಿಚಾರಣೆ ಇನ್ನೂ ನಡೆಯುತ್ತಿದೆ.
"ನಾವು ದಾಖಲೆಗಳನ್ನು ನೋಡಿಲ್ಲ. ಈ ವಿಚಾರ ಏನೆಂದೇ ನಮಗೆ ಗೊತ್ತಿಲ್ಲ. ನನಗಂಗೂ ಏನೂ ಗೊತ್ತಿಲ್ಲ. ಹಾಗಿದ್ದಲ್ಲಿ ಹೇಗೆ ನಾನು ಆದೇಶ ಕೊಡಲಿ. ಮೊದಲು ನಾನು ಓದಿ ಆ ನಂತರ ಆದೇಶ ಕೊಡುತ್ತೇನೆ" ಎಂದು ಭಾರತೀಯ ಮುಖ್ಯನ್ಯಾಯಮೂರ್ತಿ ಎನ್ ವಿ ರಮಣ ತಿಳಿಸಿದರು.
ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಮಸೀದಿ ಕಾಂಪ್ಲೆಕ್ಸ್ನಲ್ಲಿ ನಡೆಸಬೇಕೆಂದಿರುವ ಸರ್ವೇಕ್ಷಣೆಗೆ ತಡೆ ನೀಡಬೇಕೆಂದು ಕೋರಿ ಅಂಜುಮನ್ ಇಂತೇಜಾಮಿಯಾ ಮಸ್ಜಿದ್ ಕಮಿಟಿ ಸಂಘಟನೆಯು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಸಿಜೆಐ ಇದ್ದ ನ್ಯಾಯಪೀಠದಿಂದ ಇದರ ವಿಚಾರಣೆ ನಡೆಯುತ್ತಿದೆ. ವಾರಣಾಸಿ ಸಿವಿಲ್ ಕೋರ್ಟ್ನಲ್ಲಿ ವ್ಯಾಜ್ಯ ಇದ್ದು ಅಲ್ಲಿಯವರೆಗೆ ಯಥಾಸ್ಥಿತಿ ಪಾಲಿಸಿಕೊಂಡು ಹೋಗುವಂತೆ ಆದೇಶ ನೀಡಬೇಕು ಎಂದು ಹಿರಿಯ ವಕೀಲ ಹುಜೇಫಾ ಅಹ್ಮದಿ ಮನವಿ ಮಾಡಿದರು.

"ವಾರಣಾಸಿ ಆಸ್ತಿಗೆ ಸಂಬಂಧಿಸಿದಂತೆ ಸರ್ವೆಗೆ ನಿರ್ದೇಶನ ನೀಡಲಾಗಿದೆ. ಆದರೆ, ಇದು ಪೂಜಾ ಸ್ಥಳಗಳ ಕಾಯ್ದೆ ಅಡಿ ಬರುವ ವಿಚಾರ. ಆದರೆ, ಸರ್ವೆ ನಡೆಸುವಂತೆ ಕೋರ್ಟ್ ಕಮಿಷನರ್ಗೆ ನ್ಯಾಯಾಲಯ ಆದೇಶ ನೀಡಿದೆ. ಇದು ಕಾಯ್ದೆ ಉಲ್ಲಂಘನೆ ಆಗುತ್ತದೆ" ಎಂದು ವಕೀಲ ಹುಜೇಫಾ ಅಹ್ಮದಿ ವಾದಿಸಿದರು.
ನಿನ್ನೆ ಮೇ 12ರಂದು ವಾರಣಾಸಿ ಸಿವಿಲ್ ಕೋರ್ಟ್ ನೀಡಿದ ಆದೇಶದಲ್ಲಿ, ಜ್ಞಾನವಾಪಿ ಮಸೀದಿಯಲ್ಲಿ ಪರಿಶೀಲನೆ ನಡೆಸಿ ವಿಡಿಯೋ ಶೂಟ್ ಮಾಡಬೇಕು. ಹಿಂದೂ ದೇವರ ವಿಗ್ರಹಗಳ ಅವಶೇಷವೇನಾದರೂ ಇದ್ದರೆ ಸಾಕ್ಷ್ಯಾಧಾರ ಸಂಗ್ರಹಿಸಬೇಕು ಎಂದು ನಿರ್ದೇಶನ ನೀಡಿತ್ತು.
ಈ ಸರ್ವೆ ಕಾರ್ಯಕ್ಕೆ ಮೂವರು ಕೋರ್ಟ್ ಕಮಿಷನರ್ಗಳನ್ನು ನೇಮಿಸಲಾಗಿದೆ. ಮೇ 17ರೊಳಗೆ ಇದರ ಸರ್ವೆ ಆಗಬೇಕು ಎಂದು ತಿಳಿಸಿದೆ.

ಐವರು ಮಹಿಳೆರಿಂದ ಅರ್ಜಿ:
ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿಯ ಆವರಣದಲ್ಲಿ ಶೃಂಗಾರ್ ಗೌರಿ ಮಂದಿರವೂ ಇದೆ. ಇಲ್ಲಿ ನಿತ್ಯವೂ ಪೂಜೆ ಸಲ್ಲಿಸಲು ಅವಕಾಶ ಕೊಡಬೇಕು ಎಂದು ಐವರು ಮಹಿಳೆಯರು ಹಿಂದೆ ಸ್ಥಳೀಯ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಮಸೀದಿಯ ಒಳಗೆ ಇನ್ನೂ ಹಲವು ಹಿಂದೂ ದೇವರುಗಳ ಮೂರ್ತಿಗಳಿರಬಹುದು ಎಂದು ಸಂಶಯ ವ್ಯಕ್ಪಡಿಸಿದ್ದರು. ಈ ಸಂಬಂಧ, ಮಸೀದಿಯಲ್ಲಿ ಸರ್ವೆ ನಡೆಸಿ ಮೇ 10ರೊಳಗೆ ವರದಿ ನೀಡುವಂತೆ ಕೋರ್ಟ್ ಕಮಿಷನರ್ಗೆ ನ್ಯಾಯಾಲಯ ಸೂಚಿಸಿತ್ತು. ಆದರೆ, ಮಸೀದಿಯೊಳಗೆ ವಿಡಿಯೋ ರೆಕಾರ್ಡ್ ಮಾಡಲು ಮಸೀದಿ ಸಮಿತಿಯವರು ಬಿಟ್ಟಿರಲಿಲ್ಲ. ಈಗ ಸಿವಿಲ್ ಕೋರ್ಟ್ ಮತ್ತೆ ಮಸೀದಿಯಲ್ಲಿ ಸರ್ವೆಗೆ ಆದೇಶ ನೀಡಿದೆ.
ಈ ಐವರು ಮಹಿಳೆಯರು ಪೂಜೆ ವಿಚಾರವಾಗಿ ಅರ್ಜಿ ಹಾಕಿದ್ದರೆ, ವಿಜಯ್ ಶಂಕರ್ ರಸ್ತೋಗಿ ಎಂಬ ಇನ್ನೊಬ್ಬ ವ್ಯಕ್ತಿ, ಗ್ಯಾನವಾಪಿ ಮಸೀದಿ ಹಿಂದೆ ಕಾಶಿ ವಿಶ್ವನಾಥ ದೇವಸ್ಥಾನದ ಭಾಗವಾಗಿತ್ತು ಎಂದು ವಾದಿಸಿ 1991ರಲ್ಲೇ ಪ್ರಕರಣ ದಾಖಲಿಸಿದ್ದರು. ಆ ಪ್ರಕರಣದ ವಿಚಾರಣೆ ಇನ್ನೂ ಬಾಕಿ ಉಳಿದುಕೊಂಡು ಬಂದಿದೆ.
(ಒನ್ಇಂಡಿಯಾ ಸುದ್ದಿ)
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications