ಪಿ.ಚಿದಂಬರಂ ಜಾಮೀನು ಅರ್ಜಿ: ಸೆಪ್ಟೆಂಬರ್ 5 ಕ್ಕೆ ಸುಪ್ರೀಂ ಆದೇಶ
ನವದೆಹಲಿ, ಆಗಸ್ಟ್ 29: ಸಿಬಿಐ ವಶದಲ್ಲಿರುವ ಪಿ.ಚಿದಂಬರಂ ಅವರು ಸುಪ್ರೀಂಕೋರ್ಟ್ನಲ್ಲಿ ಹೂಡಿದ್ದ ಅರ್ಜಿಯ ಆದೇಶವನ್ನು ಸೆಪ್ಟೆಂಬರ್ 5 ರಂದು ನೀಡುವುದಾಗಿ ಸುಪ್ರೀಂಕೋರ್ಟ್ ಹೇಳಿದೆ.
ನಿರೀಕ್ಷಣಾ ಜಾಮೀನನ್ನು ರದ್ದು ಮಾಡಿದ ದೆಹಲಿ ಹೈಕೋರ್ಟ್ ನ ಕ್ರಮವನ್ನು ಪ್ರಶ್ನಿಸಿ ಚಿದಂಬರಂ ಅವರು ಸುಪ್ರೀಂಕೋರ್ಟ್ಗೆ ಅರ್ಜಿ ಹೂಡಿದ್ದರು. ಇದರ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಆದೇಶವನ್ನು ಸೆಪ್ಟೆಂಬರ್ ಐದರಂದು ನೀಡುವುದಾಗಿ ಹೇಳಿದೆ.
ಪಿ. ಚಿದಂಬರಂಗೆ ಗಾಯದ ಮೇಲೆ ಬರೆ: ಮತ್ತೆ ಸಿಬಿಐ ವಶಕ್ಕೆ
ಚಿದಂಬರಂ ಅವರು ಐಎನ್ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಶದಲ್ಲಿದ್ದಾರೆ. ಆದರೆ ಇಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ನಿರೀಕ್ಷಣಾ ಜಾಮೀನನ್ನು ರದ್ದು ಮಾಡಲಾಗಿತ್ತು. ಅದನ್ನು ಪ್ರಶ್ನಿಸಿ ಚಿದಂಬರಂ ಅವರು ಸುಪ್ರೀಂಕೋರ್ಟ್ಗೆ ಮೊರೆ ಹೋಗಿದ್ದರು.
ಆಗಸ್ಟ್ 30 ರ ವರೆಗೂ ಪಿ.ಚಿದಂಬರಂ ಅವರನ್ನು ಸಿಬಿಐಗೆ ವಶಕ್ಕೆ ನೀಡಿ ಸುಪ್ರೀಕೋರ್ಟ್ ಆಗಸ್ಟ್ 26 ರಂದು ಆದೇಶ ನೀಡಿತ್ತು. ನಾಳೆಗೆ ಅವಧಿಗೆ ಮುಕ್ತಾಯವಾಗಲಿದ್ದು, ಅವಧಿ ಮುಂದುವರೆಸಲು ಸಿಬಿಐ ಮನವಿ ಸಲ್ಲಿಸುವ ಸಾಧ್ಯತೆ ಇದೆ.
ಚಿದಂಬರಂಗೆ ಮತ್ತೆ ಸಂಕಷ್ಟ: ಸುಪ್ರೀಂಕೋರ್ಟ್ನಲ್ಲಿ ಅರ್ಜಿ ವಜಾ
ಐಎನ್ಎಕ್ಸ್ ಮೀಡಿಯಾ ಪ್ರಕರಣದ ವಿಚಾರಣೆಗೆಂದು ಪಿ.ಚಿದಂಬರಂ ಅವರನ್ನು ಆಗಸ್ಟ್ 21ರಂದು ಸಿಬಿಐ ತನ್ನ ವಶಕ್ಕೆ ತೆಗೆದುಕೊಂಡಿದೆ. ಪ್ರಸ್ತುತ ಅವರು ಸಿಬಿಐ ವಶದಲ್ಲಿಯೇ ಇದ್ದಾರೆ.