ವ್ಯಭಿಚಾರ ಅಪರಾಧವಲ್ಲ: ಸುಪ್ರೀಂ ಐತಿಹಾಸಿಕ ತೀರ್ಪು
Recommended Video

ನವದೆಹಲಿ, ಸೆಪ್ಟೆಂಬರ್ 27: ವ್ಯಭಿಚಾರಕ್ಕೆ ಶಿಕ್ಷೆ ವಿಧಿಸುವ ಐಪಿಸಿ(ಭಾರತೀಯ ದಂಡ ಸಂಹಿತೆ)ಯ ಸೆಕ್ಷನ್ 497 ಅನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು(ಸೆ.27) ತೀರ್ಪು ನೀಡಿದೆ. ದೀಪಕ್ ಮಿಶ್ರಾ ನೇತೃತ್ವದ ಪಂಚ ಸದಸ್ಯ ಸಾಂವಿಧಾನಿಕ ಪೀಠ ಈ ಐತಿಹಾಸಿಕ ತೀರ್ಪು ನೀಡಿದೆ.
ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ 'ವ್ಯಭಿಚಾರವನ್ನು ಅಪರಾಧ ಎಂದು ಪರಿಗಣಿಸುವ ಸೆಕ್ಷನ್ 497 ಅಸಾಂವಿಧಾನಿಕ' ಎಂದಿದ್ದಾರೆ.

'ವ್ಯಭಿಚಾರ ಅಪರಾಧವಾಗುವುದಕ್ಕೆ ಸಾಧ್ಯವಿಲ್ಲ. ಆದರೆ ಅದು ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದರೆ ಮಾತ್ರ ಅಪರಾಧವಾಗುತ್ತದೆ' ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ವ್ಯಭಿಚಾರವು ಸೆಕ್ಷನ್ 306 ಪ್ರಕಾರ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದಲ್ಲಿ ಅದು ಅಪರಾಧವಾಗುತ್ತದೆ. ಇಲ್ಲವೆಂದರೆ ಅದನ್ನು ಅಪರಾಧ ಎಂದು ಪರಿಗಣಿಸಿ, ಶಿಕ್ಷಿಸುವುದು ಸರಿಯಲ್ಲ ಎಂದು ಸುಪ್ರೀಂ ಐತಿಹಾಸಿಕ ತೀರ್ಪು ನೀಡಿದೆ.
"ಸಮಾನತೆ ಎಂಬುದು ವ್ಯವಸ್ಥೆಯನ್ನು ಆಳುತ್ತಿರುವ ತತ್ತ್ವ. ಪತಿಯು ಪತ್ನಿಯ ಮಾಲೀಕನಲ್ಲ! ಅಂತೆಯೇ ವ್ಯಭಿಚಾರವನ್ನು ಅಪರಾಧವೆಂದು ಪರಿಗಣಿಸುವುದಕ್ಕಾಗುವುದಿಲ್ಲ. ಅದು ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದರೆ ಮಾತ್ರವೇ ಅಪರಾಧ" ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ಪಟ್ಟಿದೆ.
ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾ. ಚಂದ್ರಚೂಡ್, ನ್ಯಾ. ನಾರಿಮನ್, ನ್ಯಾ. ಖಾನ್ವಿಲ್ಕರ್ ಅವರ ಅಭಿಪ್ರಾಯಕ್ಕೆ ವಿಭಾಗೀಯ ಪೀಠದಲ್ಲಿನ ಏಕೈಕ ಮಹಿಳಾ ನ್ಯಾ. ಇಂದು ಮಲ್ಹೋತ್ರಾ ಸಹ ದನಿಗೂಡಿಸಿದರು.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications