15 ದಿನದಲ್ಲಿ ವಲಸೆ ಕಾರ್ಮಿಕರನ್ನು ಊರುಗಳಿಗೆ ಕಳುಹಿಸಬೇಕು- ಸುಪ್ರೀಂಕೋರ್ಟ್
ದೆಹಲಿ, ಜೂನ್ 5: ಕೊರೊನಾ ವೈರಸ್ ಲಾಕ್ಡೌನ್ ಜಾರಿಯಾದ ಬಳಿಕ ದೇಶದಲ್ಲಿ ನಿರುದ್ಯೋಗ ಸೃಷ್ಟಿಯಾಗಿದೆ. ದೇಶದ ಪ್ರಮುಖ ನಗರಗಳಿಗೆ ವಲಸೆ ಬಂದು ಕೆಲಸ ಮಾಡುತ್ತಿದ್ದ ಕಾರ್ಮಿಕರು ಈಗ ಸ್ವಂತ ಊರುಗಳಿಗೆ ವಾಪಸ್ ಹೋಗಿದ್ದಾರೆ. ಇದರಿಂದ ಕೈಗಾರಿಕೆ, ಕಂಪನಿ ಹಾಗೂ ಇನ್ನಿತರ ಕಚೇರಿಗಳು ಬಂದ್ ಆಗಿದ್ದವು.
Recommended Video
ಲಾಕ್ಡೌನ್ನಿಂದ ಕಂಪನಿಗಳು, ಗಾರ್ಮೆಂಟ್ಸ್, ಕೈಗಾರಿಕೆಗಳು ನಷ್ಟ ಅನುಭವಿಸಿದ ಹಿನ್ನೆಲೆ ಕಾರ್ಮಿಕರನ್ನು ಕೆಲಸದಿಂದ ತೆಗೆದುಹಾಕಿರುವ ಘಟನೆಗಳು ವರದಿಯಾಗಿದೆ.
ಕಾರ್ಮಿಕರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಸುಪ್ರೀಂಕೋರ್ಟ್ ಸ್ವ-ಇಚ್ಛೆಯಿಂದ ಈ ಬಗ್ಗೆ ಸರ್ಕಾರದ ಬಳಿ ಮಾಹಿತಿ ಕೇಳಿತ್ತು. ''ಕಾರ್ಮಿಕರ ಸಾಗಣೆ ಪ್ರಕ್ರಿಯೆ ಶಾಶ್ವತವಾಗಿ ಮುಂದುವರಿಸಲು ಸಾಧ್ಯವಿಲ್ಲ. 15 ದಿನದಲ್ಲಿ ವಲಸೆ ಕಾರ್ಮಿಕರನ್ನು ಊರುಗಳಿಗೆ ಕಳುಹಿಸಿಕೊಡಿ'' ಎಂದು ರಾಜ್ಯಗಳಿಗೆ ಸುಪ್ರೀಂಕೋರ್ಟ್ ತಿಳಿಸಿದೆ. ಜೊತೆಗೆ ಊರುಗಳಿಗೆ ವಾಪಸ್ ಆಗಿರುವ ''ವಲಸೆ ಕಾರ್ಮಿಕರಿಗೆ ಉದ್ಯೋಗಗಳನ್ನು ಸೃಷ್ಟಿಸಿ ಎಂದು ಸುಪ್ರೀಂಕೋರ್ಟ್ ಸೂಚಿಸಿದೆ.
The Supreme Court said, all states must create employment for migrants pic.twitter.com/UiAVL1wwsX
— ANI (@ANI) June 5, 2020
ದೇಶಾದ್ಯಂತ ಸುಮಾರು 1 ಕೋಟಿ ವಲಸೆ ಕಾರ್ಮಿಕರನ್ನು ಸ್ವಂತ ಊರುಗಳಿಗೆ ಕಳುಹಿಸಿಕೊಡಲಾಗಿದೆ. ಇದಕ್ಕಾಗಿ ಜೂನ್ 3ನೇ ತಾರೀಕಿನವರೆಗೂ 4200ಕ್ಕೂ ಹೆಚ್ಚು ಶ್ರಮಿಕ್ ರೈಲು ಸಂಚರಿಸಿದೆ ಎಂದು ಕೇಂದ್ರ ಸರ್ಕಾರ ನ್ಯಾಯಾಲಯಕ್ಕೆ ಮಾಹಿತಿ ನೀಡಿದೆ.

''ಸುಮಾರು 28 ಲಕ್ಷ ಜನರು ರಾಜ್ಯಕ್ಕೆ ಮರಳಿದ್ದಾರೆ ಮತ್ತು ಅವರಿಗೆ ಉದ್ಯೋಗಾವಕಾಶಗಳನ್ನು ಒದಗಿಸಲಾಗುತ್ತಿದೆ'' ಎಂದು ಬಿಹಾರ ಸರ್ಕಾರಕ್ಕೆ ಹಾಜರಾದ ರಂಜಿತ್ ಕುಮಾರ್ ಸುಪ್ರೀಂ ಕೋರ್ಟ್ಗೆ ತಿಳಿಸಿದ್ದಾರೆ.
ಈ ಸಂಬಂಧ ದೆಹಲಿ, ಉತ್ತರ ಪ್ರದೇಶ, ರಾಜಸ್ಥಾನ, ಬಿಹಾರ್ ರಾಜ್ಯ ಸರ್ಕಾರಗಳು ಸುಪ್ರೀಂಕೋರ್ಟ್ನಲ್ಲಿ ಮಾಹಿತಿ ನೀಡಿದ್ದಾರೆ. ಇಲ್ಲಿಯವರೆಗೂ ಎಷ್ಟು ಜನ ವಲಸೆ ಕಾರ್ಮಿಕರನ್ನು ರಾಜ್ಯ ಕಳುಹಿಸಿಕೊಟ್ಟಿದೆ ಎಂದು ಅಂಕಿ ಅಂಶದ ವರದಿ ಸಲ್ಲಿಸಿದ್ದಾರೆ. ವಲಸೆ ಕಾರ್ಮಿಕರ ವಿಷಯಕ್ಕೆ ಸಂಬಂಧಪಟ್ಟಂತೆ ಈ ಪ್ರಕರಣದ ತೀರ್ಪನ್ನು ಜೂನ್ 9ಕ್ಕೆ ಕಾಯ್ದರಿಸಿದೆ.
-
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ












Click it and Unblock the Notifications