ಮೆಟ್ರೋಗಾಗಿ ಮರ ಕಟಾವು: ಸುಪ್ರೀಂಕೋರ್ಟ್ ಮಧ್ಯಂತರ ತಡೆ
ನವದೆಹಲಿ, ಅಕ್ಟೋಬರ್ 7: ಮುಂಬೈನ ಆರೇ ಕಾಲೋನಿಯಲ್ಲಿ ಮೆಟ್ರೋ ಮಾರ್ಗ ನಿರ್ಮಾಣಕ್ಕಾಗಿ ಮರಗಳನ್ನು ಕಟಾವು ಮಾಡುವ ಮಹಾರಾಷ್ಟ್ರ ಸರ್ಕಾರದ ಕ್ರಮಕ್ಕೆ ಸುಪ್ರೀಂಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ.
ಮುಂದಿನ ಆದೇಶದವರೆಗೂ ಮರಗಳನ್ನು ಕಡಿಯುವ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವಂತೆ ವಿಶೇಷ ರಜಾ ಪೀಠದ ನ್ಯಾಯಮೂರ್ತಿಗಳಾದ ಅರುಣ್ ಮಿಶ್ರಾ ಮತ್ತು ಅಶೋಕ್ ಭೂಷಣ್ ಅವರು ಮಧ್ಯಂತರ ತಡೆಯಾಜ್ಞೆ ನೀಡಿತು. ಜತೆಗೆ ಮರಗಳನ್ನು ಕಡಿಯುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದಕ್ಕೆ ಬಂಧನಕ್ಕೆ ಒಳಗಾದ ಪ್ರತಿಭಟನಾಕಾರರನ್ನು ಬಿಡುಗಡೆ ಮಾಡುವಂತೆ ಸೂಚಿಸಿತು.
ಅ. 21ರವರೆಗೂ ಮರಗಳನ್ನು ಕಡಿಯುವಂತಿಲ್ಲ ಎಂದಿರುವ ಸುಪ್ರೀಂಕೋರ್ಟ್, ವಿಚಾರಣೆಯನ್ನು ಅ. 14ಕ್ಕೆ ಮುಂದೂಡಿತು. ಸರ್ಕಾರದ ಪರವಾಗಿ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ನ್ಯಾಯಪೀಠಕ್ಕೆ ಭರವಸೆ ನೀಡಿತು.

ಮೆಟ್ರೋ ಕಾರ್ ಶೆಡ್ ನಿರ್ಮಾಣಕ್ಕಾಗಿ 2,500 ಮರಗಳನ್ನು ಕಡಿಯಲು ಮುಂಬೈ ಮೆಟ್ರೋ ರೈಲು ನಿಗಮ ಮುಂದಾಗಿತ್ತು. ಇದಕ್ಕೆ ಪರಿಸರವಾದಿಗಳ ತೀವ್ರ ವಿರೋಧವಿದ್ದಿದ್ದರಿಂದ ರಾತ್ರೋರಾತ್ರಿ ಮರಗಳನ್ನು ಕಡಿಯಲಾಗಿತ್ತು. ಇದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ 29 ಮಂದಿಯನ್ನು ಭಾನುವಾರ ಬಂಧಿಸಲಾಗಿತ್ತು. ಇದನ್ನು ಖಂಡಿಸಿ ವಿದ್ಯಾರ್ಥಿಗಳ ಗುಂಪೊಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರಿಗೆ ಪತ್ರಬರೆದಿತ್ತು. ಅದರ ಆಧಾರದಲ್ಲಿ ವಿಚಾರಣೆ ನಡೆಸಲು ಇಬ್ಬರು ನ್ಯಾಯಮೂರ್ತಿಗಳ ವಿಶೇಷ ನ್ಯಾಯಪೀಠ ರಚಿಸಲಾಗಿತ್ತು.
ಆರೆ ಕಾಲೋನಿಯಲ್ಲಿ 1,287 ಹೆಕ್ಟೇರ್ ಪ್ರದೇಶದಲ್ಲಿ ಉದ್ಯಾನಕ್ಕೆ ಹೊಂದಿಕೊಂಡಂತೆ ಕಾರ್ ಶೆಡ್ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. 1951ರಲ್ಲಿ ಪ್ರಧಾನಿ ಜವಹರಲಾಲ್ ನೆಹರೂ ಅವರು 12 ಗ್ರಾಮಗಳನ್ನು ಒಳಗೊಂಡ ಆರೆ ಮಿಲ್ಕ್ ಕಾಲೋನಿಯಲ್ಲಿ ಗಿಡ ನೆಟ್ಟು ಈ ಉದ್ಯಾನವನ್ನು ಉದ್ಘಾಟಿಸಿದ್ದರು.
-
Darshan: ನಟ ದರ್ಶನ್ ಕಾನೂನು ಹೋರಾಟಕ್ಕೆ ಗೆಲುವು: 'ಬಾಸ್' ಸಿನಿಮಾ ಬಿಡುಗಡೆಗೆ ಕೋರ್ಟ್ ತಡೆ -
Copra Price: ಇದೇ ಮೊಟ್ಟ ಮೊದಲ ಬಾರಿ ತಿಪಟೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ -
KSRTC ನೌಕರರ ಹಿಂಬಾಕಿ 1271 ರೂ ಬಿಡುಗಡೆ; ವೇತನ ಹೆಚ್ಚಳಕ್ಕೆ ಮುಹೂರ್ತ ಫಿಕ್ಸ್: ಏ.17ಕ್ಕೆ ನಿರ್ಣಾಯಕ ಸಭೆ -
ಕರ್ನಾಟಕ ದ್ವಿತೀಯ PUC ಫಲಿತಾಂಶಕ್ಕೆ ತಟ್ಟಿದ ಚುನಾವಣಾ ನೀತಿ ಸಂಹಿತೆ ಬಿಸಿ: ಏಪ್ರಿಲ್ 8ಕ್ಕೂ ರಿಸಲ್ಟ್ ಬರೋದು ಡೌಟ್? -
Viral: ಕಚೇರಿಗೆ ಬಂದ ಪೋಷಕರು, ಮ್ಯಾನೇಜರ್ ಬಳಿ ಮಗಳ ವರ್ತನೆ ಬಗ್ಗೆ ವಿಚಾರಣೆ: ಶಾಲಾ ದಿನಗಳನ್ನು ನೆನಪಿಸಿದ ವಿಡಿಯೋ -
Divorce Celebration: ಡಿವೋರ್ಸ್ ಪಡೆದ ಮಗಳಿಗೆ ಸಿಹಿ ತಿನ್ನಿಸಿ ಅದ್ದೂರಿ ಸ್ವಾಗತ: ತಂದೆಯ ಸಂಭ್ರಮಾಚರಣೆ ವಿಡಿಯೋ ವೈರಲ್ -
Gold Rate April 7: ಚಿನ್ನ - ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್ನ್ಯೂಸ್ -
Viral Video: ಆರ್ಸಿಬಿ Vs ಸಿಎಸ್ಕೆ ಪಂದ್ಯ; ಕರ್ನಾಟಕ Vs ತಮಿಳುನಾಡು ಮಾಡಬೇಡಿ ಎಂದ ಸಿಎಸ್ಕೆ ಫ್ಯಾನ್ -
Viral Video: ನಾಳೆಯೇ ನಿಮ್ಮ ಕೆಲಸ ಹೋದರೆ ಏನು ಮಾಡುವಿರಿ? ಮಾಜಿ ಗೂಗಲ್ ಉದ್ಯೋಗಿಯ ಪ್ರಶ್ನೆಗೆ ದಂಗಾದ ನೆಟ್ಟಿಗರು -
Karnataka Rain Updates: ಚಂಡಮಾರುತ ಪ್ರಸರಣ ಪ್ರಭಾವ: ಬೆಂಗಳೂರು ಸೇರಿ ಕರ್ನಾಟಕದ 8 ಜಿಲ್ಲೆಗಳಲ್ಲಿ 3ದಿನ ಮಳೆ -
Horoscope April 8: ಕೆಲವರಿಗೆ ಯಶಸ್ಸು, ಕೆಲವರಿಗೆ ಜಾಗ್ರತೆ ಸೂಚಿಸುವ ದಿನ ಭವಿಷ್ಯ -
April 7 Horoscope: ಸ್ಪರ್ಧೆಯಲ್ಲಿ ಜಯ ಮತ್ತು ಹೊಸ ಉದ್ಯೋಗ ಅವಕಾಶಗಳು












Click it and Unblock the Notifications