ಅಲೋಕ್ ವರ್ಮಾ ಕಡ್ಡಾಯ ರಜೆ ವಿಚಾರ: ಇಂದು ಸುಪ್ರೀಂನಲ್ಲಿ ವಿಚಾರಣೆ
ನವದೆಹಲಿ, ಅಕ್ಟೋಬರ್ 26: ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರಿಗೆ ಕಡ್ಡಾಯ ರಜೆ ನೀಡಿರುವ ಕೇಂದ್ರ ಸರ್ಕಾರದ ಕ್ರಮ ವಿರೋಧಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಇಂದು(ಅ.26) ಸುಪ್ರೀಂ ಕೋರ್ಟ್ ನಡೆಸಲಿದೆ.
ಜೊತೆಗೆ ತಗೆ ಕಡ್ಡಾಯ ರಜೆ ನೀಡಿ, 1986 ರ ಬ್ಯಾಚ್ ನ ಐಪಿಎಸ್ ಅಧಿಕಾರಿ ನಾಗೇಶ್ವರ್ ರಾವ್ ಅವರನ್ನು ಹಂಗಾಮಿ ನಿರ್ದೇಶಕರನ್ನಾಗಿ ಆಯ್ಕೆ ಮಾಡಿರುವ ಕ್ರಮಕ್ಕೆ ತಡೆ ನೀಡುವಂತೆಯೂ ಅಲೋಕ್ ವರ್ಮಾ ಕೋರಿದ್ದಾರೆ. ಈ ಕುರಿತ ವಿಚಾರಣೆಯ್ನೂ ಸುಪ್ರೀಂ ಕೋರ್ಟ್ ಇಂದು ಕೈಗೆತ್ತಿಕೊಳ್ಳಲಿದೆ.
ಸಂವಿಧಾನಕ್ಕೆ, ಸಿಜೆಐಗೆ, ಜನತೆಗೆ ಅವಮಾನ ಮಾಡಿದ್ದಾರೆ ಮೋದಿ: ರಾಹುಲ್
ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್, ನ್ಯಾ ಎಸ್ ಕೆ ಕೌಲ್ ಮತ್ತು ಕೆ ಎಂ ಜೋಸೆಫ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಈ ಅರ್ಜಿಯ ವಿಚಾರಣೆ ನಡೆಸಲಿದೆ.
ಸಿಬಿಐ ನಿರ್ದೇಶಕ ರಾಕೇಶ್ ಆಸ್ಥಾನ ಅವರ ವಿರುದ್ಧ ಹೊರಿಸಲಾದ ಭ್ರಷ್ಟಾಚಾರ ಆರೋಪದ ಕುರಿತು ವಿಚಾರಣೆ ನಡೆಸುವಂತೆ ಕೋರಿ 'ಕಾಮನ್ ಕಾಸ್' ಎಂಬ ಎನ್ ಜಿಒ ವೊಂದು ಸಲ್ಲಿಸಿದ ಅರ್ಜಿಯ ವಿಚಾರಣೆಯೂ ಇಂದೇ ವಿಚಾರಣೆಗೊಳಪಡಲಿದೆ.
ಮೋದಿಗೆ ಸಂಚಕಾರ ತರಲಿದ್ದ ಕೇಸುಗಳ ತನಿಖೆ ಮಾಡುತ್ತಿದ್ದ ಅಲೋಕ್ ಕುಮಾರ್
ಸಿಬಿಐ ನಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಹಗರಣಕ್ಕೆ ಸಂಬಂಧಿಸಿದಂತೆ ಅಲೋಕ್ ವರ್ಮಾ ಅವರನ್ನು ಬುಧವಾರವಷ್ಟೇ ಕಡ್ಡಾಯ ರಜೆಯ ಮೇಲೆ ಕಳಿಸಲಾಗಿದೆ. ಜೊತೆಗೆ ವಿಶೇಷ ನಿರ್ದೇಶಕ ರಾಕೇಶ್ ಆಸ್ಥಾನ ಅವರ ವಿರುದ್ಧವೂ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಅವರನ್ನೂ ಕಡ್ಡಾಯ ರಜೆಯ ಮೇಲೆ ಕಳಿಸಲಾಗಿದೆ.