ಅಯೋಧ್ಯೆ ವಿವಾದ: ಸುಪ್ರೀಂ ಕೋರ್ಟ್ ನಲ್ಲಿ ಇಂದು ವಿಚಾರಣೆ
ನವದೆಹಲಿ, ಜನವರಿ 04: ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ನಡೆಸಲಿದೆ.
ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯ್ ಮತ್ತು ನ್ಯಾ. ಎಸ್ ಕೆ ಕೌಲ್ ಅವರಿರುವ ನ್ಯಾಯಪೀಠ ಅರ್ಜಿಯ ವಿಚಾರಣೆ ನಡೆಸಲಿದ್ದು, ಕಳೆದ ಅಕ್ಟೋಬರ್ ನಲ್ಲೇ ತ್ವರಿತವಾಗಿ ವಿಚಾರಣೆ ನಡೆಸುವಂತೆ ಅರ್ಜಿ ಸಲ್ಲಿಸಲಾಗಿತ್ತು.
1859ರಿಂದಲೂ ಬಗೆಹರಿಯದ ರಾಮಜನ್ಮ ಭೂಮಿ ವಿವಾದ
ಆದರೆ ಯಾವ ಪ್ರಕರಣಕ್ಕೆ ಎಷ್ಟು ಮಹತ್ವ ನೀಡಬೇಕು ಎಂಬುದು ನ್ಯಾಯಾಲಯಕ್ಕೆ ಗೊತ್ತು ಎಂದಿದ್ದ ಸುಪ್ರೀಂ ಕೋರ್ಟ್ ಜನವರಿ 4 ರಿಂದ ವಿಚಾರಣೆ ಮಾಡುವುದಾಗಿ ಹೇಳಿತ್ತು.
ರಾಮ ಮಂದಿರ ನಿರ್ಮಾಣಕ್ಕಾಗಿ ಸುಗ್ರೀವಾಜ್ಞೆ ಜಾರಿಗೆ ತರುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಕೇಳಿ ಬಂದಿದೆ. ಸಂಘ ಪರಿವಾರ, ಹಿಂದೂ ಸಂಘಟನೆಗಳು ಸುಗ್ರೀವಾಜ್ಞೆ ಅಥವಾ ಕಾನೂನನ್ನು ಜಾರಿಗೆ ಒತ್ತಾಯಿಸಿವೆ.
25 ವರ್ಷಗಳ ಬಾಬ್ರಿ ಮಸೀದಿ ವಿವಾದ, ಟೈಮ್ ಲೈನ್
2.77 ಎಕರೆ ವಿಸ್ತೀರ್ಣದ ಭೂಮಿಯನ್ನು ಸದ್ಯಕ್ಕೆ ಸುನ್ನಿ ವಕ್ಫ್ ಬೋರ್ಡ್, ನಿರ್ಮೋಹಿ ಅಖಾರ ಹಾಗು ರಾಮ್ ಲಲ್ಲಾ ಸಮಾನಾಗಿ ಹೊಂದಿವೆ.