ರಫೇಲ್ ಒಪ್ಪಂದದ ವಿರುದ್ಧ ಸುಪ್ರೀಂಕೋರ್ಟ್ನಲ್ಲಿ ಎರಡು ಅರ್ಜಿ: ಬುಧವಾರ ವಿಚಾರಣೆ
ನವದೆಹಲಿ, ಅಕ್ಟೋಬರ್ 8: ದೇಶದಾದ್ಯಂತ ತೀವ್ರ ವಿವಾದದ ಬಿರುಗಾಳಿ ಎಬ್ಬಿಸಿರುವ ರಫೇಲ್ ಒಪ್ಪಂದದ ವಿರುದ್ಧ ಸುಪ್ರೀಂಕೋರ್ಟ್ನಲ್ಲಿ ಎರಡು ಪ್ರತ್ಯೇಕ ಅರ್ಜಿಗಳು ದಾಖಲಾಗಿವೆ. ಈ ಎರಡೂ ಅರ್ಜಿಗಳ ವಿಚಾರಣೆಯನ್ನು ಅಕ್ಟೋಬರ್ 10ರಂದು (ಬುಧವಾರ) ನಡೆಸಲು ಸುಪ್ರೀಂಕೋರ್ಟ್ ಒಪ್ಪಿಗೆ ಸೂಚಿಸಿದೆ.
ಯುಪಿಎ ಸರ್ಕಾರದ ಅವಧಿಯಲ್ಲಿ ರಫೇಲ್ ಒಪ್ಪಂದ ನಡೆಸುವಾಗ ಮತ್ತು ಎನ್ಡಿಎ ಸರ್ಕಾರ ಮಾಡಿಕೊಂಡ ಒಪ್ಪಂದದ ವೇಳೆ ಯುದ್ಧ ವಿಮಾನದ ದರಗಳು ಎಷ್ಟಿದ್ದವು ಎಂಬ ಹೋಲಿಕೆಯ ಬೆಲೆಯ ವಿವರವನ್ನು ಸುಪ್ರೀಂಕೋರ್ಟ್ಗೆ ಮುಚ್ಚಿದ ಲಕೋಟೆಯಲ್ಲಿ ಬಹಿರಂಗಪಡಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ವಕೀಲ ವಿನೀತ್ ದಂಡಾ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.
ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಮತ್ತು ನ್ಯಾಯಮೂರ್ತಿಗಳಾದ ಎಸ್.ಕೆ. ಕೌಲ್ ಹಾಗೂ ಕೆ.ಎಂ. ಜೋಸೆಫ್ ಅವರನ್ನು ಒಳಗೊಂಡ ನ್ಯಾಯಪೀಠ ಈ ಪಿಐಎಲ್ ವಿಚಾರಣೆ ನಡೆಸಲಿದೆ.
ಡಸಾಲ್ಟ್ ಕಂಪೆನಿಯು ರಿಲಯನ್ಸ್ ಡಿಫೆನ್ಸ್ ಸಂಸ್ಥೆಗೆ ನೀಡಿದ ಗುತ್ತಿಗೆ ಒಪ್ಪಂದದ ಕುರಿತಾದ ಮಾಹಿತಿಯನ್ನು ಸಹ ಒದಗಿಸಲು ಸೂಚಿಸುವಂತೆ ಅರ್ಜಿ ಮನವಿ ಮಾಡಿದೆ.

ತಡೆಯಾಜ್ಞೆ ನೀಡಲು ಕೋರಿಕೆ
ಭಾರತ ಮತ್ತು ಫ್ರಾನ್ಸ್ ನಡುವೆ ನಡೆದಿರುವ ರಫೇಲ್ ಒಪ್ಪಂದಕ್ಕೆ ತಡೆಯಾಜ್ಞೆ ನೀಡುವಂತೆ ಕೋರಿ ವಕೀಲ ಎಂಎಲ್ ಶರ್ಮಾ ಅರ್ಜಿ ಸಲ್ಲಿಸಿದ್ದಾರೆ.
ಈ ಅರ್ಜಿಯನ್ನು ಸೋಮವಾರ ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್, ನ್ಯಾಯಮೂರ್ತಿಗಳಾದ ನವೀನ್ ಸಿನ್ಹಾ ಮತ್ತು ಕೆ.ಎಂ. ಜೋಸೆಫ್ ಅವರನ್ನು ಒಳಗೊಂಡ ನ್ಯಾಯಪೀಠ, ಶರ್ಮಾ ಅವರ ಮನವಿ ಮೇರೆಗೆ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿತು.

ಮುಂದೂಡಲು ಕೋರಿದ ವಕೀಲ
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ದಾಖಲೆಗಳನ್ನು ಸಲ್ಲಿಸಬೇಕಾಗಿದ್ದು, ಅದಕ್ಕಾಗಿ ವಿಚಾರಣೆಯನ್ನು ಮುಂದೂಡುವಂತೆ ಶರ್ಮಾ ನ್ಯಾಯಪೀಠವನ್ನು ಕೋರಿಕೊಂಡರು.
ಇದಕ್ಕೂ ಮುನ್ನ ಅವರು ತಮ್ಮ ಅನಾರೋಗ್ಯದ ಸಮಸ್ಯೆಯ ಆಧಾರದಲ್ಲಿ ವಿಚಾರಣೆ ಮುಂದೂಡಲು ಮನವಿ ಮಾಡಿದ್ದರು. ಬಳಿಕ ಹೆಚ್ಚುವರಿ ದಾಖಲೆಗಳ ಸಲ್ಲಿಕೆಗೆ ಕಾಲಾವಕಾಶ ನೀಡುವಂತೆ ಸ್ಪಷ್ಟನೆ ನೀಡಿದರು.
ಫ್ರಾನ್ಸ್ ಜತೆ ಮಾಡಿಕೊಂಡಿರುವ ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದದಲ್ಲಿ ಅವ್ಯವಹಾರ ನಡೆದಿದೆ. ಹೀಗಾಗಿ ಅದಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಅವರು ಕೋರಿದ್ದಾರೆ.

ಸಂಸತ್ ಅನುಮೋದನೆ ಪಡೆದಿಲ್ಲ
36 ರಫೇಲ್ ಜೆಟ್ಗಳ ಖರೀದಿಗಾಗಿ ಎರಡು ಸರ್ಕಾರಗಳ ನಡುವೆ ನಡೆದ ಒಪ್ಪಂದವು ಭ್ರಷ್ಟಾಚಾರದಿಂದ ಒಡಮೂಡಿದೆ ಮತ್ತು ಸಂವಿಧಾನದ 253ನೇ ವಿಧಿ (ಅಂತರ್ ಸರ್ಕಾರಿ ಒಪ್ಪಂದಗಳನ್ನು ಅನುಷ್ಠಾನಕ್ಕೆ ತರಲು ಸಂಸತ್ ಹೊಂದಿರುವ ಯಾವುದೇ ಕಾನೂರು ರಚಿಸುವ ಅಧಿಕಾರ) ಅಡಿ ಸಂಸತ್ನ ಅನುಮೋದನೆಗೆ ಒಳಪಟ್ಟಿಲ್ಲ. ಈ ಕಾರಣಗಳಿಂದ ಇದನ್ನು ರದ್ದುಗೊಳಿಸಬೇಕು ಎಂದು ಶರ್ಮಾ ಒತ್ತಾಯಿಸಿದ್ದಾರೆ.

ಈ ಹಿಂದೆಯೂ ಅರ್ಜಿ ದಾಖಲು
ಕಾಂಗ್ರೆಸ್ ಮುಖಂಡ ತೆಹ್ಸೀನ್ ಎಸ್ ಪೂನಾವಾಲಾ ಅವರು ಮಾರ್ಚ್ ತಿಂಗಳಿನಲ್ಲಿ ಇದೇ ರೀತಿಯ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. 2016ರ ಸೆಪ್ಟೆಂಬರ್ 23ರಂದು ಫ್ರಾನ್ಸ್ ಜತೆ ಖರೀದಿ ಒಪ್ಪಂದ ನಡೆಸುವ ಮುನ್ನ ಕೇಂದ್ರ ಸಂಪುಟವು ರಕ್ಷಣಾ ಖರೀದಿ ಪ್ರಕ್ರಿಯೆಯ (ಡಿಪಿಪಿ) ಅನುಮೋದನೆಯನ್ನು ಏಕೆ ಪಡೆದುಕೊಳ್ಳಲಿಲ್ಲ ಎಂದು ಸ್ವತಂತ್ರ ತನಿಖೆ ನಡೆಸುವಂತೆ ಕೋರಿದ್ದರು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications