LIVE: ಸಿಬಿಐ ಅಲೋಕ್ ವರ್ಮಾ ವಿವಾದ: ತೀರ್ಪಿನಲ್ಲಿ ಕೇಂದ್ರಕ್ಕೆ ಸುಪ್ರೀಂ ತರಾಟೆ
ನವದೆಹಲಿ, ಜನವರಿ 08: ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರನ್ನು ಕಡ್ಡಾಯ ರಜೆಯ ಮೇಲೆ ಕಳಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿದ ಅರ್ಜಿಯ ತೀರ್ಪನ್ನು ಇಂದು ಪ್ರಕಟಿಸಿದೆ.
ಕೇಂದ್ರ ತನಿಖಾ ದಳ(ಸಿಬಿಐ) ವಿರುದ್ಧ ಕೇಳಿಬಂದ ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಮತ್ತು ವಿಶೇಷ ನಿರ್ದೇಶಕ ರಾಕೇಶ್ ಆಸ್ಥಾನ ಅವರನ್ನು ಕಡ್ಡಾಯ ರಜೆಯ ಮೇಲೆ ಕಳಿಸಿತ್ತು.

ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯ್ ಅವರು ಇಂದು ರಜೆಯ ಮೇಲಿರುವ ಕಾರಣ ಈ ಪ್ರಕರಣದ ತೀರ್ಪನ್ನು ನ್ಯಾ.ಸಂಜಯ್ ಕಿಶನ್ ಕೌಲ್ ಅವರು ಪ್ರಕಟಿಸಲಿದ್ದಾರೆ.
ಅಲೋಕ್ ವರ್ಮಾ ಪ್ರಕರಣದ ಕುರಿತಂತೆ ಕ್ಷಣ ಕ್ಷಣದ ಮಾಹಿತಿಯನ್ನು ಒನ್ ಇಂಡಿಯಾ ಕನ್ನಡ ನೀಡಲಿದೆ.
ಅಲೋಕ್ ವರ್ಮಾ ಅವರು ಸಿಬಿಐ ಮುಖ್ಯಸ್ಥರಾಗಿ ಮುಂದುವರಿಯಬಹುದು. ಆದರೆ ಸದ್ಯಕ್ಕೆ ಯಾವುದೇ ಮಹತ್ವದ ನಿರ್ಣಯ ತೆಗೆದುಕೊಳ್ಳುವಂತಿಲ್ಲ: ಸುಪ್ರೀಂ ಕೋರ್ಟ್
ಅಲೋಕ್ ವರ್ಮಾ ಅವರನ್ನು ಹುದ್ದೆಯಿಂದ ಕೆಳಗಿಳಿಸುವ ಮುನ್ನ ಸಿಜೆಐ, ಪ್ರಧಾನ ಮಂತ್ರಿ ಮತ್ತು ವಿರೋಧ ಪಕ್ಷದ ನಾಯಕನನ್ನು ಒಳಗೊಂಡ ಆಯ್ಕೆ ಸಮಿತಿಯಲ್ಲಿ ಚರ್ಚೆ ನಡೆಯಬೇಕಿತ್ತು: ಸುಪ್ರೀಂ ಕೋರ್ಟ್
ಕೇಂದ್ರ ವಿಚಕ್ಷಣ ದಳದ ಅ.23 ರ ಆದೇಶವನ್ನು ಪಕ್ಕಕ್ಕೆ ಸರಿಸಿ ಅಲೋಕ್ ವರ್ಮಾ ಅವರನ್ನು ಮತ್ತೆ ಸಿಬಿಐ ನಿರ್ದೇಶಕರಾಗಿ ಮುಂದುವರಿಯುವಂತೆ ಆದೇಶಿಸಿದ ಸುಪ್ರೀಂ ಕೋರ್ಟ್
ಅಲೋಕ್ ವರ್ಮಾ ಅವರನ್ನು ಕಡ್ಡಾಯ ರಜೆಯ ಮೇಲೆ ಕಳಿಸಿದ ಕೇಂದ್ರ ಸರ್ಕಾರದ ಆದೇಶ ತಪ್ಪು ಎಂದು ಸುಪ್ರೀಂ ಕೋರ್ಟ್
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಲು ಕೇಂದ್ರ ವಿಚಕ್ಷಣಾ ದಳ(CVC)ಕ್ಕೆ ಸುಪ್ರೀಂ ಆದೇಶಿಸಿತ್ತು. ಸಿವಿಸಿ ಸಲ್ಲಿಸಿದ ವರದಿಗೆ ಪ್ರತಿಕ್ರಿಯೆ ನೀಡಲು ಅಲೋಕ್ ವರ್ಮಾ ಅವರಿಗೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು.
ಸಿಬಿಐ ಬೆಳವಣಿಗೆಯ ನಂತರ ವರ್ಮಾ ಮತ್ತು ಆಸ್ಥಾನ ಇಬ್ಬರನ್ನೂ ಕೇಂದ್ರ ಸರ್ಕಾರ ಕಡ್ಡಾಯ ರಜೆಯ ಮೇಲೆ ಕಳಿಸಿ, ನಾಗೇಶ್ವರ್ ರಾವ್ ಎಂಬುವವರನ್ನು ಹಂಗಾಮಿ ನಿರ್ದೇಶಕರನ್ನಾಗಿ ನೇಮಿಸಿತ್ತು.
ಹೈದರಾಬಾದ್ ಮೂಲದ ಉದ್ಯಮಿಯೊಬ್ಬರಿಂದ ಸಿಬಿಐ ವಿಶೇಷ ನಿರ್ದೇಶಕ ರಾಕೇಶ್ ಆಸ್ಥಾನ ಲಂಚ ಸ್ವೀಕರಿಸಿದ್ದರು ಎಂದು ನಿರ್ದೇಶಕ ಅಲೋಕ್ ವರ್ಮಾ ದೂರಿದ್ದರು.
ಪ್ರಕರಣದ ವಿಚಾರಣೆ ನಡೆಸಿದ್ದ ಜಸ್ಟೀಸ್ ರಂಜನ್ ಗೊಗೊಯ್, ಜಸ್ಟೀಸ್ ಎಸ್ ಕೆ ಕೌಲ್ ಮತ್ತು ಕೆಎಂ ಜೋಸೆಫ್ ಅವರಿದ್ದ ನ್ಯಾಯಪೀಠ
ಅರ್ಜಿಯ ವಿಚಾರಣೆಯನ್ನು ನ.20 ರಂದು ಕೈಗೆತ್ತಿಕೊಂಡಿದ್ದ ಸುಪ್ರೀಂ ಕೋರ್ಟ್, ನಂತರ ನ.29 ಕ್ಕೆ ಮುಂದೂಡಿತ್ತು. ಡಿ.6ರಂದು ವಿಚಾರಣೆ ನಡೆಸಲಾಗಿತ್ತು.
More From
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications