ಜನರ ನೋವಿಗೆ ಸ್ಪಂದಿಸಲು 'ಸಾಮಾಜಿಕ ನ್ಯಾಯ ಪೀಠ'
ನವದೆಹಲಿ, ಡಿ. 4: ಜನರ ಪ್ರತಿ ನೋವಿಗೂ ಸ್ಪಂದಿಸುತ್ತೇವೆ. ಹೀಗೆಂದು ದೇಶದ ಸರ್ವೋಚ್ಚ ನ್ಯಾಯಾಲಯ ದೇಶದ ಜನರಿಗೆ ಭರವಸೆ ನೀಡಿದೆ.
ಭಾರತದ ಪ್ರಧಾನ ನ್ಯಾಯಾಧೀಶ ಎಚ್.ಎಲ್. ದತ್ತು ಅವರು ಜನಸಾಮಾನ್ಯರ ದೈನಂದಿನ ನೋವಿಗೆ ಸ್ಪಂದಿಸುವ ಉದ್ದೇಶದಿಂದ ಇಬ್ಬರು ನ್ಯಾಯಾಧೀಶರ ನೇತೃತ್ವದ 'ಸಾಮಾಜಿಕ ನ್ಯಾಯ ಪೀಠ'ವನ್ನು ಸ್ಥಾಪಿಸಿ ಆದೇಶ ಹೊರಡಿಸಿದ್ದಾರೆ. [ಪಿಐಎಲ್ ವಜಾ]
ಆದ್ದರಿಂದ ಇನ್ನು ಮುಂದೆ ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲು ಹತ್ತಿದ ಪ್ರತಿಯೊಬ್ಬರಿಗೂ ವಿಚಾರಣೆ ಸಂದರ್ಭದಲ್ಲಿ ನೋವು ತೋಡಿಕೊಳ್ಳುವ ಅವಕಾಶ ಸಿಗಲಿದೆ. ಎಲ್ಲ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳೂ ವಿಚಾರಣೆಗೊಳಗಾಗುವ ನಿರೀಕ್ಷೆ ಹುಟ್ಟಿದೆ. ಇಲ್ಲಿಯವರೆಗೆ ಇಂತಹ ಪ್ರಕರಣಗಳು ವಿವಿಧ ಪೀಠಗಳಲ್ಲಿ ಹಂಚಿಹೋಗುತ್ತಿದ್ದವು. ಆದರೆ, ಇನ್ನು ಮುಂದೆ ಎಲ್ಲ ಪ್ರಕರಣಗಳೂ ಒಂದೇ ಪೀಠದಲ್ಲಿ ವಿಚಾರಣೆಗೊಳ್ಳಲಿವೆ.

ಮುಖ್ಯ ನ್ಯಾಯಮೂರ್ತಿ ಹೇಳಿಕೆ: ಈ ಕುರಿತು ಪ್ರಕಟಣೆ ಬಿಡುಗಡೆ ಮಾಡಿರುವ ಎಚ್.ಎಲ್. ದತ್ತು ಅವರು, "ಸಾಮಾಜಿಕ ಸಮಸ್ಯೆಗೆ ಸಂಬಂಧಿಸಿದ ಪ್ರಕರಣಗಳು ಮತ್ತು ಜನರ ಮೇಲೆ ನೇರ ಪರಿಣಾಮ ಬೀರುವಂತಹ ಸಮಸ್ಯೆಗಳಿಗೆ ನ್ಯಾಯಾಲಯವು ಆದ್ಯತೆ ನೀಡಬೇಕು. ಆಗಲೇ ಸಂವಿಧಾನದ ಗುರಿ ಈಡೇರುತ್ತದೆ" ಎಂದು ತಿಳಿಸಿದ್ದಾರೆ. [ಕನ್ನಡ ಮಾಧ್ಯಮ ಕಡ್ಡಾಯವಲ್ಲ]
ಮುಖ್ಯ ನ್ಯಾಯಮೂರ್ತಿಗಳು ಸೂಚಿಸಿರುವ ಸಾಮಾಜಿಕ ಪೀಠವು ಡಿಸೆಂಬರ್ 12ರಿಂದ ಕಾರ್ಯಾರಂಭಗೊಳ್ಳಲಿದೆ. ಅಲ್ಲದೆ, ಪ್ರತಿ ಶುಕ್ರವಾರ ಮಧ್ಯಾಹ್ನ 2 ಗಂಟೆಯಿಂದ ಹಿಂದಿನ ನಿರ್ದೇಶನಗಳು ಜಾರಿಗೊಂಡಿರುವ ಕುರಿತು ಪರಿಶೀಲಿಸಲಾಗುವುದು ಎಂದು ಪ್ರಧಾನ ಕಾರ್ಯದರ್ಶಿ ವಿಎಸ್ಆರ್ ಅವಧಾನಿ ತಿಳಿಸಿದ್ದಾರೆ.
200 ಪ್ರಕರಣ ಬಾಕಿ: ಸಾಮಾಜಿಕ ನ್ಯಾಯ ಪೀಠಕ್ಕೆ ನ್ಯಾಯಮೂರ್ತಿಗಳಾದ ಮದನ್ ಬಿ ಲೋಕುರ ಹಾಗೂ ಉದಯ ಯು ಲಲಿತ್ ಅವರನ್ನು ನೇಮಿಸಲಾಗಿದೆ. ಈ ಪೀಠವು ಬಾಕಿ ಪ್ರಕರಣಗಳು ಹಾಗೂ ಪ್ರಚಲಿತ ವಿವಾದಗಳ ವಿಚಾರಣೆ ಕೈಗೊಳ್ಳಲಿದೆ. ಸುಪ್ರೀಂ ಕೋರ್ಟ್ನಲ್ಲಿ ಈ ಪೀಠಕ್ಕೆ ಸಂಬಂಧಿಸಿದ 200 ಪ್ರಕರಣಗಳು ಬಾಕಿ ಉಳಿದಿದ್ದು, 65 ಪ್ರಕರಣಗಳ ವಿಚಾರಣೆಯನ್ನು ಹೊಸದಾಗಿ ಆರಂಭಿಸಬೇಕಾಗುತ್ತದೆ. ಈಗಾಗಲೇ ಇತರ ಪೀಠಗಳಲ್ಲಿ ವಿಚಾರಣೆಗೊಳ್ಳುತ್ತಿರುವ ಇಂತಹ ಪ್ರಕರಣಗಳನ್ನು ಕೂಡ ಈ ಪೀಠಕ್ಕೆ ವರ್ಗಾಯಿಸಲಾಗುವುದು. [ಫತ್ವಾಗಳಿಗೆ ಕಾನೂನು ಮಾನ್ಯತೆ ಇಲ್ಲ]
ಇಂತಹ ಪ್ರಕರಣಗಳು: ನೈಸರ್ಗಿಕ ವಿಪತ್ತು ಬಾಧಿತರಿಗೆ ಆಹಾರ ಧಾನ್ಯ ಬಿಡುಗಡೆ, ವೇಶ್ಯೆಯರಿಗೆ ಪುನರ್ವಸತಿ, ಅಪೌಷ್ಠಿಕತೆ ಹಾಗೂ ವೈದ್ಯಕೀಯ ಸೌಲಭ್ಯ ಕೊರತೆಯಿಂದ ಉಂಟಾಗುತ್ತಿರುವ ಗರ್ಭಿಣಿ ಹಾಗೂ ಮಕ್ಕಳ ಸಾವು, ನಿರಾಶ್ರಿತರು ಹಾಗೂ ನಿರ್ಗತಿಕರಿಗೆ ಮನೆ ಇಂತಹ ಪ್ರಕರಣಗಳನ್ನು ಸಾಮಾಜಿಕ ನ್ಯಾಯ ಪೀಠಕ್ಕೆ ವರ್ಗಾಯಿಸಲಾಗುವುದು.
-
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ












Click it and Unblock the Notifications