ಸುಶಾಂತ್ ಸಿಂಗ್ ಸಾವು: ಊಹೆ ತಲೆಕೆಳಗಾಗಿಸಿದ ಏಮ್ಸ್ ಸಮಿತಿ ವರದಿ
ನವದೆಹಲಿ, ಅಕ್ಟೋಬರ್ 3: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವು ಆತ್ಮಹತ್ಯೆಯಲ್ಲ, ಅದು ಕೊಲೆ ಎಂಬ ವಾದಗಳನ್ನು ಏಮ್ಸ್ ವರದಿ ಹುಸಿಗೊಳಿಸಿದೆ. ಜೂನ್ 14ರಂದು ತಮ್ಮ ಫ್ಲಾಟ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ನಟ ಸುಶಾಂತ್ ಸಿಂಗ್ ರಜಪೂತ್ ಅವರದ್ದು ಕೊಲೆ ಎಂಬ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಏಮ್ಸ್ ತಜ್ಞರ ತಂಡ ಸಿಬಿಐಗೆ ನೀಡುವ ವರದಿ ಬಗ್ಗೆ ಎಲ್ಲರ ಗಮನ ನೆಟ್ಟಿತ್ತು.
ಸಿಬಿಐಗೆ ಏಮ್ಸ್ ತಜ್ಞರ ತಂಡ ವರದಿ ಸಲ್ಲಿಸಿದ್ದು, ಸುಶಾಂತ್ ಸಿಂಗ್ ಅವರಿಗೆ ವಿಷ ಪ್ರಾಶನ ಮಾಡಿ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂಬ ಕುಟುಂಬದವರು ಹಾಗೂ ವಕೀಲರ ಆರೋಪಗಳನ್ನು ನಿರಾಕರಿಸಿದೆ. ಇದು ಕೊಲೆಯ ಪ್ರಕರಣವಲ್ಲ, ಆತ್ಮಹತ್ಯೆ ಎಂದು ಏಮ್ಸ್ ತಂಡ ಸಿಬಿಐಗೆ ಅಭಿಪ್ರಾಯ ತಿಳಿಸಿರುವುದಾಗಿ ಎನ್ಡಿಟಿವಿ ವರದಿ ಮಾಡಿದೆ.
ಮುಂಬೈ ಪೊಲೀಸರು ಮರಣೋತ್ತರ ಪರೀಕ್ಷೆ ಆಧಾರದಲ್ಲಿ ಇದು ಆತ್ಮಹತ್ಯೆ ಎಂದು ಹೇಳಿಕೆ ನೀಡಿದ್ದರು. ಆದರೆ ಮುಂಬೈ ತನಿಖೆಯ ಬಗ್ಗೆ ಕುಟುಂಬದವರು ಮತ್ತು ಅಭಿಮಾನಿಗಳು ಅನುಮಾನ ವ್ಯಕ್ತಪಡಿಸಿದ್ದರು. ಹೀಗಾಗಿ ಸಿಬಿಐ ತನಿಖೆ ನಡೆಸುವಂತೆ ಆಗ್ರಹಿಸಿ ದೊಡ್ಡ ಮಟ್ಟದ ಆಂದೋಲನ ನಡೆದಿತ್ತು. ಮುಂದೆ ಓದಿ.

ಕೊಲೆ ಆಯಾಮ ತಿರಸ್ಕಾರ
ಸುಶಾಂತ್ ಸಿಂಗ್ ರಜಪೂತ್ ಅವರ ಮರಣೋತ್ತರ ಪರೀಕ್ಷೆ ವರದಿ ಹಾಗೂ ಅಂಗಾಂಗ ವರದಿಗಳನ್ನು ಪರಿಶೀಲನೆ ನಡೆಸಿದ ಡಾ. ಸುಧೀರ್ ಗುಪ್ತಾ ನೇತೃತ್ವದ ಏಮ್ಸ್ ಸಮಿತಿ ಇದು ಆತ್ಮಹತ್ಯೆ ಎಂದಿದ್ದು, ಕೊಲೆಯ ಆಯಾಮವನ್ನು ತಿರಸ್ಕರಿಸಿದೆ. ಇದು ಆತ್ಮಹತ್ಯೆ ಎಂದು ಸುಧೀರ್ ಗುಪ್ತಾ ತಿಳಿಸಿದ್ದಾರೆ ಎನ್ನಲಾಗಿದೆ.

ಮೊಬೈಲ್, ಹಾರ್ಡ್ ಡಿಸ್ಕ್ ಪರಿಶೀಲನೆ
ಮರಣೋತ್ತರ ಪರೀಕ್ಷೆ ಹಾಗೂ ಅಂಗಾಂಗ ಪರೀಕ್ಷೆಯ ಮರು ಮೌಲ್ಯಮಾಪನದ ಆಧಾರದಲ್ಲಿ ಏಮ್ಸ್ ವೈದ್ಯರು ಈ ವರದಿ ನೀಡಿದ್ದಾರೆ. ಅವರ ಬಳಿ ಲಭ್ಯವಿದ್ದ ಶೇ 20ರಷ್ಟು ಅಂಗಾಂಗ ಮಾದರಿಗಳನ್ನು ಪರಿಶೀಲಿಸಲಾಗಿದೆ. ವಿಧಿ ವಿಜ್ಞಾನ ಸಂಸ್ಥೆಗಳು ಸುಶಾಂತ್ ಮನೆಯಿಂದ ವಶಪಡಿಸಿಕೊಳ್ಳಲಾದ ಲ್ಯಾಪ್ಟಾಪ್, ಎರಡು ಹಾರ್ಡ್ ಡಿಸ್ಕ್ಗಳು, ಒಂದು ಕೆನಾನ್ ಕ್ಯಾಮೆರಾ ಮತ್ತು ಎರಡು ಮೊಬೈಲ್ ಫೋನ್ಗಳನ್ನು ಪರಿಶೀಲಿಸಿವೆ.

ಎಲ್ಲ ಆಯಾಮಗಳಲ್ಲಿ ತನಿಖೆ
ಏಮ್ಸ್ ವೈದ್ಯರ ಸಮಿತಿಯು ಸೆ. 29ರಂದು ಸಿಬಿಐಗೆ ವರದಿ ಸಲ್ಲಿಸಿದೆ. ಸುಶಾಂತ್ ಮರಣೋತ್ತರ ಪರೀಕ್ಷೆ ನಡೆಸಿದ ಕೂಪರ್ ಆಸ್ಪತ್ರೆ ನೀಡಿದ ಮಾಹಿತಿಗಳನ್ನು ಪರಿಶೀಲಿಸಲಾಗಿದೆ. ಅದರಾಚೆಗೂ ಕೊಲೆಗೆ ಸಂಬಂಧಿಸಿದಂತಹ ಯಾವುದೇ ಸುಳಿವು ಲಭ್ಯವಾಗಿಲ್ಲ. ಮೂಲಗಳ ಪ್ರಕಾರ ಸಿಬಿಐ, ಆತ್ಮಹತ್ಯೆ ಪ್ರಕರಣದ ಆಯಾಮದಿಂದ ತನಿಖೆ ಮುಂದುವರಿಸಲಿದೆ. ಆತ್ಮಹತ್ಯೆಗೆ ಪ್ರಚೋದನೆಯ ಆಯಾಮದಿಂದಲೂ ತನಿಖೆ ನಡೆಸಲಾಗುತ್ತದೆ. ಏಮ್ಸ್ ವೈದ್ಯರ ವರದಿ ಬಳಿಕವೂ ಎಲ್ಲ ಬಗೆಯ ತನಿಖೆಯನ್ನು ನಡೆಸಲು ಸಿಬಿಐ ಉದ್ದೇಶಿಸಿದೆ.

57 ದಿನದ ತನಿಖೆಯಲ್ಲಿ ಸಿಗದ ಸುಳಿವು
ಕೊಲೆ ಆರೋಪಕ್ಕೆ ಪೂರಕವಾದ ಯಾವುದೇ ಸಣ್ಣ ಸಾಕ್ಷ್ಯ ಲಭ್ಯವಾದರೂ ಐಪಿಸಿ ಸೆಕ್ಷನ್ 302ರ ಅಡಿ ಇದನ್ನು ಕೊಲೆ ಪ್ರಕರಣ ಎಂದು ಸಿಬಿಐ ದಾಖಲು ಮಾಡಲಿದೆ. ಆದರೆ 57 ದಿನಗಳಿಂದ ತನಿಖೆ ನಡೆಸುತ್ತಿರುವ ಸಿಬಿಐಗೆ ಇದುವರೆಗೂ ಅಂತಹ ಯಾವುದೇ ಸಾಕ್ಷ್ಯ ಸಿಕ್ಕಿಲ್ಲ ಎನ್ನಲಾಗಿದೆ. ವಿಧಿ ವಿಜ್ಞಾನ ವರದಿಯೊಂದಿಗೆ ತನಿಖಾ ಸಂಸ್ಥೆಯು ಪ್ರಕರಣಕ್ಕೆ ತಾರ್ಕಿಕ ಅಂತ್ಯ ನೀಡಲು ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ












Click it and Unblock the Notifications