'ಮೋದಿ'ಗೆ ನೆರವಾದ ಸುಷ್ಮಾ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ
ನವದೆಹಲಿ, ಜೂ.14: ಇಂಡಿಯನ್ ಪ್ರಿಮಿಯರ್ ಲೀಗ್ ನ ಮಾಜಿ ಚೇರ್ಮನ್ ಲಲಿತ್ ಮೋದಿ ಅವರ ವೀಸಾ, ಇಂಗ್ಲೆಂಡ್ ಪ್ರಯಾಣಕ್ಕೆ ನೆರವಾದ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ಕುರ್ಚಿ ಅಲ್ಲಾಡುತ್ತಿದೆ. ಐಪಿಎಲ್ ಅವ್ಯವಹಾರ ಆರೋಪ ಹೊತ್ತಿದ್ದ ಮೋದಿ ಅವರು ಅಕ್ರಮವಾಗಿ ದೇಶದಿಂದ ತಪ್ಪಿಸಿಕೊಂಡು ಹೋಗಲು ಸುಷ್ಮಾ ನೆರವಾಗಿದ್ದರೆ. ಸುಷ್ಮಾ ತಲೆದಂಡವಾಗಬೇಕು ಎಂದು ಆರೋಪಿಸಿರುವ ಕಾಂಗ್ರೆಸ್ ಆಗ್ರಹಿಸಿದೆ.
ಲಲಿತ್ ಮೋದಿ ಅವರಿಗೆ ನೆರವಾದ ಬಗ್ಗೆ ಸರಣಿ ಟ್ವೀಟ್ ಮೂಲಕ ಸುಷ್ಮಾ ಸ್ವರಾಜ್ ಪ್ರತಿಕ್ರಿಯಿಸಿದ್ದಾರೆ. ಜುಲೈ 2014ರಲ್ಲಿ ಲಲಿತ್ ಮೋದಿ ಅವರು ತಮ್ಮ ಪತ್ನಿಗೆ ಕ್ಯಾನ್ಸರ್ ಇದ್ದು, ಚಿಕಿತ್ಸೆಗಾಗಿ ಪೋರ್ಚುಗಲ್ ಗೆ ತೆರಳಬೇಕು ಎಂದು ಕೇಳಿಕೊಂಡಿದ್ದರು. ಮಾನವೀಯತೆಯ ದೃಷ್ಟಿಯಿಂದ ಆಗಸ್ಟ್ 4ರಂದು ಆಕೆಯ ಶಸ್ತ್ರಚಿಕಿತ್ಸೆಗೆ ತೆರಳಲು ಮೋದಿಗೆ ಸರ್ಕಾರದ ಅನುಮತಿ ಬೇಕಿತ್ತು.

ಯುಪಿಎ ಸರ್ಕಾರ ಮಾಡದ ಕೆಲಸವನ್ನು ನಾನು ಮಾನವೀಯತೆಯ ದೃಷ್ಟಿಯಿಂದ ಮಾಡಿದೆ. ಬ್ರಿಟಿಷ್ ರಾಯಭಾರಿ ಜೊತೆ ಮಾತನಾಡಿ ಮೋದಿ ಅವರ ಪ್ರಯಾಣಕ್ಕೆ ಬೇಕಾದ ಅಗತ್ಯ ದಾಖಲೆಗಳನ್ನು ಬ್ರಿಟಿಷ್ ಸರ್ಕಾರ ಒದಗಿಸುವುದರಿಂದ ಭಾರತ ಹಾಗೂ ಬ್ರಿಟನ್ ನಡುವಿನ ಸಂಬಂಧವೇನು ಹಳಸುವುದಿಲ್ಲ ಎಂದು ಮನವರಿಕೆ ಮಾಡಿಕೊಟ್ಟೆ. ಈ ಬಗ್ಗೆ ಅಂದಿನ ಸಂಸದ ಕೀತ್ ವಾಜ್ ಅವರಿಗೂ ಹೇಳಿದ್ದೆ ಎಂದು ಸುಷ್ಮಾ ಹೇಳಿಕೊಂಡಿದ್ದಾರೆ.
Taking a humanitarian view, I conveyed to the British High Commissioner that "British Government should examine the request of
— Sushma Swaraj (@SushmaSwaraj) June 14, 2015 ಅದರೆ, ಸುಷ್ಮಾ ಸ್ಪಷ್ಟನೆಗೆ ಬಗ್ಗದ ಕಾಂಗ್ರೆಸ್ ನಾಯಕರು ರಾಜೀನಾಮೆಗೆ ಆಗ್ರಹಿಸಿದ್ದಾರ್. ರೆಡ್ ಕಾರ್ನರ್ ನೋಟಿಸ್ ಪಡೆದ ವ್ಯಕ್ತಿಗೆ ಸುಷ್ಮಾ ನೆರವಾಗುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ.
However, they were restrained by a UPA Government communication that this will spoil Indo-UK relations.
— Sushma Swaraj (@SushmaSwaraj) June 14, 2015 ವೀಸಾ ವಿವಾದದ ಬಗ್ಗೆ ಪ್ರಧಾನಿ ಕೂಡಲೇ ಗಮನ ಹರಿಸಲಿ, ಸುಷ್ಮಾ ಅವರು ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಲಿ ಎಂದು ದಿಗ್ವಿಜಯ್ ಸಿಂಗ್ ಆಗ್ರಹಿಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications