ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ವಿಧಿವಶ
Recommended Video
ನವದೆಹಲಿ, ಆಗಸ್ಟ್ 06: ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್((14 ಫೆಬ್ರವರಿ 1953, 6 ಆಗಸ್ಟ್ 2019)) ಅವರು ಹೃದಯಾಘಾತದಿಂದ ನಿಧರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಸುಷ್ಮಾ ಸ್ವರಾಜ್ ಅವರಿಗೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
67 ವರ್ಷ ವಯಸ್ಸಿನ ಸುಷ್ಮಾ ಸ್ವರಾಜ್ ಅವರು ದೆಹಲಿ ಮುಖ್ಯಮಂತ್ರಿಯಾಗಿಯೂ ಸೇವೆ ಸಲ್ಲಿಸಿದ್ದರು. ಅವರು ಪತಿ ಮತ್ತು ಓರ್ವ ಪುತ್ರಿ, ಅಪಾರ ಬಂಧು-ಬಳಗ, ಅಭಿಮಾನಿ ವೃಂದವನ್ನು ಅಗಲಿದ್ದಾರೆ.

ಕೇಂದ್ರ ಸಚಿವೆಯಾಗಿ, ಪ್ರತಿಪಕ್ಷನಾಯಕಿಯಾಗಿ, ಸಂಸದೀಯ ಪಟುವಾಗಿ ಅವರ ಸೇವೆಯನ್ನು ದೇಶ ಸದಾ ಸ್ಮರಿಸುತ್ತದೆ.
ಹರ್ಯಾಣದ ಅಂಬಾಲಾ ಕಾಂಟೋನ್ಮೆಂಟ್ ನಲ್ಲಿ ಹರ್ದೇವ್ ಶರ್ಮಾ ಮತ್ತು ಶ್ರೀಮತಿ ಲಕ್ಷ್ಮಿ ದೇವಿ ಅವರ ಮಗಳಾಗಿ ಜನಿಸಿದ ಸುಷ್ಮಾ ಸ್ವರಾಜ್, ಸುಪ್ರೀಂ ಕೋರ್ಟ್ ವಕೀಲೆಯಾಗಿ ವೃತ್ತಿ ಬದುಕು ಆರಂಭಿಸಿದವರು. ನಂತರ ಎಬಿವಿಪಿ ಮೂಲಕ ಸಾಮಾಜಿಕ ಮತ್ತು ರಾಜಕೀಯ ಬದುಕಿಗೆ 1970 ರಲ್ಲಿ ಪದಾರ್ಪಣೆ ಮಾಡಿದರು. ಜಾರ್ಜ್ ಫರ್ನಾಂಡೀಸ್, ಜಯಪ್ರಕಾಶ್ ನಾರಾಯಣ್, ಎಲ್.ಕೆ.ಅಡ್ವಾಣಿ, ಅಟಲ್ ಬಿಹಾರಿ ವಾಜಪೇಯಿ ಮುಂತಾದ ನಾಯಕರೊಂದಿಗೆ ಸುಷ್ಮಾ ಸ್ವರಾಜ್ ಅವರು ಆಪ್ತ ಬಾಂಧವ್ಯ ಹೊಂದಿದ್ದರು.
ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಬಿಜೆಪಿ ಮುಖಂಡರಾದ ಡಾ.ಹರ್ಷವರ್ಧನ್, ನಿತಿನ್ ಗಡ್ಕರಿ ಮುಂತಾದವರು ಏಮ್ಸ್ ಆಸ್ಪತ್ರೆಗೆ ತೆರಳಿದ್ದು, ಬಿಜೆಪಿಯ ಇತರ ಗಣ್ಯರು ಆಸ್ಪತ್ರೆಯತ್ತ ಧಾವಿಸುತ್ತಿದ್ದಾರೆ.
ಅನಾರೋಗ್ಯದ ಕಾರಣ 2019 ರ ಲೋಕಸಭೆ ಚುನಾವಣೆಗೂ ಸುಷ್ಮಾ ಸ್ವರಾಜ್ ಅವರು ಸ್ಪರ್ಧಿಸಿರಲಿಲ್ಲ. ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ಸರ್ಕಾರದ ಕ್ರಮವನ್ನು ಶ್ಲಾಘಿಸಿ ಮಾಡಿದ್ದ ಟ್ವೀತ್ ಸುಷ್ಮಾ ಸ್ವರಾಜ್ ಅವರ ಕೊನೆಯ ಟ್ವೀಟ್. ಈ ಟ್ವೀತ್ ನಲ್ಲಿ ಅವರು ಈ ದಿನಕ್ಕಾಗಿ ನಾನು ನನ್ನ ಜೀವಮಾನದುದ್ದಕ್ಕೂ ಕಾಯುತ್ತಿದ್ದೆ ಎಂದು ಮೋದಿ ಅವರಿಗೆ ಧನ್ಯವಾದ ಅರ್ಪಿಸಿದ್ದರು. ದುರದೃಷ್ಟವಶಾತ್ ಅದೇ ಅವರ ಕೊನೆಯ ಟ್ವೀಟ್ ಆಗಿದೆ!
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications