ಇಥಿಯೋಪಿಯಾ : ಭಾರತೀಯ ಮಹಿಳೆ ಕುಟುಂಬ ಸಂಪರ್ಕಿಸಲು ಸುಷ್ಮಾ ಮನವಿ
ನವದೆಹಲಿ, ಮಾರ್ಚ್ 11 : ಇಥಿಯೋಪಿಯಾದಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ಸಾವಿಗೀಡಾದ 157 ಜನರಲ್ಲಿ ನಾಲ್ವರು ಭಾರತೀಯರು ಕೂಡ ಸೇರಿದ್ದು, ಅವರಲ್ಲಿ ಒಬ್ಬರ ಸಂಬಂಧಿಗಳನ್ನು ಸಂಪರ್ಕಿಸಲು, ವಿದೇಶಾಂಗ ಸಚಿವ ಸುಷ್ಮಾ ಸ್ವರಾಜ್ ಅವರು ಟ್ವಿಟ್ಟರ್ ನಲ್ಲಿ ಕೋರಿದ್ದಾರೆ.
ಪರಿಸರ ಇಲಾಖೆಯಲ್ಲಿ ವಿಶ್ವಸಂಸ್ಥೆಯ ಸಲಹೆಗಾರ್ತಿಯಾಗಿರುವ ಶಿಖಾ ಗರ್ಗ್ ಅವರು ದುರಂತ ಸಾವಿಗೀಡಾದ ಭಾರತೀಯರಲ್ಲಿ ಒಬ್ಬರು. ಶಿಖಾ ಗರ್ಗ್ ಅವರನ್ನು ಹೊರತುಪಡಿಸಿ, ವೈದ್ಯ ಪನ್ನಗೇಶ್ ಭಾಸ್ಕರ್, ವೈದ್ಯ ಹನ್ಸಿನ್ ಅನ್ನಗೇಶ್, ನುಕವರಪು ಮನೀಷಾ ಅವರು ಕೂಡ ವಿಮಾನಪಘಾತದಲ್ಲಿ ಸಾವನ್ನಪ್ಪಿದ್ದಾರೆ.
"ವಿಮಾನ ಅಪಘಾತದಲ್ಲಿ ದುರಾದೃಷ್ಟವಶಾತ್ ಸಾವಿಗೀಡಾಗಿರುವ ಶಿಖಾ ಗರ್ಗ್ ಅವರ ಕುಟುಂಬವನ್ನು ಸಂಪರ್ಕಿಸಲು ಯತ್ನಿಸುತ್ತಿದ್ದೇನೆ. ನಾನು ಹಲವಾರು ಸತಿ ಅವರ ಗಂಡನ ಸಂಖ್ಯೆಗೆ ಕರೆ ಮಾಡಲು ಯತ್ನಿಸಿದೆ. ದಯವಿಟ್ಟು ಅವರ ಕುಟುಂಬವನ್ನು ಸಂಪರ್ಕಿಸಲು ಸಹಾಯ ಮಾಡಿ" ಎಂದು ಸುಷ್ಮಾ ಸ್ವರಾಜ್ ಅವರು ಟ್ವೀಟ್ ಮಾಡಿದ್ದಾರೆ.

ನೈರೋಬಿಗೆ ಹೊರಟಿದ್ದ ಇಥಿಯೋಪಿಯಾ ಏರ್ ಲೈನ್ಸ್ ಟೆಕಾಫ್ ಆಗಿ ಕೆಲವೇ ನಿಮಿಷಗಳಲ್ಲಿ ನೆಲಕ್ಕಪ್ಪಳಿಸಿದ್ದರಿಂದ ವಿಮಾನದಲ್ಲಿದ್ದ ಎಲ್ಲ 157 ಜನರು ದುರಂತ ಅಂತ್ಯ ಕಂಡಿದ್ದಾರೆ. ಈ ಘಟನೆ ಭಾನುವಾರ ಸಂಭವಿಸಿದ್ದು, ಇವರಲ್ಲಿ ನಾಲ್ವರು ಭಾರತೀಯರು ಕೂಡ ಇದ್ದರು.
ಪರಿಸರ ಇಲಾಖೆಯಲ್ಲಿ ವಿಶ್ವಸಂಸ್ಥೆಯ ಸಲಹೆಗಾರ್ತಿಯಾಗಿ ಕೆಲಸ ಮಾಡುತ್ತಿದ್ದ ಶಿಖಾ ಗರ್ಗ್ ಅವರು ವಿಶ್ವಸಂಸ್ಥೆಯ ಪರಿಸರ ಕಾರ್ಯಕ್ರಮದಲ್ಲಿ ಭಾಗವಹಿಸಲು ಪಯಣಿಸುತ್ತಿದ್ದರು. ಶಿಖಾ ಅವರು ಸಾವನ್ನಪ್ಪಿರುವ ವಿಷಯವನ್ನು ಕೇಂದ್ರ ಪರಿಸರ ಖಾತೆಯ ಸಚಿವ ಡಾ. ಹರ್ಷ ವರ್ಧನ್ ಖಚಿತಪಡಿಸಿದ್ದಾರೆ.
I am trying to reach the family of Shikha Garg who has unfortunately died in the air crash. I have tried her husband's number many times. Please help me reach her family.
— Sushma Swaraj (@SushmaSwaraj) March 11, 2019
ಭಾನುವಾರ ನಭಕ್ಕೆ ನೆಗೆಯುತ್ತಿದ್ದ ಆರು ನಿಮಿಷದೊಳಗೆ ನೆಲಕ್ಕಪ್ಪಳಿಸಿದ ಇಟಿ 302 ವಿಮಾನ, ಅಡಿಸ್ ಅಬಾಬಾದಿಂದ 60 ಕಿ.ಮೀ. ದೂರದಲ್ಲಿ ಬಿದ್ದು ಭಸ್ಮವಾಗಿದೆ. ಈ ವಿಮಾನದಲ್ಲಿ 35 ರಾಷ್ಟ್ರಗಳ ನಾಗರಿಕರು ಪ್ರಯಾಣಿಸುತ್ತಿದ್ದರು. ಇವರಲ್ಲಿ ಹೆಚ್ಚಿನವರು ಕೀನ್ಯಾದವರಿದ್ದರು. ಕೆನಡಾದಿಂದ 18 ಜನರಿದ್ದರೆ, ಇಥಿಯೋಪಿಯಾದ 9 ಜನ ಕೂಡ ಪ್ರಯಾಣಿಸುತ್ತಿದ್ದರು.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications