Breaking: ಮಂಕಿಫಾಕ್ಸ್ ವರದಿ ನೆಗೆಟಿವ್: ದೆಹಲಿ ರೋಗಿ ಡಿಸ್ಚಾರ್ಜ್
ನವದೆಹಲಿ, ಜುಲೈ 28: ದೆಹಲಿಯ ಎಲ್ಎನ್ಜೆಪಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಶಂಕಿತ ಮಂಕಿಪಾಕ್ಸ್ ಕಾಯಿಲೆಯ ರೋಗಿಯನ್ನು ಗುರುವಾರ ಪರೀಕ್ಷೆಯಲ್ಲಿ ನೆಗೆಟಿವ್ ಬಂದ ನಂತರ ಬಿಡುಗಡೆ ಮಾಡಲಾಗಿದೆ ಎಂದು ಹಿರಿಯ ವೈದ್ಯರು ತಿಳಿಸಿದ್ದಾರೆ.
30 ವರ್ಷದ ಗಾಜಿಯಾಬಾದ್ ವ್ಯಕ್ತಿಗೆ ಮಂಕಿಪಾಕ್ಸ್ ಬದಲು ಚಿಕನ್ಪಾಕ್ಸ್ ಇರುವುದು ಪತ್ತೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಮಂಕಿಪಾಕ್ಸ್ ಚಿಕಿತ್ಸೆಗಾಗಿ ಗೊತ್ತುಪಡಿಸಿರುವ ಕೇಂದ್ರವಾಗಿರುವ ದೆಹಲಿ ಸರ್ಕಾರಿ ಆಸ್ಪತ್ರೆಗೆ ಮಂಗಳವಾರ ಈ ವ್ಯಕ್ತಿಯನ್ನು ದಾಖಲಿಸಲಾಯಿತು. ದಾಖಲಾಗಿದ್ದ ವ್ಯಕ್ತಿಯು ಜ್ವರ ಮತ್ತು ಚರ್ಮದ ಗಾಯಗಳಿಂದ ಬಳಲುತ್ತಿದ್ದರು.

"ಮಂಕಿಪಾಕ್ಸ್ನ ಶಂಕಿತ ಪ್ರಕರಣ ಎರಡು ದಿನಗಳ ಹಿಂದೆ ಎಲ್ಎನ್ಜೆಪಿ ಆಸ್ಪತ್ರೆಯಲ್ಲಿ ದಾಖಲಾಯಿತು. ಗುರುವಾರ ಅವರ ವರದಿಗಳು ನೆಗೆಟಿವ್ ಬಂದ ನಂತರ ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ" ಎಂದು ಎಲ್ಎನ್ಜೆಪಿ ವೈದ್ಯಕೀಯ ನಿರ್ದೇಶಕ ಸುರೇಶ್ ಕುಮಾರ್ ತಿಳಿಸಿದರು.
ಇನ್ನು ಪ್ರಸ್ತುತ ಆಸ್ಪತ್ರೆಯಲ್ಲಿ ದಾಖಲಾಗಿರುವ ಮಂಕಿಪಾಕ್ಸ್ನ ಮೊದಲ ಪ್ರಕರಣದ ಸೋಂಕಿತರಿಂದ ಮಾದರಿಗಳನ್ನು ತೆಗೆದುಕೊಂಡು ಪುಣೆಯ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿಗೆ ಕಳುಹಿಸಲಾಗಿದೆ ಎಂದು ಸುರೇಶ್ ಕುಮಾರ್ ಹೇಳಿದರು.
ಕೇರಳದ ಮೂವರು ಸೇರಿದಂತೆ ದೇಶದಲ್ಲಿ ಇದುವರೆಗೆ ನಾಲ್ಕು ಮಂಕಿಪಾಕ್ಸ್ ಸೋಂಕಿನ ಪ್ರಕರಣಗಳು ವರದಿಯಾಗಿವೆ.
ಮಂಕಿಪಾಕ್ಸ್ ವೈರಸ್ ಸೋಂಕಿತ ಪ್ರಾಣಿಗಳಿಂದ ಮನುಷ್ಯರಿಗೆ ಪರೋಕ್ಷ ಅಥವಾ ನೇರ ಸಂಪರ್ಕದ ಮೂಲಕ ಹರಡುತ್ತದೆ. ಸೋಂಕಿನ ಸಾಮಾನ್ಯ ಲಕ್ಷಣಗಳೆಂದರೆ ಜ್ವರ, ಚರ್ಮದ ದದ್ದುಗಳು (ಇವುಗಳು ಮುಖದಿಂದ ಪ್ರಾರಂಭವಾಗುತ್ತದೆ ಮತ್ತು ತೋಳುಗಳು, ಕಾಲುಗಳು, ಅಂಗೈಗಳು ಮತ್ತು ಅಡಿಭಾಗಗಳಿಗೆ ಹರಡುತ್ತದೆ), ದುಗ್ಧರಸ ಗ್ರಂಥಿಯ ಹಿಗ್ಗುವಿಕೆ, ತಲೆನೋವು, ಸ್ನಾಯು ನೋವು, ಅಥವಾ ಬಳಲಿಕೆ, ಕೆಮ್ಮು ಮತ್ತು ಗಂಟಲು ನೋವು.
ವಿಶ್ವ ಆರೋಗ್ಯ ಸಂಸ್ಥೆ (WHO) ಈಗಾಗಲೇ ಮಂಕಿಪಾಕ್ಸ್ ಜಾಗತಿಕ ಆರೋಗ್ಯ ತುರ್ತುಸ್ಥಿತಿ ಎಂದು ಘೋಷಿಸಿದೆ. ಜಾಗತಿಕವಾಗಿ 75 ದೇಶಗಳು ಮತ್ತು ಪ್ರಾಂತ್ಯಗಳಿಂದ 18,000ಕ್ಕೂ ಹೆಚ್ಚು ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿವೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications