ತಮಿಳುನಾಡು ಮೀನುಗಾರರಿಗೆ ಬಿಡುಗಡೆ ಭಾಗ್ಯ
ನವದೆಹಲಿ, ನ. 20: ಮಾದಕ ದ್ರವ್ಯ ಸಾಗಣೆ ಆರೋಪದ ಮೇಲೆ ಶ್ರೀಲಂಕಾದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ತಮಿಳುನಾಡು ಮೂಲದ ಐವರು ಮೀನುಗಾರರು ಗುರುವಾರ ಭಾರತಕ್ಕೆ ಮರಳಿದ್ದಾರೆ. ಅವರನ್ನು ತಕ್ಷಣ ಜೈಲಿಗೆ ವರ್ಗಾಯಿಸಲಾಗುವುದು ಎಂದು ಭಾರತೀಯ ಅಧಿಕಾರಿಗಳು ತಿಳಿಸಿದ್ದಾರೆ.
ಈ ಮೀನುಗಾರರ ಬಿಡುಗಡೆ ಸುದ್ದಿ ಕೇಳಿದ ಅವರ ಕುಟುಂಬಸ್ಥರು ಸಂಭ್ರಮಿಸಿದ್ದಾರೆ. ಅವರನ್ನು ಭೇಟಿಯಾಗಲು ಕಾತರಗೊಂಡಿರುವುದಾಗಿ ತಿಳಿಸಿದ್ದಾರೆ. [ಪಾಕಿಸ್ತಾನದಿಂದ ಭಾರತೀಯ ಮೀನುಗಾರರ ಬಿಡುಗಡೆ]
ಮೋದಿ ಒತ್ತಡಕ್ಕೆ ಮಣಿದ ಶ್ರೀಲಂಕಾ: ಈ ಮೀನುಗಾರರಿಗೆ ಗಲ್ಲು ಶಿಕ್ಷೆ ವಿಧಿಸಲ್ಪಟ್ಟಾಗ ಸಾಕಷ್ಟು ಪ್ರತಿಭಟನೆಗಳು ನಡೆದಿದ್ದವು. ತಮಿಳುನಾಡು ಸರ್ಕಾರ ಕೂಡ ಪ್ರಧಾನಿ ನರೇಂದ್ರ ಮೋದಿ ಮೇಲೆ ಒತ್ತಡ ಹಾಕಿತ್ತು. ಈ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರದೊಂದಿಗೆ ಮೋದಿ ಮಾತನಾಡಿದ್ದರು. ಆದ್ದರಿಂದ ಮೀನುಗಾರರ ಬಿಡುಗಡೆಗೆ ತಮಿಳುನಾಡು ಬುಧವಾರ ನಿರ್ಧರಿಸಿತ್ತು.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಶ್ರೀಲಂಕಾ ಸರ್ಕಾರದ ಸಚಿವ ಸೇಂಥಿಲ್ ತೋಂಡಮನ್, "ನಾವು ಅಪರಾಧಿಗಳಿಗೆ ಕ್ಷಮೆ ನೀಡಿಲ್ಲ. ಅವರ ಶಿಕ್ಷೆಯ ಪ್ರಮಾಣ ತಗ್ಗಿಸಿದ್ದೇವೆ ಅಷ್ಟೇ" ಎಂದಿದ್ದಾರೆ.
ಈ ಐವರನ್ನು 2011ರಲ್ಲಿ 995 ಗ್ರಾಂ. ಹೆರಾಯಿನ್ ಸಾಗಿಸುತ್ತಿದ್ದಾಗ ತಮಿಳುನಾಡು ಪೊಲೀಸರು ಬಂಧಿಸಿದ್ದರು. ಕೋಲಂಬೋ ಹೈ ಕೋರ್ಟ್ನಲ್ಲಿ ವಿಚಾರಣೆ ನಡೆದು ಅವರ ಅಪರಾಧ ಸಾಬೀತಾಗಿತ್ತು. ಎಲ್ಲರಿಗೂ ಗಲ್ಲು ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿತ್ತು.