ಪ್ಯಾಸೆಂಜರ್ ರೈಲುಗಳಿಗೂ ತತ್ಕಾಲ್ ಬುಕ್ಕಿಂಗ್
ಬೆಂಗಳೂರು, ಸೆ.28 : ರೈಲ್ವೆ ಇಲಾಖೆ ಹೊಸದೊಂದು ಯೋಜನೆ ಜಾರಿಗೆ ತರಲು ಮುಂದಾಗಿದೆ. ಈ ಯೋಜನೆ ಪ್ರಕಾರ ಪ್ಯಾಸೆಂಜರ್ ರೈಲುಗಳಿಗೂ ಮುಂಗಡವಾಗಿ ತತ್ಕಾಲ್ ಮೂಲಕ ಟಿಕೆಟ್ ಬುಕ್ ಮಾಡಬಹುದಾಗಿದೆ.
ಸದ್ಯ ಮೇಲ್ ಮತ್ತು ಎಕ್ಸ್ಪ್ರೆಸ್ ಮತ್ತು ರಾಜಧಾನಿ, ತುರಂತೋ, ಶತಾಬ್ದಿ ಎಕ್ಸ್ಪ್ರೆಸ್ ರೈಲುಗಳಿಗೆ ಮಾತ್ರ ತತ್ಕಾಲ್ ಸೇವೆ ಮೂಲಕ ಟಿಕೆಟ್ ಬುಕ್ ಮಾಡುವ ಸೌಲಭ್ಯವಿತ್ತು. ಸದ್ಯ ಇದನ್ನು ವಿಸ್ತರಣೆ ಮಾಡಿ, ಪ್ಯಾಸೆಂಜರ್ ರೈಲುಗಳಿಗೂ ತತ್ಕಾಲ್ ಸೇವೆ ಒದಗಿಸಲು ಇಲಾಖೆ ಚಿಂತಿಸಿದೆ.

ಈ ಕುರಿತ ಪ್ರಸ್ತಾವನೆಯನ್ನು ರೈಲ್ವೆ ಇಲಾಖೆ ಸಿದ್ಧಪಡಿಸಿದೆ. ತುರ್ತು ಪ್ರಯಾಣದ ಸಂದರ್ಭದಲ್ಲಿ ಜನರಿಗೆ ಅನುಕೂಲ ಮಾಡಿಕೊಡಲು ತತ್ಕಾಲ್ ಸೇವೆಯನ್ನು ಪ್ಯಾಸೆಂಜರ್ ರೈಲುಗಳಿಗೂ ನೀಡಲು ರೈಲ್ವೆ ಇಲಾಖೆ ನಿರ್ಧರಿಸಿದೆ.
ಈ ಯೋಜನೆ ಪ್ರಕಾರ ಸ್ಲಿಪರ್ ವ್ಯವಸ್ಥೆ ಮತ್ತು ಸೆಕೆಂಡ್ ಕ್ಲಾಸ್ (ಸಿಟ್ಟಿಂಗ್) ಸೀಟುಗಳನ್ನು ಹೊಂದಿರುವ ಪ್ಯಾಸೆಂಜರ್ ರೈಲುಗಳಿಗೆ ತತ್ಕಾಲ್ ಟಿಕೆಟ್ ಬುಕ್ಕಿಂಗ್ ಸೇವೆ ಲಭ್ಯವಾಗಲಿದೆ. ಈ ಯೋಜನೆಯ ಅನ್ವಯ ದರದ ನಿಗದಿ ಮಾಡುವ ಕಾರ್ಯ ಸದ್ಯ ನಡೆಯುತ್ತಿದೆ.
ಪ್ಯಾಸೆಂಜರ್ ರೈಲುಗಳಲ್ಲಿ ಶೇ.60ಕ್ಕಿಂತ ಹೆಚ್ಚು ಮಂದಿ ಪ್ರಯಾಣಿಕರಿದ್ದಲ್ಲಿ ಮಾತ್ರ ಸೇವೆ ದೊರೆಯಲಿದೆ. ಸೆಕೆಂಡ್ ಕ್ಲಾಸ್ (ಸಿಟ್ಟಿಂಗ್)ಗೆ ತತ್ಕಾಲ್ ಟಿಕೆಟ್ ದರ ಮೂಲ ದರದ ಶೇ.10ರಷ್ಟು ಅಂದರೆ ಸುಮಾರು 10 ರಿಂದ 15 ರೂ.ವರೆಗೆ ಇರಲಿದೆ.
ಪ್ಯಾಸೆಂಜರ್ ಜೊತೆಗೆ ಎ.ಸಿ. ಮೊದಲನೇ ದರ್ಜೆ ಪ್ರಯಾಣಕ್ಕೂ ತತ್ಕಾಲ್ ಸೌಲಭ್ಯ ವಿಸ್ತಣರೆ ಮಾಡಲು ರೈಲ್ವೇ ಇಲಾಖೆ ಚಿಂತನೆ ನಡೆಸುತ್ತಿದೆ. ಈ ಯೋಜನೆಗಳು ಶೀಘ್ರವೇ ಪ್ರಯಾಣಿಕರಿಗೆ ಲಭ್ಯವಾಗಲಿವೆ.
-
ಭಾರತದ ಏಕೈಕ ರೈಲು ಸಂಪರ್ಕವಿಲ್ಲದ ರಾಜ್ಯ ಸಿಕ್ಕಿಂ: ಕಾರಣ ಮತ್ತು ಪ್ರಯಾಣ ಮಾರ್ಗಗಳ ವಿವರ -
Vande Bharat Sleeper: ಉತ್ಪಾದನೆ ಗುರಿ ತಲುಪದ ಬೆಂಗಳೂರು-ಚೆನ್ನೈ ಕಂಪನಿಗಳು, ಸ್ಲೀಪರ್ ರೈಲು ವಿತರಣೆ ವಿಳಂಬ -
Mysuru-Nanjangud special train: ನಂಜನಗೂಡು ದೊಡ್ಡ ಜಾತ್ರೆಗೆ ಮೈಸೂರಿನಿಂದ ವಿಶೇಷ ರೈಲು ಸೇವೆ: ಸಚಿವ ವಿ.ಸೋಮಣ್ಣ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ












Click it and Unblock the Notifications