ಐಟಿ ದಾಳಿಗಳು ಕಾನೂನಾತ್ಮಕವಾಗಿದ್ದು, ರಾಜಕೀಯ ಪ್ರೇರಿತವಲ್ಲ: ಮೋದಿ

ನವದೆಹಲಿ, ಏ.20: ಐಟಿ ದಾಳಿಯನ್ನು ಕೇಂದ್ರ ಸರ್ಕಾರವೇ ಮಾಡಿಸುತ್ತಿದೆ ಎನ್ನುವ ಆರೋಪಗಳ ಕುರಿತು ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ಐಟಿ ದಾಳಿಗಳು ರಾಜಕೀಯ ಪ್ರೇರಿತವಲ್ಲ ಕಾನೂನಾತ್ಮಕವಾಗಿದ್ದು ಎಂದು ಹೇಳಿದ್ದಾರೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಆದಾಯ ತೆರಿಗೆ ಇಲಾಖೆ ದಾಳಿಗಳು ರಾಜಕೀಯ ದ್ವೇಷದ ಭಾಗವಲ್ಲ ಅದಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ, ಎಲ್ಲವೂ ಕಾನೂನು ಪ್ರಕಾರವೇ ನಡೆಯುತ್ತದೆ ಎಂದರು.

ಮಾಲೇಗಾಂವ್‌ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಸಾಧ್ವಿ ಪ್ರಜ್ಞಾ ಸಿಂಗ್‌ರನ್ನು ಭೋಪಾಲ್‌ನಿಂದ ಲೋಕಸಭಾ ಚುನಾವಣೆ ಕಣಕ್ಕಿಳಿಸಿರುವ ಕುರಿತು ಸಮರ್ಥಿಸಿಕೊಂಡ ಮೋದಿ, ಯಾರು ಹಿಂದುಗಳನ್ನು ಭಯೋತ್ಪಾದಕರು ಎಂದು ಬಿಂಬಿಸುತ್ತಾರೋ ಅಂತವರಿಗೆಲ್ಲ ಇವರೊಂದು ಚಿಹ್ನೆಯಾಗಿದ್ದಾರೆ.

Tax Raids Happening As Per Law Not Part Of Political Vendetta PM Modi

ಅವರು ಕಾಂಗ್ರೆಸ್‌ಗೆ ಕಠಿಣ ಸ್ಪರ್ಧೆ ನೀಡಲಿದ್ದಾರೆ. ಸಾಧ್ವಿ ಪ್ರಜ್ಞಾರನ್ನು ಅಭ್ಯರ್ಥಿಯನ್ನಾಗಿ ಮಾಡಿರುವ ಈ ನಿರ್ಧಾರವು ಇಡೀ ಧರ್ಮ ಮತ್ತು ಸಂಸ್ಕೃತಿಯನ್ನು ಭಯೋತ್ಪಾದನೆಗೆ ಹೋಲಿಸುವ ವ್ಯಕ್ತಿಗಳಿಗೆ ನೀಡಿದ ಸೂಕ್ತ ಉತ್ತರವಾಗಿದೆ ಎಂದು ಹೇಳಿದರು.

ಬಿಜೆಪಿಯು ಮತ್ತು ಅಧಿಕ ಸ್ಥಾನಗಳೊಂದಿಗೆ ಅಧಿಕಾರಕ್ಕೆ ಮರಳಿ ಬರುತ್ತದೆ ಮತ್ತು ಎನ್‌ಡಿಎ ಮೈತ್ರಿಯು 2014ಕ್ಕಿಂತಲೂ ಈ ಭಾರಿ ಉತ್ತಮವಾಗಿರುತ್ತದೆ. ಬಹುಮತದೊಂದಿಗೆ ಜಯ ಸಾಧಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಾಧ್ವಿ ಪ್ರಜ್ಞಾ ಸಿಂಗ್‌ರನ್ನು ಮಧ್ಯಪ್ರದೇಶದ ಭೂಪಾಲ್‌ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದ್ದು, ಎದುರಾಳಿಯಾಗಿ ಕಾಂಗ್ರೆಸ್‌ ನಾಯಕ ದಿಗ್ವಿಜಯ್‌ ಸಿಂಗ್‌ ಕಣದಲ್ಲಿದ್ದಾರೆ, ಪ್ರಜ್ಞಾ ಗೆಲುವು ಸಾಧಿಸುವುದು ನಿಶ್ಚಿತವೆಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+