ಟಿಡಿಎಸ್, ಟಿಸಿಎಸ್ ಕಡಿತದ ದರದಲ್ಲಿ ಶೇಕಡಾ 25ರಷ್ಟು ಇಳಿಕೆ
ನವ ದೆಹಲಿ, ಮೇ 13: ಪ್ರಸ್ತುತ ಟಿಡಿಎಸ್ (Tax deducted at source) ಹಾಗೂ ಟಿಸಿಎಸ್ (Tax collected at source) ಕಡಿತದ ದರದಲ್ಲಿ ಶೇಕಡ 25ರಷ್ಟು ಇಳಿಕೆ ಮಾಡಲಾಗಿದೆ. ಮುಂದಿನ ವರ್ಷದ ಮಾರ್ಚ್ವರೆಗೆ ಈ ನಿಯಮ ಅನ್ವಯ ಆಗಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
Recommended Video
ಪ್ರಧಾನಿ ನರೇಂದ್ರ ಮೋದಿ ನಿನ್ನೆ 20 ಲಕ್ಷ ಕೋಟಿ ರೂಪಾಯಿಗಳ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದ್ದರು. ಇಂದು ಅದರ ವಿವರಣೆಯನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನೀಡಿದರು.
''ಟಿಡಿಎಸ್ ಮತ್ತು ಟಿಸಿಎಸ್ ಹೊಸ ಕ್ರಮದಿಂದ ಸರ್ಕಾರಕ್ಕೆ 50,000 ಕೋಟಿ ರೂಪಾಯಿಗಳ ಹೊರೆಯಾಗಲಿದೆ'' ಎಂದು ನಿರ್ಮಲಾ ಸೀತರಾಮನ್ ತಿಳಿಸಿದ್ದಾರೆ.

ಕ್ಯಾಂಟ್ರಾಕ್ಟ್ ಪೇಮೆಂಟ್, ವೃತ್ತಿಪರ ಶುಲ್ಕಗಳು, ಬಡ್ಡಿ, ಬಾಡಿಗೆ, ಬ್ರೋಕರೇಜ್, ದಲ್ಲಾಳಿ ಆದಾಯ ಮತ್ತು ಡಿವಿಡೆಂಡ್ ಟಿಡಿಎಸ್ ಕಡಿತಕ್ಕೆ ಸೇರಿಕೊಳ್ಳಲಿದೆ. ಈ ಕಡಿತವು ನಾಳೆಯಿಂದ ಜಾರಿಗೆ ಬರಲಿದ್ದು, 2020-21ರ ಆರ್ಥಿಕ ವರ್ಷದ ಉಳಿದ ಭಾಗಕ್ಕೆ ಅನ್ವಯಿಸುತ್ತದೆ.
ಹಣಕಾಸು ಪ್ಯಾಕೇಜ್ ಮೊದಲ ಭಾಗವನ್ನು ಅನಾವರಣಗೊಳಿಸಿದ ನಿರ್ಮಲಾ ಸೀತಾರಾಮನ್, ನೌಕರರ ಕಡ್ಡಾಯ ಭವಿಷ್ಯ ನಿಧಿ ಕಡಿತವನ್ನು ಸರ್ಕಾರವು ಶೇಕಡಾ 12 ರಿಂದ 10 ಕ್ಕೆ ಇಳಿಸಿದೆ ಎಂದು ತಿಳಿಸಿದ್ದಾರೆ. ಸರ್ಕಾರಿ ಮತ್ತು ಸಾರ್ವಜನಿಕ ವಲಯದ ಉದ್ಯೋಗಿಗಳಿಗೆ ಭವಿಷ್ಯ ನಿಧಿ ಕಡಿತವು ಶೇಕಡಾ 12 ರಷ್ಟು ಮುಂದುವರೆಯಲಿದೆ.
2019-20ನೇ ಸಾಲಿನ ಎಲ್ಲಾ ಐಟಿ ರಿಟನ್ಸ್ ದಿನಾಂಕವನ್ನು 2020 ಜುಲೈ 31 ಮತ್ತು 2020 ಅಕ್ಟೋಬರ್ 31 ರಿಂದ 2020 ನವೆಂಬರ್ 30 ರವರೆಗೆ ವಿಸ್ತರಿಸಿದೆ. ಟ್ಯಾಕ್ಸ್ ಆಡಿಟ್ಸ್ ದಿನಾಂಕವನ್ನು ಸೆಪ್ಟೆಂಬರ್ 30, 2020 ರಿಂದ 31 ಅಕ್ಟೋಬರ್ 2020ಕ್ಕೆ ಮುಂದೂಡಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications