Get Updates
Get notified of breaking news, exclusive insights, and must-see stories!

Breaking: ತೀಸ್ತಾ ಕೇಸ್; ಜಾಮೀನು ನೀಡದ ಅಪರಾಧವಲ್ಲ ಎಂದ ಸುಪ್ರೀಂ

ನವದೆಹಲಿ, ಸೆಪ್ಟೆಂಬರ್ 2: ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅವರನ್ನು ಎರಡು ತಿಂಗಳಿಗೂ ಹೆಚ್ಚು ಕಾಲ ಗುಜರಾತ್‌ನಲ್ಲಿ ಬಂಧನದಲ್ಲಿ ಇರಿಸಿರುವ ಬಗ್ಗೆ ಸುಪ್ರೀಂ ಕೋರ್ಟ್ ಗಂಭೀರ ಕಳವಳ ವ್ಯಕ್ತಪಡಿಸಿದೆ. ಆರು ವಾರಗಳ ಕಾಲ ಜಾಮೀನು ಅರ್ಜಿ ವಿಚಾರಣೆ ಮುಂಡೂಡಿದ ಬಗ್ಗೆ ಗುಜರಾತ್ ಹೈಕೋರ್ಟ್‌ಗೆ ಪ್ರಶ್ನಿಸಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ನೇತೃತ್ವದ ಸುಪ್ರೀಂ ಕೋರ್ಟ್ ಪೀಠವು, ಈ ಪ್ರಕರಣದಲ್ಲಿ ಜಾಮೀನು ನೀಡಲಾಗದ ಯಾವುದೇ ಅಪರಾಧವಿಲ್ಲ. ಅದು ಕೂಡ ಮಹಿಳೆಗೆ ಎಂದು ಗಮನಿಸಿದೆ. ತೀಸ್ತಾ ಸೆಟಲ್ವಾಡ್ ಎರಡು ತಿಂಗಳಿಗೂ ಹೆಚ್ಚು ಕಾಲ ಜೈಲಿನಲ್ಲಿದ್ದರೂ ಯಾವುದೇ ಆರೋಪಪಟ್ಟಿ ಸಲ್ಲಿಸಿಲ್ಲ ಎಂದು ನ್ಯಾಯಾಧೀಶರು ಹೇಳಿದರು.

ಅರ್ಜಿದಾರರ ವಿರುದ್ಧ ಸಲ್ಲಿಸಲಾದ ಎಫ್‌ಐಆರ್‌ನಲ್ಲಿ ಸುಪ್ರೀಂಕೋರ್ಟ್‌ ಗಮನಿಸಿರುವುದನ್ನು ಹೊರತಾಗಿ ಹೆಚ್ಚಿನದ್ದನ್ನು ಹೇಳಲಾಗಿಲ್ಲ ಎಂದು ನ್ಯಾಯಪೀಠ ಒತ್ತಿ ಹೇಳಿದೆ.

Teesta Setalvad Case: No Reason To Deny Bail Says Supreme Court

ತೀಸ್ತಾ ಸೆಟಲ್ವಾಡ್ ಅವರ ಮನವಿ ಸಂಬಂಧ ಆಗಸ್ಟ್ 2ರಂದು ನೋಟಿಸ್‌ ನೀಡಿದ್ದ ಗುಜರಾತ್‌ ಹೈಕೋರ್ಟ್‌ ವಿಚಾರಣೆಯನ್ನು ಅರು ವಾರಗಳ ನಂತರ ಸೆಪ್ಟೆಂಬರ್‌ 19ಕ್ಕೆ ಪಟ್ಟಿ ಮಾಡಿತ್ತು. ಈ ಆದೇಶದ ವಿರುದ್ಧ ವಿಚಾರಣೆ ವೇಳೆ ಪೀಠವು ಗುಜರಾತ್ ಹೈಕೋರ್ಟ್‌ ವರ್ತನೆ ಬಗ್ಗೆ ಕಟುವಾಗಿ ಅವಲೋಕನಗಳನ್ನು ಮಾಡಿದೆ.

ನ್ಯಾಯಮೂರ್ತಿ ಎಸ್ ರವೀಂದ್ರ ಭಟ್ ಮತ್ತು ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರನ್ನೊಳಗೊಂಡ ಪೀಠವು ತೀಸ್ತಾ ಸೆಟಲ್ವಾಡ್ ಅವರ ನ್ಯಾಯಾಂಗ ಬಂಧನಕ್ಕೆ ಸಂಬಂಧಿಸಿದ ಹಲವಾರು ಪ್ರಶ್ನೆಗಳನ್ನು ಎತ್ತಿತು.

"ಆಕೆ ಮಹಿಳೆ. ಹೈಕೋರ್ಟ್ ನೋಟಿಸ್ ನೀಡಿ ಆರು ವಾರಗಳ ನಂತರ ಅನ್ನು ಹೇಗೆ ವಿಚಾರಣೆಯನ್ನು ಮುಂದೂಡಿತು? ಗುಜರಾತ್ ಹೈಕೋರ್ಟ್‌ನಲ್ಲಿ ಅದು ಪ್ರಮಾಣಿತ ಅಭ್ಯಾಸವೇ?. ಅಂತಹ ಪ್ರಕರಣದಲ್ಲಿ ಮಹಿಳೆಯೊಬ್ಬರು ಭಾಗಿಯಾಗಿದ್ದರೇ ಹೈಕೋರ್ಟ್ ಹೀಗೆ ಜಾಮೀನು ಅರ್ಜಿಯನ್ನು ಮುಂದೂಡಿದ ಉದಾಹರಣೆಗಳನ್ನು ನಮಗೆ ನೀಡಿ" ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದರು.

Teesta Setalvad Case: No Reason To Deny Bail Says Supreme Court

2002ರ ಗುಜರಾತ್ ಗಲಭೆಗೆ ಸಂಬಂಧಿಸಿದ ಪ್ರಕರಣಗಳನ್ನು ದಾಖಲಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ ಮೇಲೆ ಜೂನ್ 25 ರಿಂದ ತೀಸ್ತಾ ಸೆಟಲ್ವಾಡ್ ಬಂಧನದಲ್ಲಿದ್ದಾರೆ.

"ಈ ಪ್ರಕರಣದಲ್ಲಿ ಕಾನೂನುಬಾಹಿರ ಚಟುವಟಿಕೆಗಳು (ತಡೆ) ಕಾಯಿದೆ ಮತ್ತು ಭಯೋತ್ಪಾದನೆ ತಡೆ ಕಾಯ್ದೆಯಂತಹ ಜಾಮೀನು ನೀಡಲಾಗದ ಪ್ರಕರಣಗಳನ್ನು ಹಾಕುವ ಯಾವುದೇ ಅಪರಾಧವಿಲ್ಲ. ಇವು ಸಾಮಾನ್ಯ ಅಪರಾಧಗಳು ಮತ್ತು ಈ ಮಹಿಳೆಯನ್ನು ಉತ್ತಮವಾಗಿ ನಡೆಸಿಕೊಳ್ಳಬೇಕು. ಆಕೆ ಅದಕ್ಕೆ ಅರ್ಹರು" ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದರು.

ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ನಿನ್ನೆಯ ವಿಚಾರಣೆಯನ್ನು ಮುಂದೂಡುವಂತೆ ಕೋರಿದರು. "ಈ ಎಲ್ಲಾ ವಾದಗಳನ್ನು ಹೈಕೋರ್ಟ್‌ನಲ್ಲಿ ಮಾಡಬೇಕೇ ಹೊರತು ಸುಪ್ರೀಂ ಕೋರ್ಟ್‌ನಲ್ಲಿ ಅಲ್ಲ. ಅದು ನನ್ನ ಪ್ರಾಥಮಿಕ ಆಕ್ಷೇಪಣೆ" ಎಂದು ಮೆಹ್ತಾ ಹೇಳಿದರು.

ಸೆಟಲ್ವಾಡ್ ಪರ ವಕೀಲರಾದ ಹಿರಿಯ ವಕೀಲ ಕಪಿಲ್ ಸಿಬಲ್, "ನಾನು ಎಫ್‌ಐಆರ್ ಅನ್ನು ಸವಾಲು ಮಾಡುತ್ತಿದ್ದೇನೆ. ಇಲ್ಲಿ ಎಫ್‌ಐಆರ್ ಇರುವಂತಿಲ್ಲ. ನಕಲಿ ದಾಖಲೆ ಏನು ಎಂಬುದನ್ನು ಎಫ್‌ಐಆರ್ ಬಹಿರಂಗಪಡಿಸುವುದಿಲ್ಲ" ಎಂದು ವಾದಿಸಿದರು.

ಕಳೆದ ಆಗಸ್ಟ್ 3 ರಂದು ಗುಜರಾತ್ ಹೈಕೋರ್ಟ್ ತೀಸ್ತಾ ಜಾಮೀನು ಅರ್ಜಿಯ ಕುರಿತು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ, ಸೆಪ್ಟೆಂಬರ್ 19 ರಂದು ಪ್ರಕರಣದ ವಿಚಾರಣೆಯನ್ನು ನಿಗದಿಪಡಿಸಿತ್ತು. ಇದಕ್ಕೂ ಮೊದಲು, ಜುಲೈ 30 ರಂದು, ಅಹಮದಾಬಾದ್‌ನ ಸೆಷನ್ಸ್ ನ್ಯಾಯಾಲಯವು ಪ್ರಕರಣದಲ್ಲಿ ತೀಸ್ತಾ ಸೆಟಲ್ವಾಡ್ ಮತ್ತು ಮಾಜಿ ಪೊಲೀಸ್ ಮಹಾನಿರ್ದೇಶಕ ಆರ್‌ಬಿ ಶ್ರೀಕುಮಾರ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತು. ಇವರನ್ನು ಬಿಡುಗಡೆ ಮಾಡಿದರೆ ಒಬ್ಬ ವ್ಯಕ್ತಿಯು ನಿರ್ಭಯವಾಗಿ ಆರೋಪಗಳನ್ನು ಮಾಡಿ ತಪ್ಪಿಸಿಕೊಳ್ಳಬಹುದು ಎಂಬ ಸಂದೇಶವನ್ನು ನೀಡುತ್ತದೆ ಎಂದು ಹೇಳಿದ್ದರು.

ತೀಸ್ತಾ ಸೆಟಲ್ವಾಡ್ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಮತ್ತೆ ಕೈಗೆತ್ತಿಕೊಳ್ಳಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+