ಸದನದಲ್ಲಿ ಪೆಪ್ಪರ್ ಸ್ಪ್ರೇ ಎರಚಿ ಗದ್ದಲ ಮಾಡಿದ ಸಂಸದ
ನವದೆಹಲಿ, ಫೆ.13 : ಲೋಕಸಭೆಯಲ್ಲಿ ಗುರುವಾರ ತೆಲಂಗಾಣ ವಿವಾದದ ಕಿಚ್ಚು ಹೆಚ್ಚಾಗಿದ್ದು, ವಿಜಯವಾಡ ಸಂಸದ ಎಲ್ ರಾಜಗೋಪಾಲ್ ಸದನದಲ್ಲಿ ಪೆಪ್ಪರ್ ಸ್ಪ್ರೇ ಎರಚುವ ಮೂಲಕ ಲೋಕಸಭೆ ಕಲಾಪಕ್ಕೆ ಅಡ್ಡಿ ಉಂಟುಮಾಡಿದ್ದಾರೆ. ಇದರಿಂದ ಸ್ಪೀಕರ್ ಮೀರಾ ಕುಮಾರ್ ತಕ್ಷಣ ಸದನದಿಂದ ಹೊರ ನಡೆದರು.
ಗುರುವಾರದ ಲೋಕಸಭೆ ಕಲಾಪ ಮಧ್ಯಾಹ್ನ 12 ಗಂಟೆಗೆ ಆರಂಭವಾಯಿತು. ಸದನದಲ್ಲಿ ವಿವಾದಿತ ತೆಲಂಗಾಣಾ ಮಸೂದೆ ಮಂಡನೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ತೆಲಂಗಾಣಾ ಮಸೂಧೆ ಮಂಡನೆ ಮಾಡಲು ಸಿದ್ಧಗೊಳ್ಳುತ್ತಿದ್ದಂತೆ ಸಂಸದ ರಾಜಗೋಪಾಲ್ ಪೆಪ್ಪರ್ ಸ್ಪ್ರೇ ಎರಚುವ ಮೂಲಕ ಕಲಾಪಕ್ಕೆ ಅಡ್ಡಿ ಪಡಿಸಿದರು.

ಪೆಪ್ಪರ್ ಸ್ಪ್ರೇ ಎರಚಿದ್ದರಿಂದ ಸ್ಪೀಕರ್ ಮೀರಾ ಕುಮಾರ್ ಸದನದಿಂದ ಹೊರ ನಡೆದರು. ಸಂಸದರು ಕರವಸ್ತ್ರದಿಂದ ಮುಖ ಮುಚ್ಚಿಕೊಂಡರು. ತಕ್ಷಣ ಸದನಕ್ಕೆ ವೈದ್ಯರು ಆಗಮಿಸಿದರು. ಪೆಪ್ಪರ್ ಸ್ಪ್ರೇ ಎರಚಿದ್ದರಿಂದ ಸದನದಲ್ಲಿ ತಳ್ಳಾಟ ನಡೆದು ಮೂವರು ಸಂಸದರು ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕಳುಹಿಸಿಕೊಡಲಾಯಿತು. [ತೆಲಂಗಾಣಕ್ಕೆ ಮಸೂದೆ ಅಸ್ತು ಎಂದ ಸಚಿವ ಸಂಪುಟ]
ರಾಜಗೋಪಾಲ್ ಜೊತೆಗಿದ್ದ ಸೀಮಾಂಧ್ರದ ಭಾಗದ ಸಂಸದರು, ಸದನದ ಬಾವಿಗಿಳಿದು ಸಭಾಧ್ಯಕ್ಷರ ಮೈಕ್ರೋಫೋನ್ ಮುರಿಯಲು ಪ್ರಯತ್ನಿಸಿದ್ದಾರೆ. ಸಂಸದರ ಈ ಗದ್ದಲದಿಂದ ಸದನದಲ್ಲಿ ಕೆಲವು ಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು. ಇದರಿಂದ ಸದನವನ್ನು ಮುಂದೂಡಬೇಕಾಯಿತು. ಸದನದೊಳಗೆ ಪೆಪ್ಪರ್ ಸ್ಪ್ರೇ ಎರಚಿದ್ದನ್ನು ಹಲವು ಸಂಸದರು ತೀವ್ರವಾಗಿ ಖಂಡಿಸಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಟಿಎಂಸಿ ಪಕ್ಷದ ದಿನೇಶ್ ತ್ರಿವೇದಿ ಹೇಳಿದ್ದಾರೆ.
ಸಂಸತ್ತಿನಲ್ಲಿ ಇಂತಹ ಪ್ರಸಂಗ ನಡೆಯುವಾಗ ಪ್ರಧಾನಿ ಮನಮೋಹನ್ ಸಿಂಗ್, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿ ಸದನದಲ್ಲಿ ಹಾಜರಿರಲಿಲ್ಲ ಎಂದು ತಿಳಿದುಬಂದಿದೆ. ಇದೇ ವೇಳೆ ಸಂಸದರ ಕೈಯಲ್ಲಿ ಚಾಕು ಇರುವುದನ್ನು ನೋಡಿದ್ದೇನೆ ಎಂದು ಪ್ರೇಕ್ಷಕರೊಬ್ಬರು ಹೇಳಿದ್ದಾರೆ.
17 ಸಂಸದರ ಅಮಾನತು : ತೆಲಂಗಾಣ ರಾಜ್ಯ ರಚನೆ ವಿರೋಧಿಸಿ ಸದನದಲ್ಲಿ ಗದ್ದಲವೆಬ್ಬಿಸಿ, ಸದನದ ಕಲಾಪಕ್ಕೆ ತಡೆ ಉಂಟುಮಾಡಿದ ಆಂಧ್ರಪ್ರದೇಶದ 17 ಮಂದಿ ಸಂಸದರನ್ನು ಲೋಕಸಭಾ ಸ್ಪೀಕರ್ ಮೀರಾ ಕುಮಾರ್ ಅಮಾನತುಗೊಳಿಸಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications