ದೆಹಲಿ ಸಿಎಂ ಜೊತೆ ಚಂದ್ರಶೇಖರ ರಾವ್ ಪಂಜಾಬ್ ಪ್ರವಾಸ
ನವದೆಹಲಿ ಮೇ 22: ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ ರಾವ್ ಭಾನುವಾರ ಪಂಜಾಬ್ಗೆ ಭೇಟಿ ನೀಡಿದರು, ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆಯಲ್ಲಿ ಕಳೆದ ವರ್ಷ ಪ್ರಾಣ ಕಳೆದುಕೊಂಡ ರೈತರ ಕುಟುಂಬಗಳನ್ನು ಭೇಟಿ ಮಾಡಿದರು. ಚಂದ್ರಶೇಖರ ರಾವ್ ಪಂಜಾಬ್ ಭೇಟಿಗೆ ಕಾರಣ ಕುತೂಹಲ ಮೂಡಿಸಿದೆ.
2024 ರ ಲೋಕಸಭೆ ಚುನಾವಣೆಗೆ ಮುನ್ನ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ರಾಷ್ಟ್ರ ರಾಜಕಾರಣದಲ್ಲಿ ತಮ್ಮ ಹಿಡಿತವನ್ನು ಬಲಪಡಿಸಲು ಹೊರಟಿದ್ದಾರೆ. ಅವರು ಇಡೀ ದೇಶಾದ್ಯಂತ ಪ್ರವಾಸಕ್ಕೆ ಮುಂದಾಗಿದ್ದು, ಇಂದು ಅವರು ದೆಹಲಿ ಸಿಎಂ ಕೇಜ್ರಿವಾಲ್ ಜೊತೆ ಪಂಜಾಬ್ ಪ್ರವಾಸ ಕೈಗೊಂಡಿದ್ದಾರೆ.
ರೈತ ಚಳವಳಿಯಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳನ್ನು ಭೇಟಿ ಮಾಡುವುದಲ್ಲದೇ ಅವರಿಗೆ ಆರ್ಥಿಕ ನೆರವು ನೀಡಲಿದ್ದಾರೆ. ಚಂದ್ರಶೇಖರ ರಾವ್ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರೊಂದಿಗೆ ಇಂದು ಚಂಡೀಗಢಕ್ಕೆ ಭೇಟಿ ನೀಡಿದರು. ಕೇಂದ್ರದ ಮೂರು ಕೃಷಿ ಕಾನೂನುಗಳ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಪ್ರಾಣ ಕಳೆದುಕೊಂಡ 600 ರೈತರ ಕುಟುಂಬಗಳನ್ನು ಭೇಟಿಯಾದರು.

ಚಂದ್ರಶೇಖರ್ ರಾವ್ ಭೇಟಿ ವಿಶೇಷ ಏಕೆ?; 2019ರಲ್ಲಿ ಮಮತಾ ಬ್ಯಾನರ್ಜಿ ರಾಷ್ಟ್ರೀಯ ರಾಜಕೀಯದಲ್ಲಿ ತಮ್ಮ ಹಿಡಿತವನ್ನು ಬಲಪಡಿಸಲು ದೇಶದ ಹಲವು ರಾಜ್ಯಗಳಿಗೆ ಪ್ರವಾಸ ಕೈಗೊಂಡರು. ಇದೀಗ ಮಮತಾ ಅವರಂತೆ ಕೆಸಿಆರ್ ಕೂಡ ರಾಷ್ಟ್ರ ರಾಜಕಾರಣದಲ್ಲಿ ತಮ್ಮ ಹಿಡಿತವನ್ನು ಗಟ್ಟಿ ಮಾಡಿಕೊಳ್ಳಲು ಸಜ್ಜಾಗಿದ್ದಾರೆ. ಬಿಜೆಪಿಯೇತರ ಮತ್ತು ಕಾಂಗ್ರೆಸ್ಸೇತರ ಮೈತ್ರಿಕೂಟ ರಚನೆಗೆ ಶ್ರಮಿಸುತ್ತಿದ್ದಾರೆ. ಬಿಜೆಪಿಯನ್ನು ಸೋಲಿಸುವ ಉದ್ದೇಶದಿಂದ ಯಾರೊಂದಿಗೂ ಕೈಜೋಡಿಸುವುದಿಲ್ಲ ಎಂದು ಅವರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ.

ಚಂದ್ರಶೇಖರ ರಾವ್ ಪಂಜಾಬ್ ಮಾತ್ರವಲ್ಲ, ಕರ್ನಾಟಕಕ್ಕೂ ಆಗಮಿಸಲಿದ್ದಾರೆ. ಇದಕ್ಕೂ ಮುನ್ನ ಅವರು ದೆಹಲಿಯಲ್ಲಿ ಹಲವು ರಾಜಕೀಯ ಪಕ್ಷಗಳ ಮುಖಂಡರನ್ನು ಭೇಟಿ ಮಾಡಿದ್ದರು. ಚಂದ್ರಶೇಖರ ರಾವ್ ಭಾನುವಾರ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸಹ ಭೇಟಿ ಮಾಡಿದ್ದಾರೆ.
ಮೇ. 26ರಂದು ಕರ್ನಾಟಕದಲ್ಲಿ ಎಚ್. ಡಿ. ದೇವೇಗೌಡರನ್ನು ಭೇಟಿ ಮಾಡಲಿದ್ದಾರೆ. ಇದಾದ ಬಳಿಕ ಮೇ 27ರಂದು ಮಹಾರಾಷ್ಟ್ರಕ್ಕೆ ತೆರಳಿ ಸಮಾಜ ಸೇವಕ ಅಣ್ಣಾ ಹಜಾರೆ ಭೇಟಿ ಮಾಡಲಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications