ದೂರಸಂಪರ್ಕ ಸಚಿವ ರವಿಶಂಕರ್ ಪ್ರಸಾದ್ಗೆ ಸ್ವಪಕ್ಷದವರಿಂದಲೇ 'ಕೌಂಟರ್'
ನವದೆಹಲಿ, ಜೂನ್ 26: ಸಾಮಾನ್ಯವಾಗಿ ಲೋಕಸಭೆಯಲ್ಲಿ ಆಡಳಿತ ಪಕ್ಷ ಮತ್ತು ವಿರೋಧಪಕ್ಷದವರ ನಡುವೆ ವಾದ ವಿವಾದಗಳು ನಡೆಯುತ್ತವೆ. ಆಡಳಿತ ಪಕ್ಷದ ನಾಯಕರು ಉತ್ತರ ನೀಡುವಾಗ ಅವರಿಗೆ ಸ್ವಪಕ್ಷದವರು ಹಾಗೂ ಸರ್ಕಾರದ ಮಿತ್ರ ಪಕ್ಷಗಳಿಂದ ಬೆಂಬಲ ದೊರಕುತ್ತದೆ.
ಆದರೆ, ಲೋಕಸಭೆಯಲ್ಲಿ ಬುಧವಾರ ಇದಕ್ಕೆ ವಿರುದ್ಧವಾದ ಸನ್ನಿವೇಶ ಕಂಡುಬಂತು. ದೂರಸಂಪರ್ಕ ಖಾತೆ ಸಚಿವ ರವಿಶಂಕರ್ ಪ್ರಸಾದ್ ಅವರು ತಮ್ಮ ಪಕ್ಷದ ಸಂಸದರೊಬ್ಬರಿಂದಲೇ ತರಾಟೆಗೆ ಒಳಗಾದರು. ನೈಸರ್ಗಿಕ ವಿಪತ್ತುಗಳಂತಹ ಸನ್ನಿವೇಶ ಉಂಟಾದಾಗ ಸರ್ಕಾರಿ ಸ್ವಾಮ್ಯದ ದೂರಸಂಪರ್ಕ ಸಂಸ್ಥೆಗಳು ಮಾತ್ರ ಗ್ರಾಹಕರಿಗೆ ಉಚಿತ ಸೇವೆಗಳನ್ನು ಒದಗಿಸುತ್ತದೆ ಎಂದು ಸಚಿವರು ಹೇಳಿದಾಗ ಅದಕ್ಕೆ ಬಿಜೆಪಿ ಸಂಸದ ರಾಜೀವ್ ಪ್ರತಾಪ್ ರೂಡಿ ಆಕ್ಷೇಪ ವ್ಯಕ್ತಪಡಿಸಿದರು.
ಪ್ರಶ್ನೋತ್ತರ ವೇಳೆಯಲ್ಲಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ರವಿಶಂಕರ್ ಪ್ರಸಾದ್, ಪ್ರವಾಹ ಮತ್ತು ಸೈಕ್ಲೋನ್ನಂತಹ ನೈಸರ್ಗಿಕ ವಿಕೋಪಗಳು ಉಂಟಾದ ಸಂದರ್ಭದಲ್ಲಿ ಸರ್ಕಾರಿ ಸ್ವಾಮ್ಯದ ದೂರಸಂಪರ್ಕ ಸಂಸ್ಥೆಗಳಾದ ಬಿಎಸ್ಎನ್ಎಲ್ ಮತ್ತು ಎಂಟಿಎನ್ಎಲ್ ಮಾತ್ರ ಗ್ರಾಹಕರಿಗೆ ಉಚಿತ ಸೇವೆ ಒದಗಿಸುತ್ತವೆ ಎಂದರು.

ಆಗ ರಾಜೀವ್ ಪ್ರತಾಪ್ ರೂಡಿ, ಇತರೆ ಖಾಸಗಿ ದೂರಸಂಪರ್ಕ ಸಂಸ್ಥೆಗಳೂ ಉಚಿತ ಸೇವೆಗಳನ್ನು ಒದಗಿಸುತ್ತವೆ ಎಂದು ತಿಳಿಸಿದರು. ಆಗ ಪ್ರಸಾದ್, ಒಂದೆರಡು ದಿನ ಮಾತ್ರ ಖಾಸಗಿ ಸಂಸ್ಥೆಗಳು ಉಚಿತ ಸೇವೆ ನೀಡುತ್ತವೆ. ಆದರೆ, ಬಿಎಸ್ಎನ್ಎಲ್ ಮತ್ತು ಎಂಟಿಎನ್ಎಲ್ ವಿಪತ್ತಿನ ಸಮಸ್ಯೆ ನಿವಾರಣೆ ಆಗುವವರೆಗೂ ಉಚಿತ ಸೌಲಭ್ಯ ನೀಡುತ್ತವೆ ಎಂದು ಪ್ರತಿಪಾದಿಸಿದರು.
ಬಿಎಸ್ಎನ್ಎಲ್ ಮತ್ತು ಎಂಟಿಎನ್ಎಲ್ಗಳಲ್ಲಿ ಪದೇ ಪದೇ ಕಾಲ್ ಡ್ರಾಪ್ ಸಮಸ್ಯೆ ಎದುರಾಗುತ್ತದೆ. ಆದರೆ, ಅದಕ್ಕೆ ಹಣವನ್ನೂ ಕಡಿತಗೊಳಿಸುತ್ತಾರೆ. ಸರ್ಕಾರಿ ಸ್ವಾಮ್ಯದ ಕಂಪೆನಿಗಳಾಗಿರುವುದರಿಂದ ಜನರು ನೆಟ್ವರ್ಕ್ ಸಿಗದೆ ಇದ್ದಾಗ ಸರ್ಕಾರವನ್ನು ಬೈದುಕೊಳ್ಳುತ್ತಾರೆ ಎಂದು ರೂಡಿ ದೂರಿದರು.
ಆಗ ವಿರೋಧಪಕ್ಷದ ಕೆಲವು ಸದಸ್ಯರು, ಈ ಸಮಸ್ಯೆ ಬಗೆಹರಿಸಲು ರಾಜೀವ್ ರೂಡಿ ಅವರನ್ನು ರಾಜ್ಯ ಖಾತೆ ಸಚಿವರನ್ನಾಗಿ ಮಾಡಬೇಕು ಎಂದು ಹೇಳಿದರು. ರಾಜೀವ್ ರೂಡಿ ಅವರು ಕಳೆದ ಬಿಜೆಪಿ ಸರ್ಕಾರದಲ್ಲಿ ರಾಜ್ಯ ಖಾತೆ ಸಚಿವರಾಗಿದ್ದರು.
ಸರ್ಕಾರಿ ಸ್ವಾಮ್ಯದ ಕಂಪೆನಿಗಳು ಉತ್ತಮ ಆರ್ಥಿಕ ಆರೋಗ್ಯ ಹೊಂದುವುದು ಮುಖ್ಯ ಎಂದು ರವಿಶಂಕರ್ ಪ್ರಸಾದ್ ಹೇಳಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications